Webdunia - Bharat's app for daily news and videos

Install App

ಎರಡು ಅವಧಿಯ ಸಾಧನೆಗಳ ಬುತ್ತಿ ಬಿಚ್ಚಿಟ್ಟ ವಿತ್ತಸಚಿವೆ

geetha
ಶುಕ್ರವಾರ, 2 ಫೆಬ್ರವರಿ 2024 (16:00 IST)
ನವದೆಹಲಿ :  ಸುಧೀರ್ಘ ಭಾಷಣದ ಮೂಲಕ ಸರ್ಕಾರದ ಆರ್ಥಿಕ, ಸಾಮಾಜಿಕ, ಸಾಂಸ್ಕೃತಿಕ ವಿತ್ತೀಯ, ಔದ್ಯೋಗಿಕ ಕ್ಷೇತ್ರಗಳಲ್ಲಿ ಸಾಧನೆಗಳನ್ನು ತೆರತೆದಿಟ್ಟ ವಿತ್ತಸಚಿವೆ ನಿರ್ಮಲಾ ಸೀತಾರಾಮನ್‌, ಸರ್ಕಾರದ ಧ್ಯೇಯವಾಕ್ಯದಂತೆ ಸಬ್‌ ಕಾ ಸಾಥ್‌, ಸಬ್‌ ಕಾ ವಿಶ್ವಾಸ್‌ ಎಂಬುದನ್ನು ಅನುಷ್ಠಾನಗೊಳಿಸಿದ್ದೇವೆ ಎಂದರು. ಲೋಕಸಭೆ ಹಾಗೂ ರಾಜ್ಯಸಭೆಯನ್ನುದ್ದೇಶಿಸಿ ಮಾತನಾಡಿದ ನಿರ್ಮಲಾ ಸೀತಾರಾಮನ್‌, ಕಳೆದ ಎರಡು ಅವಧಿಯಲ್ಲಿ ಎನ್‌ಡಿಎ ಒಕ್ಕೂಟದ ಸರ್ಕಾರದ ಸಾಧನೆಗಳನ್ನು ಬಣ್ಣಿಸಿದರು. 
 
ಶಿಕ್ಷಣ ಕ್ಷೇತ್ರದಲ್ಲಿ 7 ಐಐಟಿ, 16 ಐಐಎಂಎಎಸ್‌  ಮತ್ತು 309 ಕ್ಕೂ ಹೆಚ್ಚು ವಿಶ್ವ ವಿದ್ಯಾಲಯಗಳನ್ನು ಸ್ಥಾಪಿಸಲಾಗಿದೆ. 3 ಸಾವಿರ ಹೊಸ ಐಟಿಐ ಗಳನ್ನು ನಿರ್ಮಿಸಲಾಗಿದೆ. ಉನ್ನತ ಶಿಕ್ಷಣ ಪಡೆಯುವ ವಿದ್ಯಾರ್ಥಿನಿಯರ ಸಂಖ್ಯೆ ಹೆಚ್ಚಳವಾಗಿದೆ. 
ಹೊಸ ಉದ್ಯಮ ಸ್ಥಾಪಿಸುವ ಯುವಜನತೆಗೆ ಮುದ್ರಾ ಯೋಜನೆಯ ಮೂಲಕ ಆರ್ಥಿಕ ನೆರವು ನೀಡಲಾಗಿದೆ. ಯುವ ಜನತೆ ಮತ್ತು ಮಹಿಳಾ ಉದ್ಯಮಿಗಳು ಹೆಚ್ಚಿನಂಶ ಇದರ ಫಲಾನುಭವಿಗಳಾಗಿದ್ದಾರೆ. ಕ್ರೆಡಿಟ್‌ ಗ್ಯಾರೆಂಟಿ ಯೋಜನೆಯಡಿಯಲ್ಲಿಯು ಯುವ ಜನರಿಗೆ ಆರ್ಥಿಕ ನೆರವು ನೀಡಲಾಗಿದೆ. 
ರೈತರಿಗೆ 22.05 ಲಕ್ಷ ಕೋಟಿಯಷ್ಟು ಸಾಲ ನೀಡಲಾಗಿದೆ.
ಅಲ್ಪಸಂಖ್ಯಾತ ಮಹಿಳೆಯರ ಸುರಕ್ಷತೆಯ ದೃಷ್ಟಿಯಿಂದ ತ್ರಿವಳಿ ತಲಾಖ್‌ ಗೆ ತಿಲಾಂಜಲಿ ಬಿಡಲಾಗಿದೆ.
ಕಿಸಾನ್‌ ಸಮ್ಮಾನ್‌ ಯೋಜನೆಯಿಂದ ರೈತರು ಸಹಾಯಧನ ಪಡೆಯುತ್ತಿದ್ದು ಇದರಿಂದ ದೇಶದ ಆರ್ಥಿಕತೆಗೆ ಬಲ ಬಂದಿದೆ. 
ಪ್ರಧಾನ ಮಂತ್ರಿ ಯೋಜನೆಯ ಅಡಿಯಲ್ಲಿ ಉಚಿತ ಅಡುಗೆ ಅನಿಲ ನೀಡಲಾಗಿದೆ. 
ಪಿಎಂ ಆವಾಸ್‌ ಯೋಜನೆಯ ಅಡಿಯಲ್ಲಿ 3 ಕೋಟಿ ಮನೆಗಳನ್ನು ನಿರ್ಮಿಸಲಾಗಿದೆ. ಇನ್ನು ಮುಂದಿನ ಐದು ವರ್ಷಗಳಲ್ಲಿ ಈ ಸಂಖ್ಯೆ ದುಪ್ಪಟ್ಟಾಗಲಿದೆ. 
 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments