Webdunia - Bharat's app for daily news and videos

Install App

ಸೇನಾ ನೆಲೆ ಮೇಲೆ ಉಗ್ರರ ದಾಳಿಗೆ 3 ಯೋಧರ ಬಲಿ

Webdunia
ಗುರುವಾರ, 27 ಏಪ್ರಿಲ್ 2017 (08:58 IST)
ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾದ ಸೇನಾ ನೆಲೆ ಮೇಲೆ ಇಂದು ಬೆಳಗಿನ ಜಾವ ಉಗ್ರರು ದಾಳಿ ನಡೆಸಿದ್ದು, ಮೂವರು ಯೋಧರು ಹುತಾತ್ಮರಾಗಿದ್ದಾರೆ ಎಂದು ವರದಿಯಾಗಿದೆ.

 
ನಸುಕಿನ ನಾಲ್ಕು ಗಂಟೆ ವೇಳೆ ಈ ದಾಳಿ ನಡೆದಿದೆ ಎನ್ನಲಾಗಿದೆ. ಸುಮಾರು ನಾಲ್ಕು ಗಂಟೆ ಕಾಲ ಗುಂಡಿನ ಕಾಳಗ ಮುಂದುವರಿಯಿತು ಎಂದು ವರದಿಯಾಗಿದೆ. ಈ ವೇಳೆ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸುವಲ್ಲಿ ಸೈನಿಕರು ಯಶಸ್ವಿಯಾಗಿದ್ದಾರೆ.

ಸೇನಾ ನೆಲೆ ಸುತ್ತಮುತ್ತ ಭಯೋತ್ಪಾದಕರಿಗಾಗಿ ಹುಡುಕಾಟ ಮುಂದುವರಿದಿದೆ. ಕಳೆದ ವರ್ಷ ಇದೇ ರೀತಿ ಉರಿ ಸೇನಾ ನೆಲೆ ಮೇಲೆ ಭಯೋತ್ಪಾದಕ ದಾಳಿ ನಡೆದ ಮೇಲೆ ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಬಂಧ ಮತ್ತಷ್ಟು ಹಳಸಿತ್ತು.

ಇದೀಗ ಮತ್ತೊಮ್ಮೆ ಸೇನಾ ನೆಲೆಗೆ ಉಗ್ರರು ಲಗ್ಗೆಯಿಡಲು ಯತ್ನಿಸಿದ್ದು, ಅವರ ಪ್ರಯತ್ನ ವಿಫಲಗೊಳಿಸಲು ಭಾರತೀಯ ಯೋಧರು ಯಶಸ್ವಿಯಾಗಿದ್ದಾರೆ. ಆದರೆ ಇದಕ್ಕಾಗಿ ಓರ್ವ ಸೇನಾಧಿಕಾರಿ ಸೇರಿದಂತೆ ಮೂವರು ಯೋಧರು ಪ್ರಾಣ ತ್ಯಾಗ ಮಾಡಬೇಕಾಯಿತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments