Webdunia - Bharat's app for daily news and videos

Install App

ಸಾಲ ತೀರಿಸಲು ತಂದೆ-ತಾಯಿಗೆ ಟೀಯಲ್ಲಿ ಇಲಿ ಪಾಷಾಣ ಹಾಕಿದ ಮಗಳು!

Webdunia
ಶುಕ್ರವಾರ, 26 ಆಗಸ್ಟ್ 2022 (09:51 IST)
ತಿರುವನಂತಪುರಂ : ಪತಿಗೆ ತಿಳಿಸದೇ ಮಾಡಿದ್ದ ಸಾಲ ತೀರಿಸಲು ಮಹಿಳೆಯೊಬ್ಬರು ತನ್ನ ತಂದೆ-ತಾಯಿಗೆ ವಿಷ ಹಾಕಿರುವ ದಾರುಣ ಘಟನೆ ಕೇರಳದಲ್ಲಿ ನಡೆದಿದೆ.
 
ತ್ರಿಶೂರ್ ಜಿಲ್ಲೆಯ ಕುನ್ನಂಕುಲಂನಲ್ಲಿ ಈ ಘಟನೆ ನಡೆದಿದ್ದು, ಇಂದುಲೇಖಾ (39) ತನ್ನ ತಂದೆ-ತಾಯಿಗೆ ವಿಷ ಹಾಕಿದ ಮಹಿಳೆ.

ಈಕೆ ತನ್ನ ತಂದೆ ಚಂದ್ರನ್ ಹಾಗೂ ತಾಯಿ ರುಕ್ಮಿಣಿ ಅವರಿಗೆ ಕುಡಿಯಲು ಕೊಟ್ಟಿದ್ದ ಟೀನಲ್ಲಿ ಇಲಿ ಪಾಷಾಣ ಹಾಕಿದ್ದಳು. ಟೀ ಕುಡಿದು ತಾಯಿ ಮೃತಪಟ್ಟರೆ, ರುಚಿಯಲ್ಲಿ ವ್ಯತ್ಯಾಸ ಕಂಡ ತಂದೆ ಅದನ್ನು ಕುಡಿಯದೇ ಪ್ರಾಣ ಉಳಿಸಿಕೊಂಡಿದ್ದಾರೆ. 

ದುಬೈನಲ್ಲಿ ಕೆಲಸ ಮಾಡುತ್ತಿರುವ ಪತಿಗೆ ತಿಳಿಸದೆಯೇ ಇಂದುಲೇಖಾ ಆಭರಣಗಳನ್ನು ಒತ್ತೆ ಇಟ್ಟು 8 ಲಕ್ಷ ರೂ. ಸಾಲ ಪಡೆದಿದ್ದರು. ಪತಿ ರಜೆ ಮೇಲೆ ಊರಿಗೆ ಬರುತ್ತಿದ್ದುದನ್ನು ತಿಳಿದು, ಸಾಲ ತೀರಿಸಲು ದಿಕ್ಕು ತೋಚಿಲ್ಲ.

ಪತಿ ಬರುವಷ್ಟರಲ್ಲಿ ಹೇಗಾದರೂ ಸಾಲ ತೀರಿಸಬೇಕೆಂದು ನಿರ್ಧರಿಸಿದ ಇಂದುಲೇಖಾ ಕಣ್ಣಿಗೆ ಬಿದ್ದಿದ್ದು ಆಕೆಯ ತಂದೆ-ತಾಯಿ. ಪೋಷಕರ ಆಸ್ತಿಯನ್ನು ಮಾರಿ ಸಾಲ ತೀರಿಸಲು ಮುಂದಾಗಿದ್ದಳು.

ತನ್ನ ಪೋಷಕರನ್ನು ಕೊಲ್ಲಲು ಇಂದುಲೇಖಾ ನಿರ್ಧರಿಸಿದ್ದಾಳೆ. ನಂತರ ಅವರಿಗೆ ಕುಡಿಯಲು ಕೊಟ್ಟಿದ್ದ ಟೀಯಲ್ಲಿ ಇಲಿ ಪಾಷಾಣ ಬೆರೆಸಿದ್ದಾಳೆ. ಟೀಯನ್ನು ತಾಯಿ ಕುಡಿದಿದ್ದಾರೆ. ಆದರೆ ಟೀ ರುಚಿಯಲ್ಲಿ ಕಹಿ ಅನುಭವವಾಗಿ ಆಕೆ ತಂದೆ ಒಂದು ಗುಟುಕನ್ನಷ್ಟೇ ಕುಡಿದು ಸುಮ್ಮನಾಗಿದ್ದಾರೆ.

ಟೀ ಕುಡಿದ ಇಂದುಲೇಖಾ ತಾಯಿ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ಸೇರಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಪ್ಪೇ ಮಾಡಿಲ್ಲ ಅಂದ್ರೆ ಸೈಟು ಮರಳಿಸಿದ್ದು ಯಾಕೆ: ಸಿದ್ದರಾಮಯ್ಯಗೆ ಪ್ರಶ್ನೆ

Karnataka Weather: ರಾಜ್ಯದ ಈ ಜಿಲ್ಲೆಯಲ್ಲಿ ಇಂದೂ ಇರಲಿದೆ ಮಳೆಯ ಅಬ್ಬರ

ರಾಜ್ಯ ಕೃಷಿ ಬಿಕ್ಕಟ್ಟಿನಲ್ಲಿರುವಾಗ ವಿಧಾನಸಭೆ ಅಧಿವೇಶನದಲ್ಲಿ ರಮ್ಮಿ ಆಡುತ್ತಾ ಕೂತಾ ಸಚಿವ ಮಾಣಿಕ್ರಾವ್ ಕೊಕಾಟೆ

ಇವನು ಮನುಷ್ಯನ, ಮಗುವಿಗೆ ನಾಯಿ ಕಚ್ಚುತ್ತಿದ್ದರು ಅದನ್ನು ನೋಡಿ ನಗುತ್ತಾ ಕೂತಾ ಮಾಲೀಕ, Viral Video

ನಾನು ಸಚಿವನಾಗಿ, ಉಪ ಮುಖ್ಯಮಂತ್ರಿಯಾಗಿ ನಿಮ್ಮ ಮುಂದೆ ಬಂದಿಲ್ಲ: ಡಿಕೆ ಶಿವಕುಮಾರ್ ಹಿಂಗದಿದ್ಯಾಕೆ

ಮುಂದಿನ ಸುದ್ದಿ
Show comments