Webdunia - Bharat's app for daily news and videos

Install App

ಪ್ರಸಕ್ತ ಕಾನೂನು ವ್ಯವಸ್ಥೆ ಸಾಮಾನ್ಯ ಜನರ ಅಗತ್ಯತೆಗೆ ಸೂಕ್ತವಲ್ಲ: ಎನ್.ವಿ. ರಮಣ

Webdunia
ಭಾನುವಾರ, 19 ಸೆಪ್ಟಂಬರ್ 2021 (09:23 IST)
ಬೆಂಗಳೂರು, ಸೆ. 19 : ಪ್ರಸಕ್ತ ಕಾನೂನು ವ್ಯವಸ್ಥೆ ಸಾಮಾನ್ಯ ಜನರ ಅಗತ್ಯತೆಗೆ ಹೊಂದುವುದಿಲ್ಲ. ಅದು ಅವರಿಗೆ ಹಲವು ಅಡೆತಡೆಗಳನ್ನು ಉಂಟು ಮಾಡುತ್ತದೆ ಎಂದು ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಅವರು ಶನಿವಾರ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಕರ್ನಾಟಕ ಸ್ಟೇಟ್ ಬಾರ್ ಕೌನ್ಸಿಲ್ನ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕಾನೂನುಗಳು ವಸಾಹತುಶಾಹಿ ಮೂಲ ಹೊಂದಿವೆ ಎಂದು ಹೇಳಿದ ಅವರು, ನಮ್ಮ ಕಾನೂನು ವ್ಯವಸ್ಥೆಯ ಭಾರತೀಕರಣ ಇಂದಿನ ಅಗತ್ಯ ಎಂದಿದ್ದಾರೆ. ನಮ್ಮ ನ್ಯಾಯ ವಿತರಣೆ ಆಗಾಗ ಸಾಮಾನ್ಯ ಜನರಿಗೆ ಅಡೆತಡೆ ಉಂಟು ಮಾಡುತ್ತದೆ. ನಮ್ಮ ಕಾನೂನು ವ್ಯವಸ್ಥೆ ಸಾಮಾನ್ಯ ಜನರ ಅವಶ್ಯಕತೆಗಳಿಗೆ ಸ್ಪಂದಿಸುವಂತಿರಬೇಕು. ಭಾರತದ ಪ್ರಸಕ್ತ ಕಾರ್ಯನಿರ್ವಹಣಾ ಶೈಲಿ ಭಾರತದ ಸಂಕೀರ್ಣತೆಗೆ ಹೊಂದಿಕೊಳ್ಳುವುದಿಲ್ಲ ಎಂದು ಅವರು ಹೇಳಿದರು.
ದೀರ್ಘಕಾಲದ ಅಸೌಖ್ಯದ ಬಳಿಕ ಎಪ್ರಿಲ್ನಲ್ಲಿ ನಿಧನರಾದ ನ್ಯಾಯಮೂರ್ತಿ ಮೋಹನ್ ಎಂ. ಶಾಂತನಗೌಡರ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲು ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments