ಥಾಣೆ: ಮುಟ್ಟಾಗಿದೆಯಾ ಎಂದು ಬಾಲಕಿಯರ ಬಟ್ಟೆ ಬಿಚ್ಚಿಸಿದ ಪ್ರಿನ್ಸಿಪಾಲ್

Krishnaveni K
ಗುರುವಾರ, 10 ಜುಲೈ 2025 (09:49 IST)
Photo Credit: AI Image
ಥಾಣೆ: ಮಹಾರಾಷ್ಟ್ರದ ಥಾಣೆಯ ಶಾಲೆಯೊಂದರಲ್ಲಿ ಮುಟ್ಟಾಗಿದೆಯಾ ಎಂದು ಬಾಲಕಿಯರ ಬಟ್ಟೆ ಬಿಚ್ಚಿಸಿ ಪ್ರಿನ್ಸಿಪಾಲ್ ಮತ್ತು ಸಿಬ್ಬಂದಿಗಳು ಪರೀಕ್ಷಿಸಿದ ಅಮಾನವೀಯ ಘಟನೆ ನಡೆದಿದೆ. ಘಟನೆ ಸಂಬಂಧ ಪ್ರಿನ್ಸಿಪಾಲ್ ಮತ್ತು ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಥಾಣೆಯ ಶಹಾಪುರ್ ಖಾಸಗಿ ಶಾಲೆಯಲ್ಲಿ ಘಟನೆ ನಡೆದಿದೆ. ಶಾಲೆಯ ವಾಷ್ ರೂಂನಲ್ಲಿ ರಕ್ತದ ಕಲೆಯಿದ್ದಿದ್ದನ್ನು ಸಹಾಯಕ ಸಿಬ್ಬಂದಿಗಳು ಗಮನಿಸಿದ್ದರು. ಹೀಗಾಗಿ ಯಾವ ಬಾಲಕಿಗೆ ಪಿರಿಯಡ್ಸ್ ಬಂದಿದೆ ಎಂದು ಸಿಬ್ಬಂದಿ ಈ ರೀತಿ ಅಮಾನವೀಯವಾಗಿ ಪರೀಕ್ಷೆ ನಡೆಸಿದ್ದಾರೆ.

5 ರಿಂದ 10 ನೇ ತರಗತಿವರೆಗಿನ ವಿದ್ಯಾರ್ಥಿಗಳನ್ನು ಸೆಮಿನಾರ್ ಹಾಲ್ ಗೆ ಕರೆದೊಯ್ದು ಸ್ಕ್ರೀನ್ ಮೇಲೆ ರಕ್ತದ ಕಲೆಗಳ ಫೋಟೋ ತೋರಿಸಿದ್ದಾರೆ. ಬಳಿಕ ಯಾವ ವಿದ್ಯಾರ್ಥಿನಿಗೆ ಪಿರಿಯಡ್ಸ್ ಬಂದಿದೆ ಎಂದು ಬಟ್ಟೆ ಬಿಚ್ಚಿಸಿ ಚೆಕ್ ಮಾಡಿಸಿದ್ದಾರೆ. ಮುಟ್ಟಾಗಿರುವ ವಿದ್ಯಾರ್ಥಿನಿಯನ್ನು ಪ್ರತ್ಯೇಕ ಗುಂಪು ಮಾಡಿ ನಿಲ್ಲಿಸಿದ್ದಾರೆ. ಇತರೆ ವಿದ್ಯಾರ್ಥಿಗಳ ಎದುರೇ ಬಟ್ಟೆ ಬಿಚ್ಚಿಸಿ ಪರೀಕ್ಷೆ ಮಾಡಿದ್ದಾರೆ ಎಂದು ವಿದ್ಯಾರ್ಥಿನಿಯರು ಅಳಲು ತೋಡಿಕೊಂಡಿದ್ದಾರೆ.

ಘಟನೆ ಬಗ್ಗೆ ವಿದ್ಯಾರ್ಥಿನಿಯರು ಮನೆಯಲ್ಲಿ ಹೇಳಿದ್ದಾರೆ. ಬಳಿಕ ಪೋಷಕರು ಶಾಲೆಗೆ ಹೋಗಿ ಪ್ರಶ್ನಿಸಿದ್ದಲ್ಲದೆ ಪೊಲೀಸರಿಗೂ ದೂರು ನೀಡಿದ್ದಾರೆ. ಇದೀಗ ಪೊಲೀಸರು ಮಕ್ಕಳ ಮೇಲಿನ ದೌರ್ಜನ್ಯ ಕೇಸ್ ದಾಖಲಿಸಿ ಪ್ರಾಂಶುಪಾಲರು ಮತ್ತು ಸಿಬ್ಬಂದಿಗಳನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಪೋಟ, ಇಂದು ಬಂಧಿಯಾಗಿರುವ ಆರೋಪಿಯ ಕೈವಾಡ ಕೇಳಿದ್ರೆ ಶಾಕ್ ಆಗುತ್ತೆ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಬಿಗ್‌ ರಿಲೀಫ್‌, ತೀರ್ಪು ಮಾಹಿತಿ ಇಲ್ಲಿದೆ

ಲಿವ್‌ ಇನ್‌ ರಿಲೇಷನ್‌ಶಿಪ್‌ನಲ್ಲಿದ್ದ ಮಹಿಳೆ ಶವ ಸೂಟ್‌ಕೇಸ್‌ನಲ್ಲಿ ಪತ್ತೆ: ಸಂಗಾತಿ ಬಂಧನ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಿತ್ತಾಟದ ಬೆನ್ನಲ್ಲೇ ಮಾಜಿ ಸಿಎಂ ಸದಾನಂದ ಗೌಡ ಸ್ಫೋಟಕ ಹೇಳಿಕೆ

ದೆಹಲಿ ಬಾಂಬ್ ಸ್ಫೋಟ, ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments