Select Your Language

Notifications

webdunia
webdunia
webdunia
webdunia

ತನ್ನ ಬಾಲ್ಯವಿವಾಹ ನಿಲ್ಲಿಸುವಂತೆ ಸಿಎಂ ಅಶೋಕ್ ಗೆಹ್ಲೋಟ್ ಬಳಿ ಮನವಿ ಮಾಡಿದ ಬಾಲಕಿ

ತನ್ನ ಬಾಲ್ಯವಿವಾಹ ನಿಲ್ಲಿಸುವಂತೆ ಸಿಎಂ ಅಶೋಕ್ ಗೆಹ್ಲೋಟ್ ಬಳಿ ಮನವಿ ಮಾಡಿದ ಬಾಲಕಿ
ಜೈಪುರ , ಬುಧವಾರ, 23 ಅಕ್ಟೋಬರ್ 2019 (09:04 IST)
ಜೈಪುರ : ಸಿಎಂ ಅಹವಾಲು ಸ್ವೀಕಾರ ಕಾರ್ಯಕ್ರಮದ ವೇಳೆ 15 ವರ್ಷದ ಬಾಲಕಿಯೊಬ್ಬಳು ತನ್ನ ಬಾಲ್ಯ ವಿವಾಹ ತಡೆಯುವಂತೆ ಸಿಎಂ ಅಶೋಕ್ ಗೆಹ್ಲೋಟ್ ಅವರ ಬಳಿ ಮನವಿ ಮಾಡಿದ್ದಾಳೆ.




ರಾಜಸ್ತಾನದ ಟೊಂಕ್ ಜಿಲ್ಲೆಯ ನಿವಾಸಿಯಾಗಿರುವ 15 ವರ್ಷದ ಬಾಲಕಿಗೆ ತಾಯಿ ಇಲ್ಲ. ತಂದೆ ಬಿಟ್ಟು ಹೋದ ಕಾರಣ ಚಿಕ್ಕಪ್ಪ ಆಕೆಯನ್ನು ಸಾಕಿದ್ದರು. ಆದರೆ ಇದೀಗ ಮತ್ತೆ ಬಂದ ತಂದೆ ಆಕೆಗೆ ಈಗಲೇ ಮದುವೆ ಮಾಡಲು ಮುಂದಾಗಿದ್ದಾನೆ. ಇದರಿಂದ ಬೇಸರಗೊಂಡ ಬಾಲಕಿ ಚಿಕ್ಕಪ್ಪನ ಜೊತೆ ಸಿಎಂ ಅಹವಾಲು ಸ್ವೀಕಾರ ಕಾರ್ಯಕ್ರಮಕ್ಕೆ ತೆರಳಿ ಸಿಎಂ ಅಶೋಕ್ ಗೆಹ್ಲೋಟ್ ಅವರ ಬಳಿ ತನ್ನ ಮದುವೆ ನಿಲ್ಲಿಸುವಂತೆ ಮನವಿ ಮಾಡಿದ್ದಾಳೆ.


ಆಕೆಯ ಮನವಿಗೆ ಸ್ಪಂದಿಸಿದ ಸಿಎಂ ಈ ಕುರಿತು ಆಕೆಗೆ ರಕ್ಷಣೆ ನೀಡುವಂತೆ ಹಾಗೂ ಇದಕ್ಕೆ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಹಾಗೂ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅಲ್ಲದೇ ಬಾಲಕಿಗೆ ಓದಲು ಇಷ್ಟಪಡುವವರೆಗೂ ಉಚಿತ ಶಿಕ್ಷಣಕ್ಕೆ ವ್ಯವಸ್ಥೆ ಮಾಡಿದ್ದಾರೆ ಎನ್ನಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಇಂದು ಡಿಕೆಶಿ ಜಾಮೀನು ಅರ್ಜಿಯ ತೀರ್ಪು ಪ್ರಕಟ. ಇಂದಾದರೂ ಡಿಕೆಶಿಗೆ ಸಿಗುತ್ತಾ ಬೇಲ್?