Webdunia - Bharat's app for daily news and videos

Install App

ಆ.14 ವಿಭಜನೆ ಭಯಾನಕತೆಯ ಸ್ಮರಣಾ ದಿನವಾಗಿ ಆಚರಣೆ: ಮೋದಿ

Webdunia
ಶನಿವಾರ, 14 ಆಗಸ್ಟ್ 2021 (13:29 IST)
ದೆಹಲಿ(ಆ.14): ಭಾನುವಾರ ಭಾರತ 75ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಿದೆ. ಶನಿವಾರ ಟ್ವೀಟ್ ಮಾಡಿದ ಪ್ರಧಾನಿ ನರೇಂದ್ರ ಮೋದಿ ವಿಭಜನೆಯ ಭಯಾನಕತೆಯನ್ನು ಎಂದೂ ಮರೆಯಲು ಸಾಧ್ಯವಿಲ್ಲ. ಆ.14ನ್ನು ವಿಭಜನೆ ಭಯಾನಕತೆಯ ಸ್ಮರಣಾ ದಿನವಾಗಿ ಆಚರಿಸಲಾಗುತ್ತದೆ ಎಂದಿದ್ದಾರೆ. ವಿಭಜನೆಯ ಸಂದರ್ಭ ಜನರ ತ್ಯಾಗಗಳು, ಕಷ್ಟಗಳು, ಹೋರಾಟಗಳ ನೆನಪಿನಲ್ಲಿ ಈ ದಿನವನ್ನು ಆಚರಿಸಲಾಗುತ್ತದೆ ಎಂದು ಮೋದಿ ಹೇಳಿದ್ದಾರೆ.

ವಿಭಜನೆಯ ನೋವುಗಳನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಬುದ್ಧಿಹೀನರ ದ್ವೇಷ ಮತ್ತು ಹಿಂಸೆಯಿಂದಾಗಿ ನಮ್ಮ ಲಕ್ಷಾಂತರ ಸಹೋದರಿಯರು ಮತ್ತು ಸಹೋದರರು ಸ್ಥಳಾಂತರಗೊಂಡರು. ಅನೇಕರು ತಮ್ಮ ಜೀವಗಳನ್ನು ಕಳೆದುಕೊಂಡರು. ನಮ್ಮ ಜನರ ಹೋರಾಟ ಮತ್ತು ತ್ಯಾಗದ ನೆನಪಿಗಾಗಿ, ಆಗಸ್ಟ್ 14 ಅನ್ನು ವಿಭಜನೆಯ ಭಯಾನಕ ಸ್ಮರಣೆಯ ದಿನವನ್ನಾಗಿ ಆಚರಿಸಲಾಗುತ್ತದೆ ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ. ವಿಭಜನೆಯ ಭಯಾನಕ ಸ್ಮರಣೆಯ ದಿನವು ಸಾಮಾಜಿಕ ವಿಭಜನೆಯ ಕಹಿ ತೆಗೆದುಹಾಕುವ ಅಗತ್ಯವನ್ನು ನಮಗೆ ನೆನಪಿಸಲಿ. ಏಕತೆ, ಸಾಮಾಜಿಕ ಸಾಮರಸ್ಯ ಮತ್ತು ಮಾನವ ಸಬಲೀಕರಣದ ಮನೋಭಾವವನ್ನು ಬಲಪಡಿಸುವುದು ಇದರ ಉದ್ದೇಶ ಎಂದಿದ್ದಾರೆ.
ಭಾರತವು 75 ನೇ ಸ್ವಾತಂತ್ರ್ಯ ದಿನವನ್ನು ಆಚರಿಸಲಿದೆ. ಪ್ರಧಾನಿ ಪ್ರತಿ ವರ್ಷ ಕೆಂಪು ಕೋಟೆಯಿಂದ ಧ್ವಜವನ್ನು ಹಾರಿಸಿ ದೇಶವನ್ನು ಉದ್ದೇಶಿಸಿ ಮಾತನಾಡುತ್ತಾರೆ. ಸ್ವಾತಂತ್ರ್ಯ ದಿನಾಚರಣೆಗೆ ಒಂದು ದಿನ ಮುಂಚಿತವಾಗಿ, ದೇಶದ ಅಧ್ಯಕ್ಷರು ದೂರದರ್ಶನದಲ್ಲಿ ರಾಷ್ಟ್ರಕ್ಕೆವನ್ನು ಉದ್ದೇಶಿಸಿ ಮಾತನಾಡುತ್ತಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments