ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ರೇಪ್ ಎಸಗಿದ ಆರೋಪಿ ಬಂಧನ

Webdunia
ಗುರುವಾರ, 14 ಡಿಸೆಂಬರ್ 2023 (13:20 IST)
ಅಪ್ರಾಪ್ತ ಬಾಲಕಿಯನ್ನುರೈಲ್ವೆ ನಿಲ್ದಾಣದ ಹಿಂದಿರುವ ವಿಶ್ರಾಂತಿ ಕೊಠಡಿಗೆ ಕರೆದುಕೊಂಡ ಹೋದ ಆರೋಪಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ. ನಂತರ ಮಾರನೇ ದಿನ ಬೇರೆ ಬೇರೆ ಸ್ಥಳಗಳಲ್ಲಿ ಕರೆದೆುಕೊಂಡು ಹೋಗಿ ಅತ್ಯಾಚಾರವೆಸಗಿದ ಆರೋಪಿಯನ್ನು ಪೊಲೀಸರು ಇದೀಗ ಬಂಧಿಸಿದ್ದಾರೆ. 
 
ಅಪ್ರಾಪ್ತ ಬಾಲಕಿಯನ್ನು 20 ದಿನಗಳ ಹಿಂದೆ ಅಪಹರಿಸಿ ಅತ್ಯಾಚಾರವೆಸಗಿದ್ದಲ್ಲದೇ ಆಕೆಯನ್ನು ಭಿಕ್ಷಾಟನೆಗೆ ತಳ್ಳಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ ಘಟನೆ ಗಂಜಾಮ್ ಜಿಲ್ಲೆಯ ಕೌಡಿಯಾ ಗ್ರಾಮದಲ್ಲಿ ವರದಿಯಾಗಿದೆ.
 
30 ವರ್ಷ ವಯಸ್ಸಿನ ಆರೋಪಿ ನಾರಾಯಣ್ ದಾಸ್ ಬರಿಗುಡಾ ಗ್ರಾಮದವನಾಗಿದ್ದು ನವೆಂಬರ್ 25 ರಂದು ಕಾರ್ತಿಕ ಪೂರ್ಣಿಮಾ ಹಬ್ಬದ ಆಚರಣೆ ನೋಡಲು ಬಂದಿದ್ದ ಎರಡನೇ ತರಗತಿಯಲ್ಲಿ ಓದುತ್ತಿದ್ದ 8 ವರ್ಷದ ಬಾಲಕಿಯನ್ನು ಅಪಹರಿಸಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ. 
 
ರೈಲ್ವೆ ನಿಲ್ದಾಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿಯನ್ನು ಪೊಲೀಸರು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಿ ವಿಚಾರಣೆ ನಡೆಸಿದಾಗ, ಆರೋಪಿ ಅತ್ಯಾಚಾರವೆಸಗಿರುವ ಬಗ್ಗೆ ಬಾಲಕಿ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ.
 
ಬಾಲಕಿಯ ಕಿವಿಯೋಲೆಗಳನ್ನು ತೆಗೆದು ಅದನ್ನು 2000 ರೂಪಾಯಿಗಳಿಗೆ ಚಿನ್ನಾಭರಣ ಮಳಿಗೆಯಲ್ಲಿ ಮಾರಾಟ ಮಾಡಿ, ಬಂದ ಹಣದಿಂದ ಮೊಬೈಲ್ ಖರೀದಿಸಿದ್ದಾನೆ. ರೈಲ್ವೆ ನಿಲ್ದಾಣದಲ್ಲಿ ಅಳುತ್ತಾ ನಿಂತಿದ್ದ ಬಾಲಕಿ ರೈಲ್ವೆ ಪೊಲೀಸರ ಕಣ್ಣಿಗೆ ಬಿದ್ದಿದ್ದರಿಂದ ಆರೋಪಿಯ ಹೇಯ ಕೃತ್ಯ ಬಹಿರಂಗವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮಪ್ಪನ ನಂತ್ರ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ನಾಯಕ: ಡಿಕೆಶಿ ಕನಸಿಗೆ ಕೊಳ್ಳಿಯಿಟ್ಟ ಯತೀಂದ್ರ ಸಿದ್ದರಾಮಯ್ಯ

ಗಣೇಶ ಹಬ್ಬದಲ್ಲಿ ಎಣ್ಣೆ ಹಾಕ್ಕೊಂಡು ಮಸೀದಿ ಮುಂದೆ ಡ್ಯಾನ್ಸ್ ಮಾಡೋದು ಯಾಕೆ: ಬಿಕೆ ಹರಿಪ್ರಸಾದ್ ವಿವಾದ

ರಾಯರಿದ್ದಾರೆ ಎಂದು ಮಂತ್ರಾಲಯದಲ್ಲಿ ಕೈ ಮುಗಿದ ಡಿಕೆ ಶಿವಕುಮಾರ್: ನೀವು ಸಿಎಂ ಆಗೇ ಆಗ್ತೀರಾ ಎಂದ ನೆಟ್ಟಿಗರು

ದಲಿತ ಸಂಘಟನೆಗಳಿಗೆ ನಂದೇ ಪ್ರಾಯೋಜಕತ್ವ ಏನಿವಾಗ ಎಂದ ಪ್ರಿಯಾಂಕ್ ಖರ್ಗೆ: ಇಲ್ಲಿದ್ರೆ ಸಸ್ಪೆಂಡ್ ಇಲ್ವಾ ಎಂದ ನೆಟ್ಟಿಗರು

Video: ದೀಪಾವಳಿ ಬೋನಸ್ ಬದಲು ಸೋನ್ ಪಾಪ್ಡಿ ಕೊಟ್ಟ ಬಾಸ್: ನೌಕರರು ಮಾಡಿದ್ದೇನು

ಮುಂದಿನ ಸುದ್ದಿ
Show comments