Webdunia - Bharat's app for daily news and videos

Install App

ವರದಕ್ಷಿಣೆ ಕೇಳಿದ ವರನೊಂದಿಗೆ ಮದುವೆ ನಿರಾಕರಿಸಿದ ವಧು

Webdunia
ಭಾನುವಾರ, 17 ಡಿಸೆಂಬರ್ 2017 (14:55 IST)
ವರದಕ್ಷಿಣೆಗಾಗಿ ಬೇಡಿಕೆಯಿಟ್ಟದ್ದ ವರನೊಂದಿಗೆ ಮದುವೆಯನ್ನು ನಿರಾಕರಿಸಿರುವ ಘಟನೆ ಛತ್ತೀಸಗಢದ ಮುರಾದಾಬಾದ್‌ನಲ್ಲಿ ಜರುಗಿದೆ.

ಜ್ಯೋತಿ ಎಂಬ ವಧು ಬೆಂಗಳೂರಿನ ಮೂಲದ ವರ ಆಶೀಶ್‌ನೊಂದಿಗೆ ಮದುವೆಯನ್ನು ನಿರಾಕರಿಸಿದ್ದು, ಈ ಕುರಿತು ಪೊಲೀಸ್ ಠಾಣೆಗೆ ದೂರು ಕೂಡ ನೀಡಿದ್ದಾಳೆ.

ಜ್ಯೋತಿ ಮದುವೆ ಮಾಡಲು ಪೋಷಕರು ವೆಬ್‌ಸೈಟ್‌ನಲ್ಲಿ ಮಗಳ ವಿವರವನ್ನು ದಾಖಲಿಸಿದ್ದರು. ಈ ವಿವರಗಳಿಂದ ಸಂಬಂಧ ಕೂಡಿಕೊಂಡು ಡಿಸೆಂಬರ್ 14ರಂದು ಮದುವೆಗೆ ನಿರ್ಣಯಿಸಲಾಗಿತ್ತು. ಆದರೆ, ಮದುವೆಯ ಮುನ್ನ ನಡೆದ ಆರತಕ್ಷತೆ ಸಮಯದಲ್ಲಿ 15ಲಕ್ಷ ಹಾಗೂ ಕಾರಿಗೆ ಬೇಡಿಕೆಯಿಡಲಾಗಿದೆ. ಈ ಸಂದರ್ಭದಲ್ಲಿ ವರನೊಂದಿಗೆ ಮಾತನಾಡಿ ವಧು ಮದುವೆಯಾದ ನಂತರ ದುಡಿದರೆ ಹಣ ಸಂಪಾದನೆ ಮಾಡಿದರಾಯಿತು ಎಂದು ತಿಳಿಹೇಳಿಲು ಪ್ರಯತ್ನ ಕೂಡ ನಡೆಸಿದ್ದಾಳೆ.

ವರನ ಪೋಷಕರು ಮಾತ್ರ ಹಣ ನೀಡಿದರೆ ಮಾತ್ರ ಮದುವೆ ನಡೆಯುತ್ತದೆ ಎಂದು ಹೇಳಿದ್ದಾರೆ. ಇದರಿಂದ ತಂದೆಗೆ ಅವಮಾನ ಆಗುವುದನ್ನು ಸಹಿಸಲಾಗದೆ ವಧು ಮದುವೆಯನ್ನು ನಿರಾಕರಿಸಿ ವರ ಹಾಗೂ ಕುಟುಂಬದವರನ್ನು ಮದುವೆ ಮಂಟಪದಿಂದ ಹೊರ ನಡೆಯಲು ಸೂಚಿಸಿದ್ದಾಳೆ. ವಧುವಿನ ಕಾರ್ಯಕ್ಕೆ ಕುಟುಂಬದವರಿಂದ ಬೆಂಬಲ ವ್ಯಕ್ತವಾಗಿದ್ದು, ವಧುವಿನ ಹೇಳಿಕೆ ಪಡೆದಿರುವ ಪೊಲೀಸರು ವರದಕ್ಷೆಣೆ ಪ್ರಕರಣ ದಾಖಲು ಮಾಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments