Webdunia - Bharat's app for daily news and videos

Install App

ತಾಳಿ ಕಟ್ಟುವ ವೇಳೆ ಮದುವೆ ನಿರಾಕರಿಸಿದ ವಧು!

Webdunia
ಮಂಗಳವಾರ, 9 ಮೇ 2023 (12:27 IST)
ಲಕ್ನೋ : ಇತ್ತೀಚಿನ ದಿನಗಳಲ್ಲಿ ವಿವಾಹ ಕಾರ್ಯಕ್ರಮಗಳು ವಿಚಿತ್ರ ಕಾರಣಗಳಿಂದ ನಿಲ್ಲುತ್ತಿವೆ. ಮಂಟಪದಲ್ಲಿ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡು ಲಕ್ಷಾಂತರ ರೂಪಾಯಿ ಖರ್ಚು ಮಾಡಿದ್ದರೂ ಕೊನೆ ಗಳಿಗೆಯಲ್ಲಿ ಮದುವೆಯನ್ನು ನಿಲ್ಲಿಸಲಾಗುತ್ತದೆ.
 
ಇಂತಹದ್ದೇ ಒಂದು ಘಟನೆ ಉತ್ತರ ಪ್ರದೇಶದ ಚಂದೌಲಿ ಜಿಲ್ಲೆಯ ನೌಗಢ ಪ್ರದೇಶದಲ್ಲಿ ನಡಟೆದಿದೆ. ಮದುವೆ ವೇಳೆ ಗಲಾಟೆ ನಡೆದಿದ್ದು, ತಾಳಿ ಕಟ್ಟುವ ಮುನ್ನವೇ ನಶೆಯಲ್ಲಿದ್ದ ವರನ ಸ್ಥಿತಿ ನೋಡಿ ವಧು ತಾನೂ ಆತನನ್ನು ವಿವಾಹವಾಗುವುದಿಲ್ಲ ಎಂದು ಹೇಳಿದ್ದಾಳೆ.

ಮದುವೆ ದಿನವೂ ಕಂಠಪೂರ್ತಿ ಕುಡಿದು ಬಂದಿದ್ದರಿಂದ ವಧು ಕುಪಿತಗೊಂಡ ಆತನನ್ನು ಮದುವೆಯಾಗಲು ನಿರಾಕರಿಸಿದ್ದಾಳೆ ಎಂದು ತಿಳಿದುಬಂದಿದೆ.

ಅಲ್ಲದೆ ಮದುವೆ ಮನೆಗೆ ಕುಡಿದು ಬಂದ ವರ ಹಾಗೂ ವರನ ಕಡೆಯವರನ್ನು ಹುಡುಗಿಯ ಕಡೆಯ ಜನರು ಇಡೀ ಒತ್ತೆಯಾಳಾಗಿ ತೆಗೆದುಕೊಂಡಿದ್ದಾರೆ. ನಂತರ ಎರಡು ಗುಂಪಿನ ಜನರ ನಡುವೆ ಮಾತಿನ ಚಕಮಕಿ ನಡೆದಿದೆ. ಬಳಿಕ ಮಧ್ಯ ಪ್ರವೇಶಿಸಿದ ಪೊಲೀಸರು ಎರಡೂ ಕಡೆಯವರನ್ನು ಠಾಣೆಗೆ ಕರೆತಂದು ಸಮಾಧಾನ ಪಡಿಸಿ ಅವರವರ ಊರಿಗೆ ಕಳುಹಿಸಿದ್ದಾರೆ.

ವಾಸ್ತವವಾಗಿ, ಮಿರ್ಜಾಪುರ ಜಿಲ್ಲೆಯ ಅಹಿರೌರಾ ಪೊಲೀಸ್ ಠಾಣೆ ವ್ಯಾಪ್ತಿಯ ಮಾಣಿಕ್ಪುರ ಗ್ರಾಮದಿಂದ ವರ ಮೆರವಣಿಗೆ ಮೂಲಕ ತೆಂಡುವಾ ಗ್ರಾಮಕ್ಕೆ ಆಗಮಿಸಿದ್ದ. ಗ್ರಾಮದ ಜನರು ವರನ ಕಡೆಯವರನ್ನು ಹೃತ್ಪೂರ್ವಕವಾಗಿ ಸ್ವಾಗತಿಸಿ, ಸತ್ಕರಿಸಿ ವಿವಾಹ ಪೂರ್ವದ ಎಲ್ಲಾ ವಿಧಿವಿಧಾನಗಳನ್ನು ನೆರವೇರಿಸಿದ್ದಾರೆ. ಈ ವೇಳೆ ಕುಡಿದ ಅಮಲಿನಲ್ಲಿದ್ದ ಮಾಲೆ ಹಾಕುವ ವೇಳೆ ಮದುಮಗ ಅಸಭ್ಯವಾಗಿ ವರ್ತಿಸಿದ್ದಾನೆ. ಹುಡುಗಿಯ ಹಣೆಗೆ ಕುಂಕುಮ ಇಡುವ ಬದಲು ಆಕೆಯ ಮುಖಕ್ಕೆ ಸಿಂಧೂರ ಹಚ್ಚಿದ್ದಾನೆ. ಈ ಘಟನೆ ನಂತರ ಹುಡುಗಿ ಕೋಪದಿಂದ ಮಂಟಪದಿಂದ ಎದ್ದು ಹೋಗಿದ್ದಾಳೆ.

ಮೆರವಣಿಗೆಯ ಮೂಲಕ ವರ ಮತ್ತು ಇತರ ಸಂಬಂಧಿಕರು ಮದುವೆ ಸಮಾರಂಭಕ್ಕಾಗಿ ಮದುವೆಯ ಮಂಟಪವನ್ನು ತಲುಪಿದ್ದರು. ಆದರೆ ಅಷ್ಟರಲ್ಲಾಗಲೇ ಅವರೆಲ್ಲಾ ಸಿಕ್ಕಾಪಟ್ಟೆ ಕುಡಿದಿದ್ದರು. ಸ್ವಲ್ಪ ಹೊತ್ತಿನಲ್ಲಿ ವಧುವಿನ ಕಡೆಯವರು ಮಂಟಪಕ್ಕೆ ಬಂದಿದ್ದಾರೆ.

ಕೆಲವು ಆಚರಣೆಗಳ ನಂತರ, ಪಂಡಿತರು ಸಿಂಧೂರ  ದಾನ ಮಾಡುವ ವಿಧಿ ವಿಧಾನವನ್ನು ಹೇಳಿದಾಗ, ಕುಡುಕ ವರ ನಿಯಂತ್ರಣ ಕಳೆದು ತೂರಾಡಿದ್ದಾನೆ, ಅಲ್ಲದೆ ವಧುವಿನ ಮುಖದ ಮೇಲೆ ಕುಂಕುಮವನ್ನ ಎರಚತೊಡಗಿದ್ದಾನೆ. ಇದು ವಧುವಿನ ಕೋಪಕ್ಕೆ ಕಾರಣವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Mallikarjun Kharge: 11 ವರ್ಷಗಳ ಮೋದಿಯ ತಪ್ಪುಗಳ ಲೆಕ್ಕ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Mangaluru: ಬಾಲ್ಯದ ಕನಸ್ಸಿನಂತೆ ನೌಕಾಪಡೆ ಸೇರಿಕೊಂಡ ಮಂಗಳೂರಿನ ಯುವತಿ

Karnataka Weather: 48 ಗಂಟೆಗಳಲ್ಲಿ ಈ ಭಾಗದಲ್ಲಿ ಭಾರೀ ಮಳೆ, ರೆಡ್ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments