Webdunia - Bharat's app for daily news and videos

Install App

ಹೆಚ್ಚು ಪದಕ ಗೆಲ್ಲುವ ಗುರಿ ನಮ್ಮದಾಗಬೇಕು : ಅಮಿತ್ ಶಾ

Webdunia
ಬುಧವಾರ, 4 ಮೇ 2022 (08:04 IST)
ಬೆಂಗಳೂರು : ಮುಂದಿನ ಒಲಿಂಪಿಕ್ಗಳಲ್ಲಿ ಹೆಚ್ಚು ಪದಕಗಳನ್ನು ಗೆಲ್ಲುವ ಗುರಿ ನಮ್ಮದಾಗಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆಶಯ ವ್ಯಕ್ತಪಡಿಸಿದ್ದಾರೆ.

ಖೇಲೋ ಇಂಡಿಯಾ ಯುನಿವರ್ಸಿಟಿ ಗೇಮ್-2021 ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, 2014ರ ಮುಂಚೆ ಕ್ರಿಕೆಟ್ಗೆ ಮಾನ್ಯತೆ ದೇಶದಲ್ಲಿ ಹೆಚ್ಚು ಇತ್ತು. ಅಂತರರಾಷ್ಟ್ರೀಯ ಕ್ರೀಡೆಯಲ್ಲಿ ನಮ್ಮ ಕ್ರೀಡಾಪಟುಗಳು ಪದಕ ತರುತ್ತಿರಲಿಲ್ಲ.

ಮೋದಿ ಅವರು 2014ರಲ್ಲಿ ಆಡಳಿತಕ್ಕೆ ಬಂದ ಮೇಲೆ ಕ್ರೀಡೆಗೆ ಮೊದಲ ಆದ್ಯತೆ ಕೊಟ್ಟರು. ಕ್ರೀಡೆಗೆ ಹೆಚ್ಚು ಪ್ರೋತ್ಸಾಹ ಕೊಟ್ಟರು. ಇವತ್ತು ನಮ್ಮ ಕ್ರೀಡಾಪಟುಗಳು ಪದಕ ತರುತ್ತಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. 

ನಮ್ಮ ಕ್ರೀಡಾ ಸಚಿವರು ಅತ್ಯುತ್ತಮ ಕ್ರೀಡಾಕೂಟ ವ್ಯವಸ್ಥೆ ಮಾಡಿದ್ದಾರೆ. ಉತ್ತಮ ಕೋಚ್ ವ್ಯವಸ್ಥೆ, ಎಲ್ಲಾ ಸೌಲಭ್ಯವನ್ನು ಕೇಂದ್ರ ಸರ್ಕಾರ ನೀಡುತ್ತಿದೆ. ಹೀಗಾಗಿ ದೇಶದಲ್ಲಿ ಇವತ್ತು ಕ್ರೀಡಾ ಕ್ಷೇತ್ರದಲ್ಲಿ ಬದಲಾವಣೆ ಆಗಿದೆ. ಕ್ರೀಡಾ ಜೀವನದ ಅಂಗ. ಕ್ರೀಡೆ ಗೊತ್ತಿರುವವನು ಎಲ್ಲವನ್ನೂ ಎದುರಿಸುತ್ತಾನೆ.

130 ಕೋಟಿ ಜನಸಂಖ್ಯೆಯಿರುವ ದೇಶದಲ್ಲಿ ಮೊದಲ ಪದಕ ತರಲು ಆಗ್ತಿರಲಿಲ್ಲ. ಇವತ್ತು ಪದಕ ಗಳು ನಮ್ಮ ದೇಶಕ್ಕೆ ಬರುತ್ತಿದೆ. ಇದು 2014 ನಂತರದ ಪರಿವರ್ತನೆ. ಅಲ್ಪ ಕಾಲದಲ್ಲಿ ಮೋದಿ ಅವರು ಈ ಸಾಧನೆ ಮಾಡಿದ್ದಾರೆ ಎಂದು ಬಣ್ಣಿಸಿದ್ದಾರೆ.

100 ವರ್ಷಗಳ ಸ್ವಾತಂತ್ರ್ಯ ಸಂಭ್ರಮದಲ್ಲಿ ಭಾರತ ಒಲಿಂಪಿಕ್ಸ್ ಪದಕ ಪಟ್ಟಿಯಲ್ಲಿ ಟಾಪ್ 5ರ ಸ್ಥಾನದಲ್ಲಿ ಇರಬೇಕು ಅನ್ನೋ ಸಂಕಲ್ಪವನ್ನು ಮೋದಿ ಮಾಡಿದ್ದಾರೆ. ಹೀಗಾಗಿ ವಿವಿ ಗೇಮ್ ಪ್ರಾರಂಭ ಮಾಡಿದ್ದಾರೆ. ಕ್ರೀಡೆಗೆ ಉತ್ತಮ ಸೌಲಭ್ಯಗಳನ್ನು ನೀಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ, ಕಾಳುಮೆಣಸು ಬೆಳೆಗಾರರಿಗೆ ನಿರಾಸೆ, ಕೊಬ್ಬರಿ ಬೆಳೆಗಾರರಿಗೆ ಬಂಪರ್

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Kerala Rains: ಕಾಸರಗೋಡಿನಲ್ಲಿ ವಿಪರೀತ ಮಳೆ, ಮಧೂರು ದೇವಾಲಯದೊಳಗೇ ನುಗ್ಗಿದ ನೀರು

KSRTC Tour package: ಹೊಸ ಟೂರ್ ಪ್ಯಾಕೇಜ್, ಕಡಿಮೆ ದರದಲ್ಲಿ ಮೂರು ಸ್ಥಳಗಳಿಗೆ ಟೂರ್, ವಿವರ ಇಲ್ಲಿದೆ

ಯುಪಿಎ ಕಾಲದಲ್ಲಿಆರು ಬಾರಿ ಸರ್ಜಿಕಲ್ ಸ್ಟ್ರೈಕ್ ಮಾಡಿದ್ದೆವು ಎಂದ ರಣದೀಪ್ ಸುರ್ಜೇವಾಲಾ

ಮುಂದಿನ ಸುದ್ದಿ
Show comments