Webdunia - Bharat's app for daily news and videos

Install App

ಅಡುಗೆ ಸರಿಯಾಗಿಲ್ಲವೆಂದು ಪತ್ನಿಗೆ ಪತಿ ಮಾಡಿದ್ದು ಕೇಳಿದ್ರೆ ದಂಗಾಗುತ್ತೀರಿ

Webdunia
ಗುರುವಾರ, 14 ಡಿಸೆಂಬರ್ 2023 (10:52 IST)
ಆರೋಪಿ ಪತಿ  ಮಟನ್ ತಂದು ಚೆನ್ನಾಗಿ ಕರ್ರಿ ಮಾಡುವಂತೆ ಪತ್ನಿಗೆ ಹೇಳಿದ್ದಾನೆ. ಮಟನ್ ಕರ್ರಿ ತಿಂದ ನಂತರ ಚೆನ್ನಾಗಿ ಬೇಯಿಸಿಲ್ಲ ಪತ್ನಿಯ ಮೇಲೆ ಹಲ್ಲೆ ಮಾಡಿದ್ದಾನೆ. ನಂತರ ಕೋಪದ ಭರದಲ್ಲಿ ಆಕೆಯ ಮೇಲೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾನೆ ಎನ್ನಲಾಗಿದೆ. ಪತಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಪತ್ನಿ ಮಟನ್ ಕರ್ರಿ ಸರಿಯಾಗಿ ಬೇಯಿಸಿಲ್ಲ ಎನ್ನುವ ಕಾರಣಕ್ಕೆ ಕುಡುಕ ಪತಿಮಹಾಶಯನೊಬ್ಬ ಆಕೆಗೆ ಬೆಂಕಿ ಹಚ್ಚಿ ಜೀವಂತವಾಗಿ ದಹಿಸಿದ ಘಟನೆ ವರದಿಯಾಗಿದೆ.
 
ಮೈಲಾರ್‌ದೇವ್‌ಪಲ್ಲಿ ಪೊಲೀಸ್ ಠಾಣೆ ವ್ಯಾಪ್ತಿಯ ಕಾಟೇದಾನ್ ಪ್ರದೇಶದ ವಾಸಿಯಾಗಿರುವ ಕಾರ್ಮಿಕನಾದ ಶಂಕರ್ ರಾವ್, ಮನೆಗೆಲಸದವಳಾಗಿ ಕಾರ್ಯನಿರ್ವಹಿಸುತ್ತಿರುವ 40 ವರ್ಷ ವಯಸ್ಸಿನ ಪತ್ನಿ ಸುಲೋಚನಾ ಮೇಲೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.  
 
ಮನೆಯಲ್ಲಿದ್ದ ಸುಲೋಚನಾ ತಾಯಿ ಮತ್ತು ಪುತ್ರಿ ಕೂಡಲೇ ಮನೆಯಿಂದ ಹೊರಗೆ ಧಾವಿಸಿ ನೆರಹೊರೆಯವರ ಸಹಾಯ ಬೇಡಿದ್ದಾರೆ. ಕೂಡಲೇ ಜನರು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
 
ಬೆಂಕಿಯಿಂದ ಗಾಯಗೊಂಡ ಮಹಿಳೆ ಸುಲೋಚನಾಳನ್ನು  ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಚಿಕಿತ್ಲೆ ಫಲಕಾರಿಯಾಗದೆ ಆಕೆ ಸಾವನ್ನಪ್ಪಿದ್ದಾಳೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಹತೈ ಮತ್ತು ದೈಹಿಕ ಹಲ್ಲೆ ಆರೋಪಗಳ ಹಿನ್ನೆಲೆಯಲ್ಲಿ ಪೊಲೀಸರು ಕುಡುಕ ಪತಿಯನ್ನು ಬಂಧಿಸಿ ನ್ಯಾಯಾಂಗದ ವಶಕ್ಕೆ ಒಪ್ಪಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments