Webdunia - Bharat's app for daily news and videos

Install App

ಫೋಟೋ ಕಳುಹಿಸಲು ಹೊತ್ತಾಯಿಸಿದ್ದಕ್ಕೆ ಹುಡುಗಿ ಹೀಗೆ ಮಾಡೋದಾ!?

Webdunia
ಭಾನುವಾರ, 26 ಜೂನ್ 2022 (09:05 IST)
ಲಕ್ನೋ : ಪದೇ ಪದೇ ತನ್ನ ಫೋಟೋ ಕಳುಹಿಸುವಂತೆ ಒತ್ತಾಯಿಸುತ್ತಿದ್ದ ಪ್ರಿಯಕರನ ಕಾಟ ತಾಳಲಾರದೇ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಇಜ್ಜತ್ ನಜರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಉತ್ತರ ಪ್ರದೇಶದ ಬರೇಲಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಬ್ಯಾಂಕ್ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಳು ಎಂದು ಹೇಳಲಾಗಿದೆ. 

ಪ್ರತಿದಿನ ಇಬ್ಬರೂ ಗಂಟೆಗಟ್ಟಲೇ ಫೋನ್ನಲ್ಲಿ ಮಾತನಾಡುತ್ತಿದ್ದರು. ಈ ವೇಳೆ ಪ್ರೇಮಿಯು ವಾಟ್ಸಾಪ್ನಲ್ಲಿ ಹುಡುಗಿಯ ಫೋಟೋ ಕಳಿಸುವಂತೆ ಕೇಳಿದ್ದಾನೆ. ಪದೇ ಪದೇ ಒತ್ತಾಯಿಸಿದ್ದಾನೆ. ಆದರೂ ಆಕೆ ಫೋಟೋ ಕಳುಹಿಸಲು ನಿರಾಕರಿಸಿದ್ದಾಳೆ. ನಂತರ ವೀಡಿಯೋ ಕಾಲ್ನಲ್ಲಿ ಮಾತನಾಡುವುದಕ್ಕೂ ಆಕೆ ನಿರಾಕರಿಸಿದ್ದಾಳೆ.

ಇದರಿಂದ ಕೋಪಗೊಂಡ ಪ್ರಿಯಕರ ರೈಲಿಗೆ ಸಿಕ್ಕಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ದೂರವಾಣಿ ಕರೆ ಮೂಲಕ ಬೆದರಿಕೆ ಹಾಕಿದ್ದಾನೆ. ಆಗ ಫೋನ್ ಕರೆ ಕಟ್ ಮಾಡಿದ್ದ ಗೆಳತಿ ಮತ್ತೆ ಅವನಿಗೆ ನಿರಂತರವಾಗಿ ಕರೆ ಮಾಡಿದ್ದಾಳೆ. ಸುಮಾರು 40 ಬಾರಿ ಕರೆ ಮಾಡಿದರೂ ಪ್ರೇಮಿ ತೆಗೆಯದಿದ್ದರಿಂದ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ತನ್ನ ಪ್ರೇಮಿ ನಿಜವಾಗಿಯೂ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಆಕೆ ಭಾವಿಸಿ ತಾನೂ ವಿಷ ಸೇವಿಸಿದ್ದಾಳೆ. ಕೆಲ ಸಮಯ ಕಳೆದ ಬಳಿಕ ವಿಷಯ ತಿಳಿದ ಕುಟುಂಬಸ್ಥರು ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲೇ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments