Webdunia - Bharat's app for daily news and videos

Install App

ಸ್ಪೀಕರ್ ಮುಂದೆ ಹಾಜರಾಗಲು ಸಿಬಿಐಗೆ ಕಲ್ಕತ್ತ ಹೈಕೋರ್ಟ್ ನಿರ್ದೇಶನ

Webdunia
ಮಂಗಳವಾರ, 5 ಅಕ್ಟೋಬರ್ 2021 (10:04 IST)
ಕೋಲ್ಕತ್ತ : 'ನಾರದಾ ಸ್ಟಿಂಗ್ ಆಪರೇಷನ್ ಟೇಪ್' ಪ್ರಕರಣದಲ್ಲಿ ಪಶ್ಚಿಮ ಬಂಗಾಳ ಸ್ಪೀಕರ್ ಅನುಮತಿ ಪಡೆಯದೇ ಶಾಸಕರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿರುವ ಸಿಬಿಐ ಅಧಿಕಾರಿಗಳಿಗೆ ಸ್ಪೀಕರ್ ಎದುರು ಹಾಜರಾಗುವಂತೆ ಕಲ್ಕತ್ತಾ ಹೈಕೋರ್ಟ್ ಸೋಮವಾರ ಸೂಚನೆ ನೀಡಿದೆ.

ಸ್ಪೀಕರ್ ಬಿಮನ್ ಬ್ಯಾನರ್ಜಿ ಅವರು ನೀಡಿರುವ ನೋಟಿಸ್ ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ರಾಜಶೇಖರ್ ಮಂಥಾ ಅವರು ಮಂಗಳವಾರಕ್ಕೆ ನಿಗದಿಪಡಿಸಿದ್ದಾರೆ.
ನ್ಯಾಯಾಧೀಶ ಮಂಥಾ ಅವರು, ಸ್ಪೀಕರ್ ಎದುರು ಹಾಜರಾಗುವವರೆಗೆ ಹೈಕೋರ್ಟ್ನಲ್ಲಿ ಬಾಕಿ ಇರುವ ಅರ್ಜಿಯ ವಿಚಾರಣೆ ಮುಂದೂಡುವಂತೆ ಸಿಬಿಐ ಅಧಿಕಾರಿಗಳು ಸಲ್ಲಿಸಿದ್ದ ಕೋರಿಕೆಯನ್ನು ಪರಿಗಣಿಸಿದರು.
ಪಶ್ಚಿಮ ಬಂಗಾಳದ ಶಾಸಕರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸುವ ಮುನ್ನ ತಮ್ಮ ಕಚೇರಿಯಿಂದ ಏಕೆ ಅನುಮತಿ ಪಡೆದುಕೊಂಡಿಲ್ಲ ಎಂದು ವಿವರಣೆ ನೀಡುವಂತೆ ಸ್ಪೀಕರ್ ಇತ್ತೀಚೆಗೆ, ಸಿಬಿಐ ಮತ್ತು ಜಾರಿ ನಿರ್ದೇಶನಾಲಯದ ಹಿರಿಯ ಅಧಿಕಾರಿಗಳಿಗೆ ಸಮನ್ಸ್ ನೀಡಿದ್ದಾರೆ.
'ನಾರದಾ ಮಾರುವೇಷ ಕಾರ್ಯಾಚರಣೆ ಟೇಪ್' ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕರಾದ ಸುಬ್ರತಾ ಮುಖರ್ಜಿ, ಫಿರ್ಹಾದ್ ಹಕೀಂ ಮತ್ತು ಮದನ್ ಮಿತ್ರ ಅವರನ್ನು ಸಿಬಿಐ ಬಂಧಿಸಿತ್ತು. ಈ ಮೂವರು ತೃಣಮೂಲ ಕಾಂಗ್ರೆಸ್ನ ಶಾಸಕರು. ಇವರಲ್ಲಿ ಮುಖರ್ಜಿ ಮತ್ತು ಹಕೀಮ್ ಮಮತಾ ಬ್ಯಾನರ್ಜಿ ಅವರ ಸಂಪುಟದಲ್ಲಿ ಸಚಿವರಾಗಿದ್ದು, ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

E Tukaram: ಬಳ್ಳಾರಿ ಚುನಾವಣೆಗೆ ಬರೋಬ್ಬರಿ 21 ಕೋಟಿ ಹಣ ಬಳಕೆ: ಸಂಸದ ಇ ತುಕರಾಂ ಇಡಿ ವಶಕ್ಕೆ

Gold price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvamshi murder: ಗುಡ್ಡ ಹತ್ತಿ ಸುಸ್ತು ಎಂದಿದ್ದ ಹಂತಕರಿಗೆ ಸೋನಂ ನೀಡಿದ್ದ ಆಫರ್ ಏನು

Raj Raghuvamshi murder: ಸೋನಂಳನ್ನು ಅಕ್ಕ ಎನ್ನುತ್ತಿದ್ದ ಮರ್ಡರ್ ಆದ ದಿನವೂ ಊರಲ್ಲೇ ಇದ್ದ

Indore Raja Raghuvamshi murder: ವಿಮಾನ ನಿಲ್ದಾಣದಲ್ಲೇ ಆರೋಪಿ ರಾಜ್ ಕುಶ್ವಾಹ್ ಗೆ ಕಪಾಳ ಮೋಕ್ಷ ವಿಡಿಯೋ

ಮುಂದಿನ ಸುದ್ದಿ
Show comments