Webdunia - Bharat's app for daily news and videos

Install App

ಆ್ಯರೇಂಜ್ ಮ್ಯಾರೇಜ್‌ ಅನ್ನು ನಿರಾಕರಿಸಿದ ಶಿಕ್ಷಕಿಯನ್ನೇ ಹತ್ಯೆ ಮಾಡಿದ ವರ

Sampriya
ಬುಧವಾರ, 20 ನವೆಂಬರ್ 2024 (19:45 IST)
ತಮಿಳುನಾಡು: ಮದುವೆಗೆ ನಿರಾಕರಣೆ ಮಾಡಿದ್ದಕ್ಕೆ ಕೋಪಗೊಂಡ ವ್ಯಕ್ತಿಯೊಬ್ಬ ಶಾಲೆಯಲ್ಲಿಯೇ ಶಿಕ್ಷಕಿಯನ್ನು ಚೂರಿಯಿಂದ ಇರಿದು ಹತ್ಯೆ ಮಾಡಿರುವ ಘಟನೆ ತಂಜಾವೂರು ಜಿಲ್ಲೆಯ ಮಲ್ಲಿಪಟ್ಟಿನಂ ಬಳಿಯ ಚಿನ್ನಮನೈ ನಡೆದಿದೆ.  

ಮೃತ ಶಿಕ್ಷಕಿಯನ್ನು 26 ವರ್ಷದ  ರಮಣಿ ಎಂದು ಗುರುತಿಸಲಾಗಿದೆ. ಚಿನ್ನಮನೈನ 30 ವರ್ಷದ ಮದನ್ ಎಂಬಾತ ರಮಣಿ ಮೇಲೆ ಆರಮಲ್ಲಿಪಟ್ಟಿನಂ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಚಾಕುವಿನಿಂದ ಇರಿದಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ರಮಣಿ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋದರು ಮಾರ್ಗಮಧ್ಯದಲ್ಲಿ ಕೊನೆಯುಸಿರೆಳೆದಿದ್ದಾರೆ.

ಮದುವೆ ವಿಚಾರವಾಗಿ ಮದನ್ ಮತ್ತು ಅವರ ಕುಟುಂಬವು ಕೆಲವು ದಿನಗಳ ಹಿಂದೆ ರಮಣಿಯ ಕುಟುಂಬವನ್ನು ಭೇಟಿಯಾಗಿದ್ದರು. ಈ ವೇಳೆ ಇಬ್ಬರು ಮದುವೆಗೆ ಒಪ್ಪಿಗೆ ಸೂಚಿಸಿದ್ದರು. ಆದರೆ ಈಚೆಗೆ ರಮಣಿ ಮದುವೆಗೆ ನಿರಾಕರಣೆ ಮಾಡಿದ್ದರು.

ಆಕೆಯ ನಿರಾಕರಣೆಯಿಂದ ಕೋಪಗೊಂಡ ಮದನ್ ಬುಧವಾರ ಬೆಳಗ್ಗೆ ಸರ್ಕಾರಿ ಪ್ರೌಢಶಾಲೆಗೆ ತೆರಳಿ ರಮಣಿ ಮೇಲೆ ಮಾರಕಾಯುಧದಿಂದ ಹಲ್ಲೆ ನಡೆಸಿದ್ದಾನೆ. ನಂತರ, ಕುತ್ತಿಗೆಗೆ ಆಳವಾದ ಗಾಯವಾಗಿದ್ದ ರಮಣಿಯನ್ನು ಶಾಲೆಯ ಅಧಿಕಾರಿಗಳು ಪಟ್ಟುಕೊಟ್ಟೈನಲ್ಲಿರುವ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದರು.

ಆಸ್ಪತ್ರೆಗೆ ತಲುಪುವಷ್ಟರಲ್ಲಿ ಆಕೆ ಮೃತಪಟ್ಟಿದ್ದಾಳೆ ಎಂದು ಘೋಷಿಸಲಾಯಿತು. ಸೇತುಭಾವಛತ್ರಂ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಚಾರಣೆಗಾಗಿ ಮದನ್‌ನನ್ನು ವಶಕ್ಕೆ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments