Webdunia - Bharat's app for daily news and videos

Install App

ವಿಶ್ವದಲ್ಲೇ ಮೊದಲ ಪ್ರಕರಣ ಭಾರತದಲ್ಲಿ ಪತ್ತೆ !

Webdunia
ಬುಧವಾರ, 5 ಏಪ್ರಿಲ್ 2023 (08:30 IST)
ಕೋಲ್ಕತ್ತಾ : ವಿಶ್ವದಲ್ಲೇ ಅಪರೂಪದ ಮಾರಕ ಸಸ್ಯ ಶಿಲೀಂಧ್ರ ಸೋಂಕಿಗೆ ಕೋಲ್ಕತ್ತಾದ ವ್ಯಕ್ತಿ ತುತ್ತಾಗಿದ್ದು, ದೇಶದಲ್ಲಿ ಆತಂಕ ಮೂಡಿಸಿದೆ. ವಿಶ್ವದಲ್ಲೇ ಸೋಂಕು ದೃಢಪಟ್ಟ ಮೊದಲ ಪ್ರಕರಣ ಇದಾಗಿದೆ.
 
61 ವಯಸ್ಸಿನ ವ್ಯಕ್ತಿ ಈ ಸೋಂಕಿ ಒಳಗಾಗಿದ್ದಾರೆ. ಕಳೆದ ಮೂರು ತಿಂಗಳಿಂದ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದರು. ಕರ್ಕಶ ಧ್ವನಿ, ಕೆಮ್ಮು, ಆಯಾಸ, ಗಂಟಲಲ್ಲಿ ತೊಂದರೆ ಕಾಣಿಸಿಕೊಂಡಿತ್ತು. ಕೋಲ್ಕತ್ತಾ ಆಸ್ಪತ್ರೆಗೆ ದಾಖಲಾದಾಗ ಸೋಂಕು ಇರುವುದು ದೃಢಪಟ್ಟಿದೆ. 

ವ್ಯಕ್ತಿಯು ಮಧುಮೇಹ, ಹೆಚ್ಐವಿ ಸೋಂಕು, ಮೂತ್ರಪಿಂಡದ ಕಾಯಿಲೆ, ಯಾವುದೇ ದೀರ್ಘಕಾಲದ ಕಾಯಿಲೆ, ಇಮ್ಯುನೊಸಪ್ರೆಸಿವ್ ಡ್ರಗ್ ಸೇವನೆ ಅಥವಾ ಆಘಾತದ ಇತಿಹಾಸವನ್ನು ಹೊಂದಿರಲಿಲ್ಲ.

ರೋಗಿ, ವೃತ್ತಿಯಲ್ಲಿ ಸಸ್ಯ ಮೈಕೊಲೊಜಿಸ್ಟ್ ಆಗಿದ್ದಾರೆ. ದೀರ್ಘಕಾಲದವರೆಗೆ ಕೊಳೆಯುತ್ತಿರುವ ವಸ್ತುಗಳು, ಅಣಬೆಗಳು ಮತ್ತು ವಿವಿಧ ಸಸ್ಯ ಶಿಲೀಂಧ್ರಗಳನ್ನು ತನ್ನ ಸಂಶೋಧನಾ ಚಟುವಟಿಕೆಗಳ ಭಾಗವಾಗಿ ಬಳಸಿಕೊಂಡಿದ್ದರು ಎಂದು ವೈದ್ಯರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments