ಯೋಗಿ ಆದಿತ್ಯನಾಥ್ ವಿರುದ್ಧದ 22 ವರ್ಷಗಳ ಹಿಂದಿನ ಪ್ರಕರಣ ಹಿಂದಕ್ಕೆ ಪಡೆದ ಸರ್ಕಾರ

Webdunia
ಬುಧವಾರ, 27 ಡಿಸೆಂಬರ್ 2017 (21:48 IST)
ನಿಷೇಧಾಜ್ಞೆ ಉಲ್ಲಂಘಿಸಿ ಸಭೆ ನಡೆಸಿದ ಆರೋಪದ ಮೇರೆಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ವಿರುದ್ಧ ದಾಖಲಾಗಿದ್ದ 22 ವರ್ಷ ಹಳೆಯ ಪ್ರಕರಣವನ್ನು ಉತ್ತರ ಸರ್ಕಾರ ಹಿಂಪಡೆದಿದೆ. 

ಸಿಎಂ ಯೋಗಿ ಆದಿತ್ಯನಾಥ್, ಕೇಂದ್ರ ಸಚಿವ ಶಿವ ಪ್ರತಾಪ್ ಶುಕ್ಲಾ, ಬಿಜೆಪಿ ಶಾಸಕ ಶೀತಲ್ ಪಾಂಡೆ ಹಾಗೂ ಇತರೆ 10 ಮಂದಿ ವಿರುದ್ಧ ಗೋರಖಪುರ್ ಪಿಪಿಗಂಜಿ ಪೊಲೀಸ್ ಠಾಣೆಯಲ್ಲಿ 1995 ಮೇ 27ರಂದು ಪ್ರಕರಣ ದಾಖಲಾಗಿತ್ತು

ಕ್ರಿಮಿನಲ್ ಅಪರಾಧ ಹೊಂದಿರುವ ಸಂಸದರು, ಶಾಸಕರ ತ್ವರಿತಗತಿ ವಿಚಾರಣೆಗಾಗಿ ವಿಶೇಷ ಕೋರ್ಟ್ ಗಳನ್ನು ಸ್ಥಾಪಿಸುವಂತೆ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚಿಸಿದ್ದ ಬೆನ್ನಲ್ಲೇ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ತಾವು ಒಳಗೊಂಡಂತೆ 13 ನಾಯಕರ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟಿದ್ದಾರೆ. 

ಈಚೆಗೆ ಉತ್ತರ ಪ್ರದೇಶದಲ್ಲಿನ ವಿವಾದಿತ ಸಂಘಟಿತ ಅಪರಾಧ ನಿಗ್ರಹ ತಿದ್ದುಪಡಿ ಮಸೂದೆ(ಯುಪಿಸಿಓಸಿಬಿ) ಮಂಡಿಸುವ ಮುನ್ನ ಯೋಗಿ ವಿರುದ್ಧದ ಪ್ರಕರಣ ಕೈಬಿಡಲಾಗಿದೆ. ರಾಜಕೀಯ ಪ್ರೇರಿತವಾಗಿ ದಾಖಲಾದ 20 ಸಾವಿರ ಪ್ರಕರಣಗಳನ್ನು ಕೈಬಿಡುತ್ತಿರುವುದಾಗಿ ಯೋಗಿ ಆದಿತ್ಯನಾಥ್ ಸದನಕ್ಕೆ ತಿಳಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಕುರ್ಚಿ ಗುದ್ದಾಟಕ್ಕೆ ಬ್ರೇಕ್ ಬೆನ್ನಲ್ಲೇ ಡಿಕೆ ಸಂಪುಟದಲ್ಲಿ ಮಂತ್ರಿಯಾಗಲ್ಲ ಎಂದ ರಾಜಣ್ಣ

ನಮ್ಮ ಪಕ್ಷಕ್ಕೆ ದುಡ್ಡು ಕೊಡದೇ ಇನ್ಯಾರಿಗೆ ಕೊಡೋಣ: ಡಿ.ಕೆ. ಶಿವಕುಮಾರ್ ಪ್ರಶ್ನೆ

ವಾಚ್ ಬಗ್ಗೆ ಪ್ರಶ್ನಿಸುವವರು ಐಟಿ ಇಲಾಖೆಯಿಂದ ಏಕೆ ತನಿಖೆ ನಡೆಸಬಾರದು

ಪರಪ್ಪನ ಅಗ್ರಹಾರ ಕೈದಿಗಳ ಚಟ ತೀರಿಸಲು ಹೋಗಿ ಅರೆಸ್ಟ್ ಆದ ವಾರ್ಡನ್

Delhi Air Pollution, ರೇಖಾ ಗುಪ್ತಾ ಈ ಬಗ್ಗೆ ಮಹತ್ವದ ಹೇಳಿಕೆ

ಮುಂದಿನ ಸುದ್ದಿ
Show comments