ಮುಂಬೈನಲ್ಲಿ ಅತಿದೊಡ್ಡ ಕನ್ವೆನ್ಶನ್ ಸೆಂಟರ್

Webdunia
ಭಾನುವಾರ, 6 ಮಾರ್ಚ್ 2022 (09:05 IST)
ಮುಂಬೈ : ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ದೇಶದ ಅತಿದೊಡ್ಡ ಮತ್ತು ಅತ್ಯಂತ ಪ್ರತಿಷ್ಠಿತ ಬಹುಮುಖಿ ತಾಣವಾದ ಜಿಯೋ ವರ್ಲ್ಡ್ ಸೆಂಟರ್ ಅನ್ನು ತೆರೆಯುವುದಾಗಿ ಘೋಷಿಸಿದೆ.

ಮುಂಬೈನ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ 18.5 ಎಕರೆಗಳಷ್ಟು ವಿಸ್ತಾರವಾದ ಪ್ರದೇಶವನ್ನು ಹೊಂದಿದ್ದು, ಭಾರತದ ನಾಗರಿಕರಿಗೆ ವ್ಯಾಪಾರ, ವಾಣಿಜ್ಯ ಮತ್ತು ಸಂಸ್ಕೃತಿಯ ಅನುಭವ ನೀಡುವ ತಾಣವಾಗುವ ಮೂಲಕ ವಿಶ್ವದರ್ಜೆಯ ಗುಣಮಟ್ಟವನ್ನು ಒದಗಿಸಲು ಸಿದ್ಧವಾಗಿದೆ.

ಸಾಂಸ್ಕೃತಿಕ ಕೇಂದ್ರ, ಸಂಗೀತ ಕಾರಂಜಿ, ಉನ್ನತ ಮಟ್ಟದ ರಿಟೇಲ್ ಅನುಭವ, ಕೆಫೆಗಳು ಮತ್ತು ಉತ್ತಮ ಭೋಜನದ ರೆಸ್ಟೋರೆಂಟ್ಗಳು, ಸರ್ವಿಸ್ಡ್ ಅಪಾರ್ಟ್ಮೆಂಟ್ಗಳು ಮತ್ತು ಕಛೇರಿಗಳು, ಸ್ಟೇಟ್-ಆಫ್ ದಿ- ಆರ್ಟ್ ಸೌಲಭ್ಯಗಳನ್ನು ಒಳಗೊಂಡಿರುವ ಭಾರತದ ಮೊದಲ ತಾಣ ಜಿಯೋ ವರ್ಲ್ಡ್ ಸೆಂಟರ್ ಆಗಿರಲಿದೆ.

ಒಬೆರಾಯ್ 360 ಸೇರಿದಂತೆ ಹಲವು ಹೊಸ ಹಾಗೂ ನವೀನ ಜಾಗತಿಕ ಪಾಕಶಾಲೆಯ ಪರಿಕಲ್ಪನೆಯನ್ನು ಕನ್ವೆನ್ಶನ್ ಸೆಂಟರ್ ಒಳಗೊಂಡಿರಲಿದೆ. ಇಂಡಿಯಾ ಆಕ್ಸೆಂಟ್ ನಂಥ ವಿಶ್ವ ದರ್ಜೆಯ ಶಾಪಿಂಗ್ ಅನುಭವ ಮತ್ತು ಐಷಾರಾಮಿ ಬ್ರಾಂಡ್ಗಳು ಇಲ್ಲಿ ಲಭ್ಯವಿರಲಿವೆ.

ಸಾಂಸ್ಕೃತಿಕವಾಗಿ ಮನಸೂರೆಗಳ್ಳುವ ಅನುಭವಗಳ ಸಾಂಸ್ಕೃತಿಕ ಕೇಂದ್ರಬಿಂದುವಾಗಿ, ಕಲಾತ್ಮಕ ಸಮುದಾಯದ ಭಾಗವಾಗಿ ಇದು 2023ರಲ್ಲಿ ಆರಂಭವಾಗಲಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಗೆ ಸಂಕಷ್ಟ

ನೋಬೆಲ್‌ ಪ್ರಶಸ್ತಿಗಾಗಿ ಹಂಬಲಿಸುತ್ತಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ಕೊನೆಗೂ ಸಿಕ್ತು ಶಾಂತಿ ಗೌರವ

ಕಾಂಗ್ರೆಸ್ ಪಕ್ಷದಿಂದ ಡಾ. ಅಂಬೇಡ್ಕರರ ಬಗ್ಗೆ ಮೊಸಳೆಕಣ್ಣೀರು: ವಿಜಯೇಂದ್ರ

ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಬೇಕು ಎಂದ ಕುಮಾರಸ್ವಾಮಿ: ಸಿದ್ದರಾಮಯ್ಯ ಹೇಳಿದ್ದೇನು

ಹಿಂದೂ ಧರ್ಮದಲ್ಲಿರುವ ಜಾತಿ ವ್ಯವಸ್ಥೆಯಿಂದ ರೋಸಿ ಅಂಬೇಡ್ಕರ್ ಬೌದ್ಧ ಧರ್ಮ ಸೇರಿದ್ದರು: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments