Select Your Language

Notifications

webdunia
webdunia
webdunia
webdunia

ಅಸ್ತಿತ್ವಕ್ಕಾಗಿ ಕಾಂಗ್ರೆಸ್ ಹೋರಾಡುತ್ತಿದೆ ಎಂದ ಸಚಿವ

ಅಸ್ತಿತ್ವಕ್ಕಾಗಿ ಕಾಂಗ್ರೆಸ್ ಹೋರಾಡುತ್ತಿದೆ ಎಂದ ಸಚಿವ
ಹಾವೇರಿ , ಮಂಗಳವಾರ, 29 ಸೆಪ್ಟಂಬರ್ 2020 (12:49 IST)
ಪ್ರಧಾನಿ ಮೋದಿ ಅವರು ಸಾಮಾನ್ಯ ಸಣ್ಣ ರೈತನಿಗೂ ಅನುಕೂಲ ಆಗುವಂತಹ ಕೃಷಿ ಕಾಯ್ದೆಗಳನ್ನು ಜಾರಿಗೆ ತಂದಿದ್ದಾರೆ.

ವಿನಾಕಾರಣ ಕಾಂಗ್ರೆಸ್, ಜೆಡಿಎಸ್ ವಿರೋಧಿಸುತ್ತಿವೆ. ಭೂ ಸುಧಾರಣಾ ಕಾಯ್ದೆ ತಿದ್ದುಪಡಿಯಿಂದ ರಾಜ್ಯದಲ್ಲಿ ಪಾಳುಬಿದ್ದಿರುವ 30-40 ಸಾವಿರ ಹೆಕ್ಟೇರ್ ಭೂಮಿಯಲ್ಲಿ ಕೃಷಿ ಚಟುವಟಿಕೆ ನಡೆಯಲು ಸಾಧ್ಯವಾಗುತ್ತದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದ್ದಾರೆ.

ಹಿರೇಕೆರೂರಿನಲ್ಲಿ ಮಾತನಾಡಿದ ಅವರು, ‘ಕಾಂಗ್ರೆಸ್ ಹೇಳುವುದೊಂದು ಮಾಡುವುದು ಇನ್ನೊಂದು.
ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಎಪಿಎಂಸಿ ಕಾಯ್ದೆ ತಿದ್ದುಪಡಿ ಬಗ್ಗೆ ಸ್ಪಷ್ಟವಾಗಿ ಹೇಳಿತ್ತು. ಅಲ್ಲದೇ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಬಗ್ಗೆ ಡಿ.ಕೆ.ಶಿವಕುಮಾರ್, ಆರ್.ವಿ.ದೇಶಪಾಂಡೆ, ಮಲ್ಲಿಕಾರ್ಜುನ ಖರ್ಗೆ ಅವರೇ ಹೇಳಿದ್ದರು. ಅವರು ಹೇಳಿದಂತೆಯೇ ಈಗ ಕಾಯ್ದೆ ತಿದ್ದುಪಡಿ ಮಾಡಲಾಗಿದೆ’.

‘ಕಾಂಗ್ರೆಸ್ ನಾಯಕರೇ 79 ‘ಎ’ ಮತ್ತು ‘ಬಿ’ ಯನ್ನು ಕೈಬಿಡಬೇಕೆಂದು ವಿಧಾನಸಭೆಯಲ್ಲಿಯೇ ಹೇಳಿದ್ದರು. ಅದು ವಿಧಾನಸಭೆಯಲ್ಲಿ ದಾಖಲೆಯೂ ಆಗಿದೆ. ಆದರೆ ಈಗ ರಾಜಕೀಯ ದುರುದ್ದೇಶಕ್ಕಾಗಿ ವಿರೋಧಿಸುತ್ತಿದ್ದಾರೆ’ ಎಂದು ಟೀಕಿಸಿದರು.

ಕಾಂಗ್ರೆಸ್ ಪಕ್ಷ ಸಂಪೂರ್ಣ ಅಸ್ತಿತ್ವ ಕಳೆದುಕೊಳ್ಳುತ್ತಿದ್ದು, ಈಗ ಅದನ್ನು ಉಳಿಸಿಕೊಳ್ಳಲು ಹೋರಾಟ ಮಾಡುತ್ತಿದೆ’ ಎಂದು ಹೇಳಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಐವರು ಹುರಿದು ಮುಕ್ಕಿದ್ದಕ್ಕೆ ಯುವತಿಯ ಜೀವ ಬಲಿ