Webdunia - Bharat's app for daily news and videos

Install App

ಮಗಳನ್ನ ಕುಡುಗೋಲಿನಿಂದ ಕೊಚ್ಚಿ ಕೊಂದ ತಂದೆ!

Webdunia
ಮಂಗಳವಾರ, 26 ಜುಲೈ 2022 (13:31 IST)
ಚೆನ್ನೈ : ತನ್ನ ಒಪ್ಪಿಗೆಯಿಲ್ಲದೆ ಮದುವೆಯಾಗಿದ್ದಕ್ಕೆ ಅಳಿಯ ಮತ್ತು ಮಗಳನ್ನು ಟುಟಿಕೋರಿನ್ ಜಿಲ್ಲೆಯ ತಂದೆಯೊಬ್ಬ ಕುಡುಗೋಲಿನಲ್ಲಿ ಕೊಚ್ಚಿ ಕೊಂದಿದ್ದಾನೆ.

ಟುಟಿಕೋರಿನ್ ಜಿಲ್ಲೆಯ ಕೋವಿಲ್ಪಟ್ಟಿ ನಗರದ ಸಮೀಪದ ವೀರಪಟ್ಟಿ ಗ್ರಾಮದ ನಿವಾಸಿ ಮುತ್ತುಕುಟ್ಟಿ(50) ಆರೋಪಿಯಾಗಿದ್ದಾನೆ. ಆತನ ಪುತ್ರಿ ರೇಷ್ಮಾ(20) ಕೋವಿಲ್ಪಟ್ಟಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ವಿದ್ಯಾರ್ಥಿನಿಯಾಗಿದ್ದಳು. 

ಅದೇ ಪ್ರದೇಶದ ದಿನಗೂಲಿ ಕಾರ್ಮಿಕ ಮಾಣಿಕರಾಜ್(26)ನನ್ನು ರೇಷ್ಮಾ ಪ್ರೀತಿಸುತ್ತಿದ್ದಳು. ಮುತ್ತುಕುಟ್ಟಿಗೆ ಇಬ್ಬರು ತಮ್ಮ ಪ್ರೀತಿಯ ವಿಚಾರವನ್ನು ಹೇಳಿಕೊಂಡಿದ್ದಾರೆ. ಆದರೆ ಮುತ್ತುಕುಟ್ಟಿ ಒಪ್ಪಿಕೊಂಡಿಲ್ಲ. ಪರಿಣಾಮ ಇಬ್ಬರು ಓಡಿ ಹೋಗಿ ಮದುವೆ ಮಾಡಿಕೊಂಡು ಮತ್ತೆ ಹಳ್ಳಿಗೆ ವಾಪಸ್ ಬಂದಿದ್ದರು.

ಮುತ್ತುಕುಟ್ಟಿ ಅವರ ಮದುವೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದನು. ಆದರೆ ಗ್ರಾಮ ಪಂಚಾಯತಿ ಮೂಲಕ ಇಬ್ಬರಿಗೂ ಗ್ರಾಮದಲ್ಲಿ ವಾಸ ಮಾಡಲು ಅವಕಾಶ ಮಾಡಿಕೊಡಲಾಯಿತು.

ಈ ಕಾರಣ ಮಗಳ ಮೇಲೆ ಮುತ್ತುಕುಟ್ಟಿಗೆ ಸಿಟ್ಟು ಹೆಚ್ಚುವಂತೆ ಮಾಡಿತು. ಸೋಮವಾರ ಸಂಜೆ ಮನೆಯಲ್ಲಿ ರೇಷ್ಮಾ ಮತ್ತು ಆಕೆಯ ಪತಿ ಮಾಣಿಕರಾಜ್ ಇಬ್ಬರೇ ಇದ್ದಾಗ ಮುತ್ತುಕುಟ್ಟಿ ಅಲ್ಲಿಗೆ ಹೋಗಿ ಇಬ್ಬರನ್ನೂ ಕುಡುಗೋಲಿನಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ನಂತರ ಸ್ಥಳದಿಂದ ಪರಾರಿಯಾಗಿದ್ದಾನೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಡಿಗೇಶಿ ಬಳಿ 19 ನವಿಲುಗಳ ಸಾವು: ಎಚ್ಚೆತ್ತ ಸರ್ಕಾರದಿಂದ ದಿಟ್ಟ ನಿರ್ಧಾರ

ಟೆಸ್ಟ್‌ನಲ್ಲಿ ತುಂಬಾ ಮಿಸ್ ಮಾಡಿಕೊಂಡಿದ್ದೇನೆ, ವಿರಾಟ್‌ ದೇಶಕ್ಕೆ ನಿಮ್ಮ ಅವಶ್ಯಕತೆಯಿದೆ: ಶಶಿ ತರೂರ್ ಪೋಸ್ಟ್‌

ನೇಹಾ ಹಿರೇಮಠ ಹತ್ಯೆ ಸಂಬಂಧ: ಆರೋಪಿಗೆ ಫಯಾಜ್ ಬಿಗ್ ಶಾಕ್

ಧರ್ಮಸ್ಥಳ ಅಸ್ಥಿ ಉತ್ಖನನ: ದೂರುದಾರ ಗುರುತಿಸಿದ 11ನೇ ಪಾಯಿಂಟ್‌ನಲ್ಲಿ ಬಿಗ್‌ಟ್ವಿಸ್ಟ್‌

ಮೈಸೂರಿನತ್ತ ಹೆಜ್ಜೆ ಹಾಕಿದ ಅಭಿಮನ್ಯ ನೇತೃತ್ವದ 9 ಗಜಪಡೆ

ಮುಂದಿನ ಸುದ್ದಿ
Show comments