Webdunia - Bharat's app for daily news and videos

Install App

ಅನಿಲ ಸೋರಿಕೆಯಿಂದ ಭೀಕರ ಸ್ಫೋಟ! 4 ಸಾವು, ಒಬ್ಬರಿಗೆ ಗಾಯ

Webdunia
ಮಂಗಳವಾರ, 27 ಡಿಸೆಂಬರ್ 2022 (10:36 IST)
ಅಮರಾವತಿ : ಔಷಧಿ ಅಂಗಡಿಯೊಂದರಲ್ಲಿ ಅನಿಲ ಸೋರಿಕೆಯಾಗಿ ಭೀಕರ ಸ್ಫೋಟ ಸಂಭವಿಸಿ ನಾಲ್ವರು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯಗಳಾಗಿವೆ.

ವಿಶಾಖಪಟ್ಟಣಂ ಸಮೀಪದ ಅನಕಪಲ್ಲಿ ಜಿಲ್ಲೆಯ ಜವಾಹರಲಾಲ್ ನೆಹರು ಫಾರ್ಮಸಿಯಲ್ಲಿ ಸೋಮವಾರ ಈ ಭೀಕರ ಘಟನೆ ನಡೆದಿದೆ. ಸಂಜೆ 3 ಗಂಟೆ ವೇಳೆಗೆ ಫಾರ್ಮಸಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಔಷಧ ಅಂಗಡಿಯಲ್ಲಿದ್ದ ಕೆಲಸಗಾರರು ಬೆಂಕಿಯನ್ನು ತಡೆಯಲು ಪ್ರಯತ್ನಿಸಿದ್ದರು. ಆದರೆ ಅನಿಲ ಸೋರಿಕೆ ಹಿನ್ನೆಲೆ ಭೀಕರ ಸ್ಫೋಟ ಸಂಭವಿಸಿದೆ. 

ಔಷಧಾಲಯದ ಆಡಳಿತದ ಪ್ರಕಾರ, ವಿಶಾಖಪಟ್ಟಣಂನ ಫಾರ್ಮಾ ಸಿಟಿಯಲ್ಲಿರುವ ಲಾರಸ್ ಕಂಪನಿಯ ಯುನಿಟ್-3ರಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಸಂಭವಿಸಿದೆ. ಸ್ಫೋಟ ಉಂಟಾದ ಬಳಿಕ ಅಗ್ನಿಶಾಮಕ ಹಾಗೂ ರಕ್ಷಣಾ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ ಎಂದು ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments