Webdunia - Bharat's app for daily news and videos

Install App

ಜೈಲಿಂದ ಹೊರಬಂದ ಕೂಡಲೇ ಕೇಜ್ರಿವಾಲ್ ಕಿ ಗ್ಯಾರಂಟಿ ಘೋಷಿಸಿದ ದೆಹಲಿ ಮುಖ್ಯಮಂತ್ರಿ

Sampriya
ಭಾನುವಾರ, 12 ಮೇ 2024 (17:16 IST)
ನವದೆಹಲಿ: ಎಎಪಿ ರಾಷ್ಟ್ರೀಯ ಸಂಚಾಲಕ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಜೈಲಿಂದ ಹೊರಬರುತ್ತಿದ್ದಂತಯೇ ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಕೇಜ್ರಿವಾಲ್ ಕಿ ಗ್ಯಾರಂಟಿ ಘೋಷಣೆ ಮಾಡಿದ್ದಾರೆ.

ಇಂಡಿಯಾ ಬಣ ಅಧಿಕಾರಕ್ಕೆ ಬಂದರೆ ಚೀನಾ ಆಕ್ರಮಿಸಿಕೊಂಡಿರುವ ಭಾರತದ ಭೂಮಿ ಮರಳಿ ಪಡೆಯುವುದು ಸೇರಿದಂತೆ 10 ಗ್ಯಾರಂಟಿಗಳನ್ನು ಈಡೇರಿಸುವುದಾಗಿ ಅವರು ಭರವಸೆ ನೀಡಿದ್ದಾರೆ.

ಜಾಮೀನು ಪಡೆದು ಶುಕ್ರವಾರ ಜೈಲಿನಿಂದ ಬಿಡುಗಡೆಯಾಗಿರುವ ಕೇಜ್ರಿವಾಲ್, ಇಂಡಿಯಾ ಬಣ ಕೇಂದ್ರದಲ್ಲಿ ಅಧಿಕಾರಕ್ಕೆ ಬರಲಿದ್ದು, ಎಎಪಿ ಸರ್ಕಾರದ ಭಾಗವಾಗಲಿದೆ. ಮೋದಿ ಗ್ಯಾರಂಟಿ ಮತ್ತು ಕೇಜ್ರಿವಾಲ್ ಗ್ಯಾರಂಟಿಗಳಲ್ಲಿ ಒಂದನ್ನು ಜನರು ಆಯ್ಕೆ ಮಾಡಿಕೊಳ್ಳಬೇಕು ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ನನ್ನ ಗ್ಯಾರಂಟಿಗಳ ಬಗ್ಗೆ ಇಂಡಿಯಾ ಬಣದ ಪಕ್ಷಗಳ ಜೊತೆ ಚರ್ಚೆ ನಡೆಸಿಲ್ಲ. ಆದರೆ, ನನ್ನ ಇಂಡಿಯಾ ಬಣದ ಪಕ್ಷಗಳು ಇದನ್ನು ಈಡೇರಿಸಲಿದೆ. ಉಚಿತ ವಿದ್ಯುತ್, ಒಳ್ಳೆಯ ಶಾಲೆಗಳು ಮತ್ತು ಮೊಹಲ್ಲಾ ಕ್ಲಿನಿಕ್ ಗ್ಯಾರಂಟಿಗಳನ್ನು ಎಎಪಿ ಈಡೇರಿಸಿದೆ. ಆದರೆ, ಪ್ರಧಾನಿ ನರೇಂದ್ರ ಮೋದಿ ಯಾವುದೇ ಗ್ಯಾರಂಟಿ ಪೂರೈಸಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಪಂಜಾಬ್ ಮತ್ತು ದೆಹಲಿಯಲ್ಲಿ 24 ಗಂಟೆ ವಿದ್ಯುತ್ ಪೂರೈಕೆ ಮಾಡುತ್ತಿದ್ದೇವೆ. ದೇಶದಾದ್ಯಂತ ನಾವು ಇದನ್ನು ಮಾಡಬಲ್ಲೆವು. ದೇಶದಾದ್ಯಂತ ಸರ್ಕಾರಿ ಶಾಲೆಗಳು ಕೆಟ್ಟ ಸ್ಥಿತಿಯಲ್ಲಿವೆ. ನಾವು ಉತ್ತಮ ಶಿಕ್ಷಣ ವ್ಯವಸ್ಥೆಯನ್ನು ಮಾಡಬಲ್ಲೆವು ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments