Webdunia - Bharat's app for daily news and videos

Install App

ತರುಣಿ ಎಂದು 54ರ ಅಂಟಿಯನ್ನು ಮದುವೆಯಾದ ವರ!

Webdunia
ಬುಧವಾರ, 6 ಜುಲೈ 2022 (17:15 IST)
ಎರಡನೇ ವಿವಾಹಕ್ಕಾಗಿ ಹುಡುಕಾಟ ನಡೆಸುತ್ತಿದ್ದ ವಿಚ್ಛೇದಿತ ವ್ಯಕ್ತಿಯೊಬ್ಬನನ್ನು 54ರ ಪ್ರಾಯದ, ಎರಡು ಮಕ್ಕಳ ತಾಯಿಯೊಬ್ಬಳು ತಾನು 30 ರ ಹರೆಯದ ಹೆಣ್ಣು ಎಂದು ಹೇಳಿ ವಿವಾಹವಾಗಿ ಮೋಸ ಮಾಡಿದ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

ಸಾವಿರ ಸುಳ್ಳು ಹೇಳಿ ಒಂದು ಮದುವೆ ಮಾಡು ಎಂಬ ಮಾತು ಚಾಲ್ತಿಯಲ್ಲಿದೆ. ಇದನ್ನೇ ಅನೇಕರು ನಿಜ ಜೀವನದಲ್ಲಿ ಕಾರ್ಯರೂಪಕ್ಕೆ ತರುತ್ತಿದ್ದಾರೆ. ಎರಡನೇ ವಿವಾಹಕ್ಕೆ ಸಿದ್ಧರಾದ ಡಿವೋರ್ಸಿಗಳೇ ಇಂತಹ ಮೋಸಗಾರರ ಟಾರ್ಗೆಟ್ ಆಗಿದ್ದಾರೆ.

ತಮಿಳುನಾಡಿನ  ತಿರುವಳ್ಳೂರು ಜಿಲ್ಲೆಯ ಪುದುಪೆಟ್ಟೈನ 65 ವರ್ಷದ ಇಂದ್ರಾಣಿ ಎಂಬ ಮಹಿಳೆ ಖಾಸಗಿ ಸಂಸ್ಥೆಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿರುವ ತನ್ನ ವಿಚ್ಛೇದಿತ ಮಗ(35) ನೊಂದಿಗೆ ವಾಸ ಮಾಡುತ್ತಿದ್ದರು.

ಆರು ವರ್ಷಗಳಿಂದ, ಇಂದ್ರಾಣಿ ಅವರು ತಮ್ಮ ವಿಚ್ಛೇದಿತ ಮಗನಿಗಾಗಿ ಹುಡುಗಿಯ ಹುಡುಕಾಟದಲ್ಲಿದ್ದರು. ಕೊನೆಗೂ ಅವರಿಗೆ ದಲ್ಲಾಳಿ ಮೂಲಕ ಕಳೆದ ವರ್ಷ ಆಂಧ್ರಪ್ರದೇಶದ ತಿರುಪತಿ ಜಿಲ್ಲೆಯ ಪುತ್ತೂರು ಮೂಲದ ಶರಣ್ಯ ಎಂಬ ಮಹಿಳೆಯ ಪರಿಚಯವಾಗಿತ್ತು.

ನಂತರ ಮದುವೆಯ ಮಾತುಕತೆಗಾಗಿ ಇಂದ್ರಾಣಿ ಅವರು ಶರಣ್ಯ ಅವರ ನಿವಾಸಕ್ಕೆ ಬರಲು ಸಿದ್ಧತೆ ನಡೆಸಿದರು. ಇತ್ತ ತನ್ನನ್ನು ನೋಡಲು ಗಂಡಿನ ಕಡೆಯವರು ಬರುತ್ತಾರೆ ಎಂಬ ವಿಚಾರ ತಿಳಿದ 54 ವರ್ಷದ ಶರಣ್ಯ ಬ್ಯೂಟಿ ಪಾರ್ಲರ್ಗೆ ಭೇಟಿ ನೀಡಿ ತನ್ನನ್ನು ಸುಂದರ ತರುಣಿಯಂತೆ ಅಲಂಕರಿಸಿಕೊಂಡು ಬಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಎಸ್‌ಐಟಿಯಿಂದ ನಿಷ್ಪಕ್ಷಪಾತ ತನಿಖೆ ಎಂದ ಸಿಎಂ ಸಿದ್ದರಾಮಯ್ಯ

ಮಗನ ಮದುವೆ ಮುರಿಯಲು ಕಾರಣ ಬಿಚ್ಚಿಟ್ಟ ಶಾಸಕ ಪ್ರಭು ಚವಾಣ್, ಇದೆಲ್ಲ ಆ ಮಾಜಿ ಸಚಿವನ ಹುನ್ನಾರ

ಎಚ್‌ಆರ್‌ ಜತೆ ಸರಸವಾಡಿ ಫಜೀತಿಗೆ ಸಿಲುಕಿದ್ದ ಯುಎಸ್‌ ಟೆಕ್‌ ಕಂಪನಿ ಸಿಇಒ ರಾಜೀನಾಮೆ, ಎಚ್‌ಆರ್‌ ಅನ್ನು ರಜೆಯಲ್ಲಿ ಕಳುಹಿಸಿದ ಕಂಪನಿ

ಕಬಿನಿ ಜಲಾಶಯ ಭರ್ತಿ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್‌ ಜೊತೆಯಾಗಿ ಬಾಗಿನ ಅರ್ಪಣೆ

ಪೆಸಿಫಿಕ್ ಸಮುದ್ರದ ಬಳಿ ಪ್ರಬಲ ಭೂಕಂಪನ: ರಷ್ಯಾದ ಪೆನಿನ್ಸುಲಾಗೆ ಸುನಾಮಿ ಎಚ್ಚರಿಕೆ

ಮುಂದಿನ ಸುದ್ದಿ
Show comments