Webdunia - Bharat's app for daily news and videos

Install App

ಫೋಟೋ ಕಳುಹಿಸಲು ಹೊತ್ತಾಯಿಸಿದ್ದಕ್ಕೆ ಹುಡುಗಿ ಹೀಗೆ ಮಾಡೋದಾ!?

Webdunia
ಭಾನುವಾರ, 26 ಜೂನ್ 2022 (09:05 IST)
ಲಕ್ನೋ : ಪದೇ ಪದೇ ತನ್ನ ಫೋಟೋ ಕಳುಹಿಸುವಂತೆ ಒತ್ತಾಯಿಸುತ್ತಿದ್ದ ಪ್ರಿಯಕರನ ಕಾಟ ತಾಳಲಾರದೇ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಇಜ್ಜತ್ ನಜರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಉತ್ತರ ಪ್ರದೇಶದ ಬರೇಲಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಬ್ಯಾಂಕ್ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಳು ಎಂದು ಹೇಳಲಾಗಿದೆ. 

ಪ್ರತಿದಿನ ಇಬ್ಬರೂ ಗಂಟೆಗಟ್ಟಲೇ ಫೋನ್ನಲ್ಲಿ ಮಾತನಾಡುತ್ತಿದ್ದರು. ಈ ವೇಳೆ ಪ್ರೇಮಿಯು ವಾಟ್ಸಾಪ್ನಲ್ಲಿ ಹುಡುಗಿಯ ಫೋಟೋ ಕಳಿಸುವಂತೆ ಕೇಳಿದ್ದಾನೆ. ಪದೇ ಪದೇ ಒತ್ತಾಯಿಸಿದ್ದಾನೆ. ಆದರೂ ಆಕೆ ಫೋಟೋ ಕಳುಹಿಸಲು ನಿರಾಕರಿಸಿದ್ದಾಳೆ. ನಂತರ ವೀಡಿಯೋ ಕಾಲ್ನಲ್ಲಿ ಮಾತನಾಡುವುದಕ್ಕೂ ಆಕೆ ನಿರಾಕರಿಸಿದ್ದಾಳೆ.

ಇದರಿಂದ ಕೋಪಗೊಂಡ ಪ್ರಿಯಕರ ರೈಲಿಗೆ ಸಿಕ್ಕಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ದೂರವಾಣಿ ಕರೆ ಮೂಲಕ ಬೆದರಿಕೆ ಹಾಕಿದ್ದಾನೆ. ಆಗ ಫೋನ್ ಕರೆ ಕಟ್ ಮಾಡಿದ್ದ ಗೆಳತಿ ಮತ್ತೆ ಅವನಿಗೆ ನಿರಂತರವಾಗಿ ಕರೆ ಮಾಡಿದ್ದಾಳೆ. ಸುಮಾರು 40 ಬಾರಿ ಕರೆ ಮಾಡಿದರೂ ಪ್ರೇಮಿ ತೆಗೆಯದಿದ್ದರಿಂದ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ತನ್ನ ಪ್ರೇಮಿ ನಿಜವಾಗಿಯೂ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಆಕೆ ಭಾವಿಸಿ ತಾನೂ ವಿಷ ಸೇವಿಸಿದ್ದಾಳೆ. ಕೆಲ ಸಮಯ ಕಳೆದ ಬಳಿಕ ವಿಷಯ ತಿಳಿದ ಕುಟುಂಬಸ್ಥರು ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲೇ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಹಲ್ಗಾಮ್ ದಾಳಿಕೋರರು ಪಾಕಿಸ್ತಾನದಿಂದಲೇ ಬಂದಿರುವುದಕ್ಕೆ ಏನು ಪ್ರೂಫ್: ಕೈ ನಾಯಕ ಚಿದಂಬರಂ

Operation Mahadev: ಪಹಲ್ಗಾಮ್ ಕುಕೃತ್ಯ ನಡೆಸಿದ ಮೂವರು ಶಂಕಿತ ಉಗ್ರರು ಮಟಾಷ್

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

ಧರ್ಮಸ್ಥಳ ಪ್ರಕರಣದಲ್ಲಿ ತೀವ್ರ ಬೆಳವಣಿಗೆ: ನೇತ್ರಾವತಿ ನದಿ ತಟದಲ್ಲಿ ಎಸ್‌ಐಟಿಯಿಂದ ಸ್ಥಳ ಮಹಜರು

ಸರಕಾರ ನಡೆಸಲು ಬಾರದ ಕಾಂಗ್ರೆಸ್ಸಿಗರು: ಗೋವಿಂದ ಕಾರಜೋಳ

ಮುಂದಿನ ಸುದ್ದಿ
Show comments