Webdunia - Bharat's app for daily news and videos

Install App

ಮುಂಬೈ: ಕಟ್ಟಡ ಕುಸಿದು 11 ಸಾವು

Webdunia
ಮಂಗಳವಾರ, 4 ಆಗಸ್ಟ್ 2015 (09:51 IST)
ಮಹಾರಾಷ್ಟ್ರದ ಥಾಣೆಯ ನೌಪಾಡದಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿದ ಪರಿಣಾಮ 11 ಜನರು ದುರಂತ ಸಾವನ್ನಪ್ಪಿದ್ದಾರೆ. ಇನ್ನೂ ಕೆಲವರು ಕಟ್ಟಡದ ಅವಶೇಷಗಳಡಿ ಸಿಲುಕಿದ್ದಾರೆ ಎಂದು ಹೇಳಲಾಗುತ್ತಿದೆ. ಗಾಯಗೊಂಡ 16 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವಶೇಷಗಳಡಿ ಸಿಲುಕಿದ್ದ 15 ಜನರನ್ನು ರಕ್ಷಿಸಲಾಗಿದೆ .

ಕೃಷ್ಣನಿವಾಸ ಎಂಬ ಹೆಸರಿನ ಈ ಕಟ್ಟಡ 50 ವರ್ಷಗಳಷ್ಟು ಹಳೆಯದೆಂದು ಹೇಳಲಾಗುತ್ತಿದೆ.  
 
ರಾಷ್ಟ್ರೀಯ ವಿಪತ್ತು ನಿರ್ವಹಣಾ, ಅಗ್ನಿಶಾಮಕ ದಳದವರು ಧಾವಿಸಿದ್ದು, ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಈ ಮಧ್ಯೆ ಭಾರಿ ಮಳೆ ಸುರಿಯುತ್ತಿರುವುದು ರಕ್ಷಣಾ ಕಾರ್ಯಾಚರಣೆಗೆ ತೊಡಕಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಸೇರಿದಂತೆ ಹಲವರು ಸ್ಥಳದಲ್ಲಿ ಬೀಡುಬಿಟ್ಟಿದ್ದಾರೆ. 
 
ಕಟ್ಟಡ ಶಿಥಿಲವಾಗಿದ್ದು ತೆರವು ಮಾಡಿ ಎಂದು ಮಹಾನಗರಪಾಲಿಕೆ ಕಟ್ಟಡದ ಮಾಲಿಕರಿಗೆ ಹಲವು ಬಾರಿ ನೋಟಿಸ್ ಹಾಗೂ ಎಚ್ಚರಿಕೆಯನ್ನು ನೀಡಿತ್ತು. ಆದರೂ ಅದನ್ನು ಲೆಕ್ಕಿಸದೇ ವಾಸವನ್ನು ಮುಂದುವರೆಸಲಾಗಿತ್ತು ಎಂದು ಹೇಳಲಾಗುತ್ತಿದೆ. 
 
ಕಳೆದ ವಾರವಷ್ಟೇ ಥಾಣೆಯ ಥಾಕುರ್ಲಿಯಲ್ಲಿ ಕಟ್ಟಡ ಕುಸಿದು 9 ಜನರು ದುರ್ಮರಣವನ್ನಪ್ಪಿದ್ದರು.  ಒಂದೇ ವಾರದ ಅವಧಿಯಲ್ಲಿ ಥಾಣೆಯಲ್ಲಿ ನಡೆದ ಎರಡನೇ ಕಟ್ಟಡ ಕುಸಿತದ ದುರಂತ ಇದಾಗಿದೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments