Webdunia - Bharat's app for daily news and videos

Install App

ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ರೇಪ್ ಎಸಗಿದ ಆರೋಪಿ ಬಂಧನ

Webdunia
ಗುರುವಾರ, 14 ಡಿಸೆಂಬರ್ 2023 (13:20 IST)
ಅಪ್ರಾಪ್ತ ಬಾಲಕಿಯನ್ನುರೈಲ್ವೆ ನಿಲ್ದಾಣದ ಹಿಂದಿರುವ ವಿಶ್ರಾಂತಿ ಕೊಠಡಿಗೆ ಕರೆದುಕೊಂಡ ಹೋದ ಆರೋಪಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ. ನಂತರ ಮಾರನೇ ದಿನ ಬೇರೆ ಬೇರೆ ಸ್ಥಳಗಳಲ್ಲಿ ಕರೆದೆುಕೊಂಡು ಹೋಗಿ ಅತ್ಯಾಚಾರವೆಸಗಿದ ಆರೋಪಿಯನ್ನು ಪೊಲೀಸರು ಇದೀಗ ಬಂಧಿಸಿದ್ದಾರೆ. 
 
ಅಪ್ರಾಪ್ತ ಬಾಲಕಿಯನ್ನು 20 ದಿನಗಳ ಹಿಂದೆ ಅಪಹರಿಸಿ ಅತ್ಯಾಚಾರವೆಸಗಿದ್ದಲ್ಲದೇ ಆಕೆಯನ್ನು ಭಿಕ್ಷಾಟನೆಗೆ ತಳ್ಳಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ ಘಟನೆ ಗಂಜಾಮ್ ಜಿಲ್ಲೆಯ ಕೌಡಿಯಾ ಗ್ರಾಮದಲ್ಲಿ ವರದಿಯಾಗಿದೆ.
 
30 ವರ್ಷ ವಯಸ್ಸಿನ ಆರೋಪಿ ನಾರಾಯಣ್ ದಾಸ್ ಬರಿಗುಡಾ ಗ್ರಾಮದವನಾಗಿದ್ದು ನವೆಂಬರ್ 25 ರಂದು ಕಾರ್ತಿಕ ಪೂರ್ಣಿಮಾ ಹಬ್ಬದ ಆಚರಣೆ ನೋಡಲು ಬಂದಿದ್ದ ಎರಡನೇ ತರಗತಿಯಲ್ಲಿ ಓದುತ್ತಿದ್ದ 8 ವರ್ಷದ ಬಾಲಕಿಯನ್ನು ಅಪಹರಿಸಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ. 
 
ರೈಲ್ವೆ ನಿಲ್ದಾಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿಯನ್ನು ಪೊಲೀಸರು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಿ ವಿಚಾರಣೆ ನಡೆಸಿದಾಗ, ಆರೋಪಿ ಅತ್ಯಾಚಾರವೆಸಗಿರುವ ಬಗ್ಗೆ ಬಾಲಕಿ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ.
 
ಬಾಲಕಿಯ ಕಿವಿಯೋಲೆಗಳನ್ನು ತೆಗೆದು ಅದನ್ನು 2000 ರೂಪಾಯಿಗಳಿಗೆ ಚಿನ್ನಾಭರಣ ಮಳಿಗೆಯಲ್ಲಿ ಮಾರಾಟ ಮಾಡಿ, ಬಂದ ಹಣದಿಂದ ಮೊಬೈಲ್ ಖರೀದಿಸಿದ್ದಾನೆ. ರೈಲ್ವೆ ನಿಲ್ದಾಣದಲ್ಲಿ ಅಳುತ್ತಾ ನಿಂತಿದ್ದ ಬಾಲಕಿ ರೈಲ್ವೆ ಪೊಲೀಸರ ಕಣ್ಣಿಗೆ ಬಿದ್ದಿದ್ದರಿಂದ ಆರೋಪಿಯ ಹೇಯ ಕೃತ್ಯ ಬಹಿರಂಗವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments