Webdunia - Bharat's app for daily news and videos

Install App

27 ವರ್ಷದ ಮಾನಸಿಕ ಅಸ್ವಸ್ಥನನ್ನು ಥಳಿಸಿ ಕೊಂದ ಸ್ಥಳೀಯರು

ಅತಿಥಾ
ಶುಕ್ರವಾರ, 23 ಫೆಬ್ರವರಿ 2018 (19:18 IST)
ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಕಳ್ಳತನದ ಆರೋಪದಲ್ಲಿ ಮಾನಸಿಕ ಅಸ್ವಸ್ಥ ಯುವಕನೊಬ್ಬನಿಗೆ ಸ್ಥಳೀಯರು ಕಟ್ಟಿಹಾಕಿ, ಹಿಗ್ಗಾಮುಗ್ಗಾ ಥಳಿಸಿದ ವಿಲಕ್ಷಣ ಘಟನೆ ಗುರುವಾರ ಸಂಜೆ ನಡೆದಿದೆ. 
ಸ್ಥಳೀಯರಿಂದ ತೀವ್ರ ಹಲ್ಲೆಗೊಳಗಾದ ಯುವಕ ಪೊಲೀಸ್ ಠಾಣೆಗೆ ಕರೆದೊಯ್ಯುವ ವೇಳೆ ಮೃತಪಟ್ಟಿದ್ದಾನೆ ಎಂದು ಮಾಧ್ಯಮಗಳು ವರದಿ ಮಾಡಿವೆ.
 
ಪೊಲೀಸರ ಪ್ರಕಾರ ಗ್ರಾಮದ ಸಮೀಪದಲ್ಲಿರುವ ಕಾಡಿನಲ್ಲಿ ವಾಸವಾಗಿದ್ದ ಈ ವ್ಯಕ್ತಿಯು ಮಾನಸಿಕವಾಗಿ ಅಸ್ವಸ್ಥವಾಗಿದ್ದ ಮತ್ತು ಕೆಲವು ದಿನಗಳಿಂದ ಈತ ಊರಿನಲ್ಲಿ ಆಹಾರ ಸಾಮಾಗ್ರಿಗಳನ್ನು (ಅಕ್ಕಿ) ಕಳ್ಳತನ ಮಾಡುತ್ತಿದ್ದ ಎನ್ನಲಾಗಿದೆ.
 
ಅಟ್ಟಪ್ಪಾಡಿ ಕಡುಕ್ ಮಣ್ಣ ಎಂಬಲ್ಲಿನ 27 ವರ್ಷದ ಆದಿವಾಸಿ ಮಧು ಎಂಬ ಯುವಕ ಕಳ್ಳತನ ಮಾಡುತ್ತಿದ್ದ ಎಂದು ಆರೋಪವಿತ್ತು. ಆನಂತರ ನಾಪತ್ತೆಯಾಗಿದ್ದ ಮಧು ಎಂಬ ಈ ಯುವಕನ್ನು ಕಾಡಿನ ಹತ್ತಿರವಿದ್ದ ಒಂದು ಪ್ರದೇಶದಲ್ಲಿ ಅಲ್ಲಿನ ಗ್ರಾಮಸ್ಥರು ಸೆರೆ ಹಿಡಿದಿದ್ದರು. ಕಳ್ಳತನ ಮಾಡಿದ್ದಕ್ಕಾಗಿ ಕೆಲವು ಯುವಕರು ಮಧುವನ್ನು ಕಟ್ಟಿಹಾಕಿ ಅವನ ಮೇಲೆ ಹಲ್ಲೆ ನಡೆಸಿ ಆಮೇಲೆ ಪೊಲೀಸರ ವಶಕ್ಕೊಪ್ಪಿಸಿದ್ದಾರೆ. ಪೊಲೀಸರು ಮಧುವನ್ನು ವಶಕ್ಕೆ ತೆಗೆದುಕೊಂಡು ಹೋಗುತ್ತಿದ್ದ ವೇಳೆ ಯುವಕ ರಕ್ತಕಾರಿ ಕುಸಿದು ಬಿದ್ದಿದ್ದಾನೆ. ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದ್ದರೂ ಆತನ ಪ್ರಾಣ ಉಳಿಸಲು ಸಾಧ್ಯವಾಗಲಿಲ್ಲ ಎಂದು ಪೊಲೀಸರು ಹೇಳಿದ್ದಾರೆ.
 
ಅಷ್ಟೇ ಅಲ್ಲದೆ ಈತನೊಂದಿಗೆ ಕ್ಲಿಕ್ಕಿಸಿಕೊಂಡು ಸೆಲ್ಫಿ ಮತ್ತು ಈತನಿಗೆ ಥಳಿಸುವಾಗ ಮಾಡಿದ ವೀಡಿಯೋವನ್ನು ಯುವಕರು ಸಾಮಾಜಿಕ ಮಾಧ್ಯಮಗಳಲ್ಲಿ ಅಪ್‌ಲೋಡ್ ಮಾಡಿದ್ದಾರೆ. ಕಳ್ಳತನ ಮಾಡಿದ್ದಾನೆ ಎಂಬ ಆರೋಪದಲ್ಲಿ ಮಾನಸಿಕ ಅಸ್ವಸ್ಥನಾದ ಯುವಕನ್ನು ಥಳಿಸಿ ಹತ್ಯೆ ಮಾಡಿದ್ದು ಮಾತ್ರವಲ್ಲದೆ ಆತನ ಜತೆ ಸೆಲ್ಫಿ ಕ್ಲಿಕ್ಕಿಸಿಕೊಂಡು ಅಹಂಕಾರ ಮೆರೆದ ಯುವಕರ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ.
 
"ಅಸ್ವಾಭಾವಿಕ ಸಾವಿನ ಪ್ರಕರಣವನ್ನು ದಾಖಲಾಗಿದೆ. ಏಳು ಆರೋಪಿಗಳನ್ನು ನಾವು ಗುರುತಿಸಿದ್ದೇವೆ, ಆದರೆ ಅವರ ಕುರಿತು ಯಾವುದೇ ಮಾಹಿತಿ ಲಭ್ಯವಾಗಲಿಲ್ಲ. ಮಧುವಿನ ಸಾವಿನ ಕುರಿತು ಮರಣೋತ್ತರ ವರದಿ ಬಂದ ಮೇಲೆ ನಾವು ಕ್ರಮ ಕೈಗೊಳ್ಳುತ್ತೇವೆ" ಎಂದು ಪಾಲಕ್ಕಾಡ್ ಪೊಲೀಸ್ ಪ್ರತೇಶ್ ಕುಮಾರ್ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ನಿಯೇ ಪತಿಯನ್ನು ಕೊಲ್ಲುವಷ್ಟು ಕ್ರೂರಿಯಾಗುವುದು ಯಾಕೆ

Siddaramaiah: ಹೈಕಮಾಂಡ್ ಹೇಳಿದ್ದಕ್ಕೆ ಹೊಸದಾಗಿ ಜಾತಿಗಣತಿ: 150 ಕೋಟಿ ದಂಡ ಆಯ್ತು ಎಂದ ನೆಟ್ಟಿಗರು

Karnataka Weather: ಇಂದು ಭಾರೀ ಮಳೆ ಗ್ಯಾರಂಟಿ, ಯಾವೆಲ್ಲಾ ಜಿಲ್ಲೆಗೆ ನೋಡಿ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

ಮುಂದಿನ ಸುದ್ದಿ
Show comments