Webdunia - Bharat's app for daily news and videos

Install App

ಗುದದ್ವಾರದಲ್ಲಿ ಚಿನ್ನ ಸಾಗಿಸುತ್ತಿದ್ದ ವ್ಯಕ್ತಿಯ ಬಂಧನ

Webdunia
ಗುರುವಾರ, 27 ಡಿಸೆಂಬರ್ 2018 (08:45 IST)
ಜೈಪುರ : ಗುದದ್ವಾರದಲ್ಲಿ ಚಿನ್ನ ಸಾಗಿಸುತ್ತಿದ್ದ 30 ವರ್ಷದ ವ್ಯಕ್ತಿಯೊಬ್ಬನನ್ನು ಜೈಪುರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.


ಪಂಕಜ್ ಸಾದುವಾನಿ ಬಂಧಿತ ಆರೋಪಿಯಾಗಿದ್ದು, ಥಾಯ್ ಏರ್ ವೇಸ್ ನಲ್ಲಿ ಬಂದಿದ್ದ ಈತ ವಿಮಾನ ನಿಲ್ದಾಣದಲ್ಲಿ ವಿಚಿತ್ರವಾಗಿ ವರ್ತಿಸುತ್ತಿದ್ದನು. ಆತನ ನಡವಳಿಕೆಯಿಂದ ಅನುಮಾನಗೊಂಡ ಪೊಲೀಸರು ಆತನನ್ನು ವಶಕ್ಕೆ ಪಡೆದ ಮೇಲೆ ಪ್ರಕರಣ ಬೆಳಕಿಗೆ ಬಂದಿದೆ.


ವಿಚಾರಣೆ ವೇಳೆ ಆತ ತಪ್ಪೊಪ್ಪಿಕೊಂಡಿದ್ದು, ಒಂದು ಕೇಜಿ ತೂಕದ ಚಿನ್ನವನ್ನು ಗುದನಾಳದಲ್ಲಿ ಸಾಗಿಸುತ್ತಿದ್ದ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಆತನನ್ನು ಬಂಧಿಸಿದ ಪೊಲೀಸರು ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments