Webdunia - Bharat's app for daily news and videos

Install App

ಕುಪ್ವಾರದಲ್ಲೇ ಉಗ್ರರ ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಭದ್ರತಾ ಪಡೆ: 4 ಉಗ್ರರ ಹತ್ಯೆ

Webdunia
ಸೋಮವಾರ, 10 ಏಪ್ರಿಲ್ 2017 (10:43 IST)
ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ಕೇರಾನ್ ಪ್ರದೇಶದ ಗಡಿಯಲ್ಲಿ ಉಗ್ರರ ಒಳನುಸುಳುವಿಕೆ ಯತ್ನವನ್ನ ವಿಫಲಗೊಳಿಸಿರುವ ಯೋಧರು, ನಾಲ್ವರು ಉಗ್ರರನ್ನ ಹೊಡೆದುರುಳಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ನಡೆದ ಅತ್ಯಂತ ದೊಡ್ಡ ಒಳನುಸುಳುವಿಕೆ ಯತ್ನ ಇದಾಗಿದ್ದು, ಭದ್ರತಾ ಪಡೆ ಯೋಧರು ಅವರನ್ನ ಹೊಡೆದುರಳಿಸಿದ್ದಾರೆ ಎಂದು ರಕ್ಷಣಾ ಇಲಾಖೆಯ ವಕ್ತಾರ ರಾಜೇಶ್ ಕಾಲಿಯಾ ಹೇಳಿದ್ದಾರೆ.ಈಗಲೂ ಗಡಿಯಲ್ಲಿ ಗುಂಡಿನ ಚಕಮಕಿ ಮುಂದುವರೆದಿದ್ದು, ಮತ್ತಷ್ಟು ಉಗ್ರರಿರುವ ಶಂಕೆ ವ್ಯಕ್ತವಾಗಿದೆ.

ನಿನ್ನೆ ಉಪಚುನಾವಣೆ ವೇಳೆ ಶ್ರೀನಗರದಲ್ಲಿ ನಡೆದ ಘರ್ಷಣೆಯಲ್ಲಿ 6 ಮಂದಿ ಮೃತಪಟ್ಟ ಬೆನ್ನಲ್ಲೇ ಗಡಿಯಲ್ಲಿ ಒಳನುಸುಳುವಿಕೆ ಯತ್ನ ನಡೆದಿದೆ. ಕುಲ್ಗಾಮ್ ಜಿಲ್ಲೆಯಲ್ಲಿ ಪೊಲೀಸ್ ಠಾಣೆ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದರು. ಬಳಿಕ ಪೊಲೀಸರು ಪ್ರತಿ ದಾಳಿ ನಡೆಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

              

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments