Webdunia - Bharat's app for daily news and videos

Install App

ಶಬರಿಮಲೆ ದೇವಾಲಯಕ್ಕೆ ತೆರಳುವ ಮಹಿಳೆಯರಿಗೆ ವಯಸ್ಸಿನ ದಾಖಲೆ ಕಡ್ಡಾಯ

Webdunia
ಶುಕ್ರವಾರ, 5 ಜನವರಿ 2018 (15:45 IST)
ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯಕ್ಕೆ ಭೇಟಿ ನೀಡುವ ಮಹಿಳೆಯರಿಗೆ ಇನ್ನು ಮುಂದೆ ವಯಸ್ಸಿನ ಅಧಿಕೃತ ದಾಖಲೆ ಸಲ್ಲಿಸುವುದನ್ನು ಕಡ್ಡಾಯ ಮಾಡಲಾಗಿದೆ.
ಈ ದೇವಾಲಯದಲ್ಲಿ 10 ರಿಂದ 50 ವರ್ಷದ ಒಳಗಿನ ಮಹಿಳೆಯರಿಗೆ ಪ್ರವೇಶ ನಿಷೇಧಿಸಲಾಗಿದೆ. ನಿರ್ಬಂಧಗಳನ್ನು ಉಲ್ಲಂಘಿಸಿ ಕೆಲವು ಮಹಿಳೆಯರು ದೇವಸ್ಥಾನಕ್ಕೆ ಭೇಟಿ ನೀಡಲು ಯತ್ನಿಸುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವುದರಿಂದ ವಯಸ್ಸಿನ ಪ್ರಮಾಣಪತ್ರ ಸಲ್ಲಿಕೆಯನ್ನು ಕಡ್ಡಾಯಗೊಳಿಸಲು ತಿರುವಾಂಕೂರು ದೇವಸ್ವಂ ಮಂಡಳಿ (ಟಿಡಿಬಿ) ನಿರ್ಧರಿಸಿದೆ. ಜೊತೆಗೆ ಮಹಿಳೆಯರ ವಯಸ್ಸನ್ನು ಹೊರ ನೋಟದಿಂದ ನಿರ್ಣಯಿಸುವುದು ಕಷ್ಟ, ಅದಕ್ಕಾಗಿ ನಾವು ವಯಸ್ಸಿನ ಪ್ರಮಾಣಪತ್ರಗಳನ್ನು ಪರಿಶೀಲಿಸು ನಿರ್ಧರಿಸಿದ್ದೇವೆ ಎಂದು ತಿಳಿಸಿದ್ದಾರೆ.
 
ಆಧಾರ್‌ ಕಾರ್ಡ್‌ ಸೇರಿದಂತೆ ಯಾವುದೇ ಅಧಿಕೃತ ದಾಖಲೆಗಳನ್ನು ಪರಿಶೀಲನೆ ಸಂದರ್ಭದಲ್ಲಿ ಮಹಿಳೆಯರು ನೀಡಬೇಕು. ಅಧಿಕೃತ ದಾಖಲೆಗಳನ್ನು ತೋರಿಸಿದರೆ ಭಕ್ತಾದಿಗಳು, ಪೊಲೀಸರು ಮತ್ತು ದೇವಸ್ಥಾನದ ಅಧಿಕಾರಿಗಳ ನಡುವಣ ವಾಗ್ವಾದವನ್ನು ತಪ್ಪಿಸಬಹುದು ಎಂದು ಟಿಡಿಬಿ ಅಧ್ಯಕ್ಷ ಎ. ಪದ್ಮಕುಮಾರ್‌ ತಿಳಿಸಿದ್ದಾರೆ.
 
ಪಂಪಾದಲ್ಲೇ ಮಹಿಳಾ ಪೊಲೀಸರು ಮತ್ತು ಟಿಡಿಬಿ ಮಹಿಳಾ ಸಿಬ್ಬಂದಿ ದಾಖಲೆಗಳನ್ನು ಪರಿಶೀಲಿಸುತ್ತಾರೆ. ತಪಾಸಣೆಯ ಬಳಿಕವೇ ಬೆಟ್ಟ ಏರಲು ಅನುಮತಿ ನೀಡಲಾಗುವುದು. ಈ ಬಾರಿ, ನವೆಂಬರ್‌ 15 ರಿಂದ ಇಲ್ಲಿಯವರೆಗೆ ಕನಿಷ್ಠ 260 ಮಹಿಳೆಯರಿಗೆ ಪ್ರವೇಶ ನಿರಾಕರಿಸಲಾಯಿತು. ಇವರೆಲ್ಲರೂ 10 ರಿಂದ 50 ವರ್ಷ ಒಳಗಿನವರಾಗಿದ್ದರು ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments