Webdunia - Bharat's app for daily news and videos

Install App

ಸುಪ್ರೀಂ ಕೋರ್ಟ್ ತರಾಟೆಯ ನಂತರ ಮರಣ ಪ್ರಮಾಣಪತ್ರಕ್ಕೆ ಮಾರ್ಗಸೂಚಿಗಳನ್ನು ರೂಪಿಸಿದ ಕೇಂದ್ರ

Webdunia
ಭಾನುವಾರ, 12 ಸೆಪ್ಟಂಬರ್ 2021 (15:15 IST)
ಹೊಸದಿಲ್ಲಿ :  ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ ಜೊತೆಗೆ ಕೋವಿಡ್ -19 ಸಾವುಗಳಿಗೆ ಪ್ರಮಾಣಪತ್ರಗಳನ್ನು ನೀಡಲು ಮಾರ್ಗದರ್ಶಿ ಸೂತ್ರಗಳನ್ನು ರೂಪಿಸಲಾಗಿದೆ ಎಂದು ಕೇಂದ್ರ ಸರಕಾರವು ಶನಿವಾರ ಸುಪ್ರೀಂ ಕೋರ್ಟ್ಗೆ ತಿಳಿಸಿದೆ ಎಂದು ಪಿಟಿಐ ವರದಿ ಮಾಡಿದೆ.

ಆರೋಗ್ಯ ಸಚಿವಾಲಯ ಹಾಗೂ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಕೋವಿಡ್ ಸಂಬಂಧಿ ಸಾವುಗಳಿಗೆ 'ಅಧಿಕೃತ ದಾಖಲೆ' ನೀಡುವ ಮಾರ್ಗಸೂಚಿಗಳನ್ನು ಹೊರಡಿಸಿವೆ ಎಂದು ಸರಕಾರ ಸುಪ್ರೀಂ ಕೋರ್ಟ್ಗೆ ತಿಳಿಸಿದೆ.
ಕೋವಿಡ್ ಮರಣ ಪ್ರಮಾಣಪತ್ರಗಳನ್ನು ನೀಡುವ ಮಾರ್ಗಸೂಚಿಗಳನ್ನು ನೀಡುವುದರಲ್ಲಿ ವಿಳಂಬವಾಗುತ್ತಿದೆ ಎಂದು ಸುಪ್ರೀಂ ಕೋರ್ಟ್ ಕೇಂದ್ರ ಸರಕಾರವನ್ನು ತರಾಟೆಗೆ ತೆಗೆದುಕೊಂಡ ಸುಮಾರು 10 ದಿನಗಳ ನಂತರ ಸುಪ್ರೀಂಕೋರ್ಟ್ ನಲ್ಲಿ ಅಫಿಡವಿಟ್ ಸಲ್ಲಿಸಲಾಗಿದೆ.
"ನೀವು ಮುಂದಿನ ಕ್ರಮಗಳನ್ನು ತೆಗೆದುಕೊಳ್ಳುವ ಹೊತ್ತಿಗೆ ಕೊರೋನದ ಮೂರನೇ ಅಲೆವೂ ಮುಗಿಯುತ್ತದೆ" ಎಂದು ಸುಪ್ರೀಂ ಕೋರ್ಟ್ ಇತ್ತೀಚೆಗೆ ನೀಡಿದ ತೀರ್ಪಿನಲ್ಲಿ ತರಾಟೆಗೆ ತೆಗೆದುಕೊಂಡಿತ್ತು.
ಐಸಿಎಂಆರ್ ಅಧ್ಯಯನವನ್ನು ಉಲ್ಲೇಖಿಸಿದ ಮಾರ್ಗಸೂಚಿಗಳಲ್ಲಿ ರೋಗಿಗಳು ಸೋಂಕಿಗೆ ಒಳಗಾದ 25 ದಿನಗಳಲ್ಲಿ 95 ಶೇ. ಕೊರೋನವೈರಸ್ ಸಾವುಗಳು ಸಂಭವಿಸುತ್ತವೆ ಎಂದು ಹೇಳಿದೆ.
"ವ್ಯಾಪ್ತಿಯನ್ನು ವಿಶಾಲವಾಗಿ ಹಾಗೂ ಹೆಚ್ಚು ಒಳಗೊಳ್ಳುವಂತೆ ಮಾಡಲು, ಪರೀಕ್ಷೆಯ ದಿನಾಂಕದಿಂದ ಅಥವಾ ಕೋವಿಡ್ -19 ಪ್ರಕರಣವೆಂದು ವೈದ್ಯಕೀಯವಾಗಿ ನಿರ್ಧರಿಸಿದ ದಿನಾಂಕದಿಂದ 30 ದಿನಗಳಲ್ಲಿ ಸಂಭವಿಸುವ ಸಾವುಗಳನ್ನು 'ಕೋವಿಡ್ -19 ನಿಂದ ಸಾವುಗಳು' ಎಂದು ಪರಿಗಣಿಸಲಾಗುತ್ತದೆ' ಎಂದು ಮಾರ್ಗಸೂಚಿಗಳು ಹೇಳಿವೆ.
30 ದಿನಗಳಿಗಿಂತ ಹೆಚ್ಚು ಕಾಲ ವೈದ್ಯಕೀಯ ಸೌಲಭ್ಯಕ್ಕೆ ದಾಖಲಾದ ರೋಗಿಯು ಅಲ್ಲಿ ಮೃತಪಟ್ಟರೆ ಅದನ್ನು ಕೋವಿಡ್ -19 ಸಾವು ಎಂದು ಪರಿಗಣಿಸಲಾಗುತ್ತದೆ ಎಂದು ಡಾಕ್ಯುಮೆಂಟ್ ಸೇರಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Modi: ಮೋದಿ ಎಲ್ಲಿ ಪ್ರಚಾರ ಸಿಗುತ್ತೋ ಅಲ್ಲಿ ಮಾತ್ರ ಹೋಗ್ತಾರಾ: ಪ್ರಲ್ಹಾದ್ ಜೋಶಿ ಏನು ಹೇಳಿದ್ರು

ಕಾಂಗ್ರೆಸ್ ಸರ್ಕಾರ ಪತನವಾಗುತ್ತೆ, ಬಿಜೆಪಿ ಅಧಿಕಾರ ಹಿಡಿಯುತ್ತೆ: ವಿಶ್ವೇಶ್ವರ ಹೆಗಡೆ ಕಾಗೇರಿ

Pralhad Joshi: ಭಾರತ ಈಗ ಜಗತ್ತಿಗೆ ನಂ 4, ಸದ್ಯದಲ್ಲೇ ನಂ 3 ಆಗ್ತೀವಿ: ಪ್ರಲ್ಹಾದ್ ಜೋಶಿ

Chinnaswamy stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಬಿಜೆಪಿಯಿಂದ ಒಂದು ಉಗ್ರ ಹೋರಾಟ

Priyank Kharge: ನಿಮ್ಮ ಮಕ್ಳು ಮಾತ್ರ ಕೊಹ್ಲಿ ಜೊತೆ ಫೋಟೋ ತೆಗೆಸಿಕೊಳ್ಬೇಕಾ: ಪ್ರಿಯಾಂಕ್ ಖರ್ಗೆಗ ನೆಟ್ಟಿಗರು ಟಾಂಗ್

ಮುಂದಿನ ಸುದ್ದಿ
Show comments