Webdunia - Bharat's app for daily news and videos

Install App

ನೆರೆ ಹಾನಿವೀಕ್ಷಣೆಗೆ ಅಗ್ನಿಶಾಮಕ ಸಿಬ್ಬಂದಿಯ ಬೆನ್ನೇರಿ ಬಂದ ಉಪಮೇಯರ್, ಫೋಟೋ ವೈರಲ್

Sampriya
ಸೋಮವಾರ, 29 ಜುಲೈ 2024 (08:46 IST)
Photo Courtesy X
ಸೂರತ್‌: ಸೂರತ್ ಸೇರಿದಂತೆ ಸೌರಾಷ್ಟ್ರ ಮತ್ತು ದಕ್ಷಿಣ ಗುಜರಾತ್‌ನ ಕೆಲವು ಭಾಗಗಳು ಕಳೆದ ವಾರ ಭಾರೀ ಮಳೆಯಿಂದ ಜರ್ಜರಿತವಾಗಿವೆ. ಈ ವೇಳೆ ಸೂರತ್‌ನ ಉಪಮೇಯರ್ ಮತ್ತು ಬಿಜೆಪಿ ನಾಯಕ ನರೇಂದ್ರ ಪಾಟೀಲ್ ಅವರನ್ನು ಅಗ್ನಿಶಾಮಕದ ಸಿಬ್ಬಂದಿ ಬೆನ್ನ ಮೇಲೆ ಕೂರಿಸಿ ಸವಾರಿ ಮಾಡಿಸಿರುವ ಫೋಟೋ ಹಾಗೂ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಶನಿವಾರ ನಗರದ ಪ್ರವಾಹ ಪೀಡಿತ ಪ್ರದೇಶಗಳ ಪರಿಶೀಲನೆಗೆ ಬಂದಿದ್ದ ಅವರು ಉಪ ಅಗ್ನಿಶಾಮಕ ಅಧಿಕಾರಿಯೊಬ್ಬರ ಬೆನ್ನಮೇಲೆ ಕೂತು ಸಾಗಿದರು. ಭಾರೀ ಮಳೆಗೆ ರಸ್ತೆ ಕೆಸರು ಆಗಿದ್ದರಿಂದ ಅದರಿಂದ ತಪ್ಪಿಸಿಕೊಳ್ಳಲು ಅಧಿಕಾರಿಯ ಬೆನ್ನೇರಿದ್ದಾರೆ ಎಂದು ಹೇಳಲಾಗುತ್ತಿದೆ. ಈ ವಿಚಾರ ವೈರಲ್ ಆಗುತ್ತಿದ್ದ ಹಾಗೇ ಈ ವಿಚಾರಕ್ಕೆ ಸಮಾಜಾಯಿಸಿ ಕೊಟ್ಟ ನರೇಂದ್ರ ಅವರು ನನಗೆ ಕಾಲು ನೋವು ಇತ್ತು. ಅದಕ್ಕಾಗಿ ನೆರವು ಕೋರಿದೆ ಎಂದಿದ್ದಾರೆ.

ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸೂರತ್‌ನ ಉಪಮೇಯರ್ ನರೇಂದ್ರ ಪಾಟೀಲ್ ಅವರನ್ನು ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ಹೊತ್ತೊಯ್ಯುತ್ತಿರುವ ಫೋಟೋ ವೈರಲ್ ಆಗಿದೆ.

ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಳ್ಳಲು ಸೂರತ್ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ  ತಂಡಗಳು ಮತ್ತು ಪೊಲೀಸರನ್ನು ನಿಯೋಜಿಸಲಾಗಿದೆ. ನಿರಂತರ ಮಳೆಯ ನಂತರ ನೀರಿನ ಮಟ್ಟ ಹೆಚ್ಚಾಗುವುದರಿಂದ ತಗ್ಗು ಪ್ರದೇಶದ ಜನರು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳ್ಳಬೇಕು ಎಂದು ಪೊಲೀಸರು ಘೋಷಿಸಿದ್ದಾರೆ.

200 ಅಗ್ನಿಶಾಮಕ ಸಿಬ್ಬಂದಿಯ ಒಟ್ಟು 20 ಎಸ್‌ಎಫ್‌ಇಎಸ್ ತಂಡಗಳು, 18 ಬೋಟ್‌ಗಳನ್ನು ರಕ್ಷಣಾ ಕಾರ್ಯಾಚರಣೆಗೆ ನಿಯೋಜಿಸಲಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Viral video: ಕಾಲ್ತುಳಿತವಾದಾಗ ಹೇಗೆ ನಮ್ಮನ್ನು ರಕ್ಷಿಸಿಕೊಳ್ಳಬೇಕು, ವೈರಲ್ ವಿಡಿಯೋ ನೋಡಿ

Chinnaswamy stampede: ಸೆಕ್ಯುರಿಟಿ ಕೊಡಕ್ಕಾಗಲ್ಲ, ಡಿಸಿಪಿ ಪತ್ರ ವೈರಲ್: ನಾನವನಲ್ಲ ಅಂತಿದ್ದ ಸರ್ಕಾರಕ್ಕೆ ಮುಜುಗರ

Indore murder: ಹನಿಮೂನ್ ನಲ್ಲೇ ಗಂಡನಿಗೆ ಚಟ್ಟ ಕಟ್ಟಿದಳು: ಇಂಧೋರ್ ನಲ್ಲಿ ಪತ್ನಿಯ ಚಿಲ್ಲಿಂಗ್ ಮರ್ಡರ್ ಕತೆ

Siddaramaiah: ಕಮಿಷನರ್ ಭದ್ರತೆ ಕೊಡ್ಬೇಕಿತ್ತು, ನಂದೇನು ತಪ್ಪಿದೆ ಎಂದ ಸಿಎಂ: ಆರ್ಡರ್ ಕೊಟ್ಟಿದ್ದು ನೀವಲ್ವಾ ಎಂದ ಪಬ್ಲಿಕ್

ಮುಂದಿನ ಸುದ್ದಿ
Show comments