ವಯನಾಡು ದುರಂತದಲ್ಲಿ 200 ದಾಟಿದ ಮೃತರ ಸಂಖ್ಯೆ, ಇನ್ನೂ 300 ಮಂದಿ ನಾಪತ್ತೆ

Sampriya
ಶುಕ್ರವಾರ, 2 ಆಗಸ್ಟ್ 2024 (14:16 IST)
Photo Courtesy X
Photo Courtesy X
ವಯನಾಡು: ಭಾರೀ ಭೂಕುಸಿತ ಉಂಟಾದ ಕೇರಳದ ವಯನಾಡು ಜಿಲ್ಲೆಯ ಮುಂಡಕ್ಕೈನಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಈ ಭಯಾನಕ ದುರ್ಘಟನೆಯಲ್ಲಿ ಇನ್ನೂ ಸುಮಾರು 300 ಮಂದಿ ನಾಪತ್ತೆಯಾಗಿದ್ದಾರೆ.

ಈಗಾಗಲೇ ಮೃತರ ಸಂಖ್ಯೆ 200ರ ಗಡಿ ದಾಟಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಚ್ಚಾಗುವ ಆತಂಕವಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳ ಮೇಲ್ವಿಚಾರಣೆ ನಡೆಸುತ್ತಿರುವ ಎಡಿಜಿಪಿ ಎಂ.ಆರ್. ಅಜಿತ್ ಕುಮಾರ್ ಮಾಧ್ಯಮಗಳ ಜೊತೆ ಪ್ರತಿಕ್ರಿಯಿಸಿ, ಸುಮಾರು 300 ಮಂದಿ ಇನ್ನೂ ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ಇದೆ. ಇನ್ನು ಎರಡು ಮೂರು ದಿನಗಳಲ್ಲಿ ಕಂದಾಯ ಇಲಾಖೆ ಈ ಕುರಿತ ಖಚಿತ ಸಂಖ್ಯೆಯನ್ನು ತಿಳಿಸಲಿದೆ ಎಂದಿದ್ದಾರೆ.

ನುರಿತ ಸಂಸ್ಥೆಗಳ ನೆರವು ಪಡೆದು ಚಲಿಯಾರ್ ನದಿಯಲ್ಲಿ ಕೋಯಿಕ್ಕೋಡ್‌ವರೆಗೂ ಪೊಲೀಸರು ಶೋಧ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.

'ನಿನ್ನೆಯೂ ನಾವು ನದಿಯಲ್ಲಿ ಶೋಧ ನಡೆ‌ಸಿದ್ದೇವೆ. ಪೊಥುಕಲ್ ಬಳಿ ಮೃತದೇಹಗಳು ಪತ್ತೆಯಾಗಿವೆ. ಹಾಗಾಗಿ, ಆಯಾ ವ್ಯಾಪ್ತಿಯಲ್ಲಿ ಕೋಯಿಕ್ಕೋಡ್‌ವರೆಗೆ ಶೋಧ ನಡೆಸುವಂತೆ ನದಿ ಸಮೀಪದಲ್ಲಿ ಬರುವ ಠಾಣೆಗಳಿಗೆ ಸೂಚಿಸಿದ್ದೇವೆ. 143 ಮೃತದೇಹಗಳು ಮತ್ತು ನದಿಯಲ್ಲಿ ಕೊಚ್ಚಿಹೋಗುತ್ತಿದ್ದ ದೇಹದ ತುಂಡಾದ ಭಾಗಗಳನ್ನು ಸಂಗ್ರಹಿಸಲಾಗಿದೆ  ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಟ್ಟೆ ಪ್ರಿಯರೇ ಹುಷಾರ್ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ಮುಗಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಬಿಹಾರ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಸಂಜಯ್ ಸರೋಗಿ ಹೆಗಲಿಗೆ

ಮದ್ಯಪಾನ ಪಾರ್ಟಿ ವೇಳೆ ಜಗಳ, ಒಬ್ಬನ ಹತ್ಯೆಯಲ್ಲಿ ಅಂತ್ಯ

ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ನಿತಿನ್ ನಬಿನ್

ಮುಂದಿನ ಸುದ್ದಿ
Show comments