ನಾದಿನಿ ಮೇಲಿನ ವ್ಯಾಮೋಹಕ್ಕೆ, ಪತ್ನಿಯನ್ನೆ ಕೊಂದ ಪತಿ!

Webdunia
ಶುಕ್ರವಾರ, 8 ಜುಲೈ 2022 (13:16 IST)
ಗುಜರಾತ್ : ನಾದಿನಿಯ ಮೇಲಿನ ವ್ಯಾಮೋಹದಿಂದ ಪತಿಯೋರ್ವ ತನ್ನ ಏಡ್ಸ್ ಪೀಡಿತ ಪತ್ನಿಯನ್ನು ಹತ್ಯೆ ಮಾಡಿದ ಭಯಾನಕ ಘಟನೆ ಗುಜರಾತ್ನ  ರಾಜ್ಕೋಟ್ನಲ್ಲಿ  ನಡೆದಿದೆ.
 
ಈ ಕೊಲೆಯಾಗುವ ಒಂಭತ್ತು ತಿಂಗಳ ಮೊದಲೇ ಆರೋಪಿ ತನ್ನ ಪತ್ನಿಯ ತಂಗಿಯ ಜೊತೆ ಓಡಿ ಹೋಗಿದ್ದ. ಕೊಲೆಯಾದ ನತದೃಷ್ಟ ಮಹಿಳೆಯನ್ನು ರಂಜನಾ ಎಂದು ಗುರುತಿಸಲಾಗಿದೆ. ರಾಜೇಶ್ ಒರಾಖಿಯಾ ಕೊಲೆ ಮಾಡಿದ ಆರೋಪಿ. ಪತ್ನಿಯ ಹತ್ಯೆ ಬಳಿಕ ಆತ ಪತ್ನಿಯ ತಂಗಿಯನ್ನು ಮದುವೆಯಾಗಲು ಬಯಸಿದ್ದ.

ಮೇ ತಿಂಗಳಲ್ಲಿಯೇ ಈ ಕೊಲೆ ನಡೆದಿತ್ತು. ಆರೋಪಿ ರಾಜೇಶ್  ಪತ್ನಿ ರಂಜನಾಳನ್ನು ಕೊಂದ ಬಳಿಕ ಆಕೆಯ ಶವವನ್ನು ವಿಚಿಯ  ತಾಲೂಕಿನ ದಾದಾಲಿ  ಗ್ರಾಮದ ಹೊರವಲಯದಲ್ಲಿ ಹೂತಿಟ್ಟಿದ್ದ. ಈಗ ಪೊಲೀಸರು ಆರೋಪಿ ರಾಜೇಶ್ ಒರಾಖಿಯಾನನ್ನು ಬಂಧಿಸಿದ್ದಾರೆ.

ಟೈಮ್ಸ್ ಆಫ್ ಇಂಡಿಯಾದ ವರದಿಯ ಪ್ರಕಾರ, ಆರೋಪಿಯನ್ನು ಬಂಧಿಸುವಂತೆ ಕೋರಿ ಸಂತ್ರಸ್ತೆಯ ಕುಟುಂಬವು ಮಮ್ಲತ್ದಾರ್ (ಆಡಳಿತ) ಕಚೇರಿಯ ಹೊರಗೆ ಪ್ರತಿಭಟನೆ ನಡೆಸಿದ ನಂತರ ಈ ಘಟನೆ ಬೆಳಕಿಗೆ ಬಂದಿತ್ತು.

ಆರೋಪಿಯು ತನ್ನ ಪತ್ನಿಯ ಸಹೋದರಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದು, ಆಕೆಯನ್ನು ಮದುವೆಯಾಗಲು ಬಯಸಿದ್ದರಿಂದ ಪತ್ನಿಯನ್ನು ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ರಾಜೇಶ್ ಅವರ ಪತ್ನಿ ರಂಜನ್ ಏಡ್ಸ್ ನಿಂದ ಬಳಲುತ್ತಿದ್ದರು.

ಆರು ವರ್ಷಗಳ ಹಿಂದೆ ವಿವಾಹವಾದ ರಾಜೇಶ್ ಹಾಗೂ ರಂಜನಾ ದಂಪತಿಗೆ ಒಬ್ಬ ಮಗನಿದ್ದಾನೆ. ಕಳೆದ ವರ್ಷ ಮಹಿಳೆಗೆ ಏಡ್ಸ್ ಇರುವುದು ಪತ್ತೆಯಾಗಿತ್ತು. ಹೆಂಡತಿಗೆ ಏಡ್ಸ್  ಇರುವುದು ತಿಳಿದ ನಂತರ, ಆರೋಪಿ ರಾಜೇಶ್, ಪತ್ನಿ ರಂಜನಾಳ ತಂಗಿ ಇಂದೂ ಜೊತೆ ಅಕ್ರಮ ಸಂಬಂಧ ಬೆಳೆಸಿದ್ದಲ್ಲದೇ, ಆಕೆಯೊಂದಿಗೆ 9 ತಿಂಗಳ ಹಿಂದೆ  ಓಡಿ ಹೋಗಿದ್ದ. ಇದರಿಂದ ಮನನೊಂದ ರಂಜನಾ ಗಂಡನ ಮನೆತೊರೆದು ಪೋಷಕರೊಂದಿಗೆ ವಾಸವಾಗಿದ್ದಳು. ಆದರೆ ಇತ್ತೀಚೆಗೆ ಮರಳಿ ಬಂದ ಆತ  ತನ್ನ ಪತ್ನಿಯನ್ನು ವಾಪಸ್ ಬರುವಂತೆ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದ.

ಮನೆಗೆ ಬಂದ ಒಂದು ತಿಂಗಳ ನಂತರ ರಂಜನಾಳನ್ನು ಮೊಬೈಲ್ ಫೋನ್ ಚಾರ್ಜರ್ ವೈರ್ನಿಂದ ಕತ್ತು ಬಿಗಿದು ಕೊಲೆ ಮಾಡಿ ನಂತರ ಶವವನ್ನು ಹೂತು ಹಾಕಿದ್ದ. ಶವ ಹೂತು ಹಾಕಿದ ಬಳಿಕ ಆರೋಪಿ ರಾಜೇಶ್ ತನ್ನ ಪತ್ನಿ ಚಿನ್ನಾಭರಣಗಳೊಂದಿಗೆ ಮನೆ ಬಿಟ್ಟು ಹೋಗಿದ್ದಾಳೆ ಎಂದು ಪೊಲೀಸರಿಗೆ ದೂರು ನೀಡಿದ್ದ. ಆದರೆ  ಪತ್ನಿ ರಂಜನಾಳ ತಂದೆ ರಂಜನಾಳನ್ನು ಆಕೆಯ ಪತಿಯೇ ಕೊಲೆ ಮಾಡಿದ್ದಾನೆ ಎಂದು ದೂರು ನೀಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಭಾರತದ ನಾಗರಿಕ ಅಲ್ಲದಿದ್ದರೂ ಆಧಾರ್ ಕಾರ್ಡ್ ಇದೆ ಎಂದು ಮತದಾನ ಅವಕಾಶ ನೀಡಬೇಕೇ: ಸುಪ್ರೀಂಕೋರ್ಟ್ ತಪರಾಕಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments