Webdunia - Bharat's app for daily news and videos

Install App

ಪೊಲೀಸರಿಗೆ 25 ಸಾವಿರ ರೂ.ದಂಡ ವಿಧಿಸಿದ ನ್ಯಾಯಾಲಯ..!

Webdunia
ಸೋಮವಾರ, 18 ಅಕ್ಟೋಬರ್ 2021 (13:44 IST)
ನವದೆಹಲಿ, ಅ.18 : ಪೌರತ್ವ ತಿದ್ದುಪಡಿ ವಿವಾದದಿಂದ ಭುಗಿಲೆದ್ದ ಗಲಭೆಯ ತನಿಖೆ ವಿಳಂಬ ಹಾಗೂ ಪ್ರತ್ಯೇಕ ಎಫ್ಐಆರ್ ದಾಖಲಿಸದ ದೆಹಲಿ ಪೊಲೀಸರಿಗೆ ನ್ಯಾಯಾಲಯ 25 ಸಾವಿರ ರೂಪಾಯಿಗಳ ದಂಡ ವಿಧಿಸಿದೆ.

ಹಿರಿಯ ಪೊಲೀಸರು ಕಿವುಡು ಕಿವಿಗಳಲ್ಲಿ ಪ್ರಕರಣವನ್ನು ನೋಡುತ್ತಿದ್ದಾರೆ ಎಂದು ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಅರುಣ್ ಕುಮಾರ್ ಗಾರ್ಗ್ ಅವರು ಆಕ್ಷೇಪ ವ್ಯಕ್ತ ಪಡಿಸಿದ್ದು, ವಿಳಂಬ ವಿಚಾರಣೆಗೆ ತಗಲುವ ವೆಚ್ಚದ ಬಾಬ್ತಾಗಿ 25 ಸಾವಿರ ರೂಪಾಯಿಗಳನ್ನು ತಪ್ಪಿತಸ್ಥ ಅಧಿಕಾರಿ ವೇತನದಲ್ಲಿ ಕಡಿತ ಮಾಡುವಂತೆ ಗೃಹ ಇಲಾಖೆ ಕಾರ್ಯದರ್ಶಿ ಅವರಿಗೆ ಸೂಚಿಸಿದ್ದಾರೆ.
2020ರ ಫೆಬ್ರವರಿಯಲ್ಲಿ ಪೌರತ್ವ ತಿದ್ದುಪಡಿ ವಿಧೇಯಕ ವಿರೋಧಿಸಿ ಗುಂಪು ಗಲಭೆಗಳಾದವು. ಅದರಲ್ಲಿ 53 ಮಂದಿ ಮೃತಪಟ್ಟು 700 ಮಂದಿ ಗಾಯಗೊಂಡಿದ್ದರು. ಭಜನಾಪುರ ಪ್ರದೇಶದಲ್ಲಿ ಬೇರೆ ಬೇರೆ ದಿನಗಳಲ್ಲಿ ನಡೆದ ಐದು ಗಲಭೆ ಪ್ರಕರಣದಲ್ಲಿ ಪೊಲೀಸರು ಒಂದೇ ಎಫ್ಐಆರ್ ದಾಖಲಿಸಿದ್ದರು. ಎಫ್ಐಆರ್ನ್ನು ಪ್ರತ್ಯೇಕಗೊಳಿಸಿ ಸಲ್ಲಿಸುವಂತೆ ನ್ಯಾಯಾಲಯ ಈ ಮೊದಲು ಸೂಚಿಸಿತ್ತು.
ತನಿಖೆಯನ್ನು ವಿಳಂಬ ಮಾಡುವ ಮೂಲಕ ಬಂಧಿತ ಆರೋಪಿಗಳು ಜೈಲಿನಲ್ಲೇ ಉಳಿಯುವಂತೆ ಮಾಡಲಾಗಿದೆ ಎಂದು ಆರೋಪಿಗಳ ಪರ ವಕೀಲರು ಆಕ್ಷೇಪಿಸಿದರು. ನ್ಯಾಯಾಲಯದ ಸೂಚನೆಯ ಹೊರತಾಗಿ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿಲ್ಲ ಮತ್ತು ಹಿರಿಯ ಅಧಿಕಾರಿಗಳು ಗಮನ ಹರಿಸಿಲ್ಲ ಎಂದು ಆಕ್ಷೇಪಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments