Webdunia - Bharat's app for daily news and videos

Install App

ಸೇನಾ ನೆಲೆ ಮೇಲೆ ಉಗ್ರರ ದಾಳಿಗೆ 3 ಯೋಧರ ಬಲಿ

Webdunia
ಗುರುವಾರ, 27 ಏಪ್ರಿಲ್ 2017 (08:58 IST)
ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾದ ಸೇನಾ ನೆಲೆ ಮೇಲೆ ಇಂದು ಬೆಳಗಿನ ಜಾವ ಉಗ್ರರು ದಾಳಿ ನಡೆಸಿದ್ದು, ಮೂವರು ಯೋಧರು ಹುತಾತ್ಮರಾಗಿದ್ದಾರೆ ಎಂದು ವರದಿಯಾಗಿದೆ.

 
ನಸುಕಿನ ನಾಲ್ಕು ಗಂಟೆ ವೇಳೆ ಈ ದಾಳಿ ನಡೆದಿದೆ ಎನ್ನಲಾಗಿದೆ. ಸುಮಾರು ನಾಲ್ಕು ಗಂಟೆ ಕಾಲ ಗುಂಡಿನ ಕಾಳಗ ಮುಂದುವರಿಯಿತು ಎಂದು ವರದಿಯಾಗಿದೆ. ಈ ವೇಳೆ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸುವಲ್ಲಿ ಸೈನಿಕರು ಯಶಸ್ವಿಯಾಗಿದ್ದಾರೆ.

ಸೇನಾ ನೆಲೆ ಸುತ್ತಮುತ್ತ ಭಯೋತ್ಪಾದಕರಿಗಾಗಿ ಹುಡುಕಾಟ ಮುಂದುವರಿದಿದೆ. ಕಳೆದ ವರ್ಷ ಇದೇ ರೀತಿ ಉರಿ ಸೇನಾ ನೆಲೆ ಮೇಲೆ ಭಯೋತ್ಪಾದಕ ದಾಳಿ ನಡೆದ ಮೇಲೆ ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಬಂಧ ಮತ್ತಷ್ಟು ಹಳಸಿತ್ತು.

ಇದೀಗ ಮತ್ತೊಮ್ಮೆ ಸೇನಾ ನೆಲೆಗೆ ಉಗ್ರರು ಲಗ್ಗೆಯಿಡಲು ಯತ್ನಿಸಿದ್ದು, ಅವರ ಪ್ರಯತ್ನ ವಿಫಲಗೊಳಿಸಲು ಭಾರತೀಯ ಯೋಧರು ಯಶಸ್ವಿಯಾಗಿದ್ದಾರೆ. ಆದರೆ ಇದಕ್ಕಾಗಿ ಓರ್ವ ಸೇನಾಧಿಕಾರಿ ಸೇರಿದಂತೆ ಮೂವರು ಯೋಧರು ಪ್ರಾಣ ತ್ಯಾಗ ಮಾಡಬೇಕಾಯಿತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದಿರಾ ಗಾಂಧಿ ದಾಖಲೆ ಹಿಂದಿಕ್ಕಿ ದೀರ್ಘಾವಧಿ ಪ್ರಧಾನಿ ಹೆಗ್ಗಳಿಕೆಗೆ ಪಾತ್ರವಾದ ನರೇಂದ್ರ ಮೋದಿ

ಉಡುಪಿಯಲ್ಲಿ ಮುಂದಿನ 2 ದಿನ ಭಾರೀ ಗಾಳಿ ಮಳೆ, ರೆಡ್ ಅಲರ್ಟ್ ಘೋಷಣೆ

ಪರಿಷ್ಕೃತ ಶಾಲಾ ಸಮಯವನ್ನು ಮುಂದುವರೆಸುವಂತೆ ಕೇರಳ ಸರ್ಕಾರ ಸೂಚನೆ

ಮೈಸೂರು ಮಹಾರಾಜರಿಗಿಂತಲೂ ಗ್ರೇಟ್ ನಮ್ಮಪ್ಪ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿದ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್‌

ಮುಂದಿನ ಸುದ್ದಿ
Show comments