Webdunia - Bharat's app for daily news and videos

Install App

ತಾಯ್ತನ, ಕೆರಿಯರ್ ಒಟ್ಟಿಗೆ ನಿಭಾಯಿಸೋ ಕಷ್ಟ ಹೆಣ್ಣಿಗಷ್ಟೇ ಗೊತ್ತು ಎಂದ ಕೋರ್ಟ್

Webdunia
ಶುಕ್ರವಾರ, 6 ಆಗಸ್ಟ್ 2021 (12:39 IST)
ತಿರುವನಂತಪುರಂ(ಆ.05): ಮೆಟರ್ನಿಟಿ ರಜೆ ತೆಗೆದುಕೊಳ್ಳುವುದು ಹೆಣ್ಮಕ್ಕಳಿಗೆ ಉದ್ಯೋಗದಲ್ಲಿದ್ದಾಗ ಎದುರಾಗುವ ದೊಡ್ಡ ಸಮಸ್ಯೆ. ಬಹಳಷ್ಟು ಸಲ ಕೆಲಸ ಬಿಡು, ಇಲ್ಲ ಕಚೇರಿಗೆ ಬಾ ಎಂದಷ್ಟೇ ಆಯ್ಕೆಗಳು ತಾಯಿಯಾಗುವ ಹೆಣ್ಣಿನ ಮುಂದಿರುತ್ತದೆ. ನವಜಾತ ಶಿಶುವನ್ನು ಬಿಟ್ಟು ಕಚೇರಿಗೆ ಹೋಗುವುದು ಸಾಧ್ಯವಿಲ್ಲ ಎಂದಾದಾಗ ಬಹಳಷ್ಟು ಹೆಣ್ಣುಮಕ್ಕಳು ಕುಟುಂಬ ಮುಖ್ಯ ಎಂದು ಕೆಲಸದ ಆಸೆಯನ್ನೇ ಬಿಟ್ಟು ಮನೆ ಸೇರಬೇಕಾಗುತ್ತದೆ. ಈ ಮೂಲಕ ಅವರ ಆರ್ಥಿಕ ವರಮಾನವೂ ನಿಲ್ಲುತ್ತದೆ.

ಇಂತಹದ್ದೇ ಒಂದು ಘಟನೆ ಕೇರಳದಲ್ಲಿ ವರದಿಯಾಗಿದೆ.
ಅಮ್ಮನಾಗಲಿರುವ ಮಹಿಳೆ ರಜೆ ಕೇಳಿದ್ದಾರೆ. ರಜೆ ಸಿಗದಿದ್ದಾಗ ರಜೆ ತೆಗೆದುಕೊಳ್ಳಲು ಮುಂದಾಗಿದ್ದಾರೆ. ಆ ಸಂದರ್ಭದಲ್ಲಿ ಅವರನ್ನು ಕೆಲಸದಿಂದಲೇ ತೆಗೆದುಹಾಕಲಾಗಿದೆ. ಈ ವಿಚಾರವಾಗಿ ನ್ಯಾಯಾಲಯದ ಮೆಟ್ಟಿಲೇರಿದ ಮಹಿಳೆಗೆ ಕೊನೆಗೂ ನ್ಯಾಯ ಸಿಕ್ಕಿದೆ. ಈಕೆಯ ವಿಚಾರಣೆಯನ್ನು ನಡೆಸಿದ ಕೋರ್ಟ್ ಕೆಲವು ಸೂಕ್ಷ್ಮ ವಿಚಾರಗಳನ್ನೂ ಎತ್ತಿ ಹಿಡಿದಿದೆ.
ಮಹಿಳೆಗೆ ಹೆರಿಗೆ ರಜೆ ನಿರಾಕರಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ ಮಹಿಳೆ ಕೇರಳ ಹೈಕೋರ್ಟ್ ನ್ಯಾಯ ಒದಗಿಸಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಹೆರಿಗೆ ರಜೆ ನೀಡದೆ ಆಕೆಯನ್ನು ಕೆಲಸದಿಂದ ತೆಗೆಯಲಾಗಿತ್ತು. ಆದರೆ ಮಹಿಳೆಯನ್ನು ಕೆಲಸದಿಂದ ತೆಗೆದು ಹಾಕಲು ಸರ್ಕಾರ ಹೇಳಿರುವ ಕಾರಣವನ್ನು ಕೋರ್ಟ್ ತಳ್ಳಿ ಹಾಕಿದೆ. ಅರ್ಜಿ ವಿಚಾರಣೆ ನಡೆಸಿದ ನ್ಯಾ. ದೇವನ್ ರಾಮಚಂದ್ರನ್ ಅವರು ತೀರ್ಪು ಹೇಳುವಾಗ ತಾಯ್ತನ ಮತ್ತು ಕೆರಿಯರ್ ಜೊತೆಗೇ ನಿರ್ವಹಿಸುವುದು ಎಷ್ಟು ಕಷ್ಟ ಎಂದು ಒಬ್ಬ ಹೆಣ್ಣು ಮಾತ್ರ ತಿಳಿಯಲು ಸಾಧ್ಯ ಎಂದಿದ್ದಾರೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಕಾಂಟ್ರಾಕ್ಟ್ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ವಂದನಾ ಶ್ರೀಮೇಧಾ ಎಂಬ ಮಹಿಳೆ ಹೆರಿಗೆ ರಜೆ ನೀಡದ್ದಕ್ಕೆ ಕೋರ್ಟ್ ಮೆಟ್ಟಿಲೇರಿದ ಮಹಿಳೆ. ಅನಧಿಕೃತ ಗೈರುಹಾಜರಿಗಾಗಿ ಅವರನ್ನು ಸೇವೆಯಿಂದ ವಜಾ ಮಾಡಲಾಗಿತ್ತು. ತನ್ನ ಮನವಿಯಲ್ಲಿ ಹೆರಿಗೆ ರಜೆಗಾಗಿ ತಾನು ನೀಡಿದ ವಿನಂತಿಯನ್ನು ತಿರಸ್ಕರಿಸಲಾಗಿದೆ ಎಂದು ಅವರು ವಾದಿಸಿದ್ದಾರೆ.
ಹೆರಿಗೆ ರಜೆಗಾಗಿ ಸಂಬಂಧ ಪಟ್ಟ ಇಲಾಖೆ ಪ್ರತಿನಿಧಿಗಳನ್ನು, ಲವಾರು ಅಧಿಕಾರಿಗಳನ್ನು ಸಂಪರ್ಕಿಸಿದ್ದೇನೆ. ಎಲ್ಲಾ ಪ್ರಯತ್ನಗಳು ವ್ಯರ್ಥವಾಯಿತು ಎಂದು ಶ್ರೀಮೇಧಾ ಹೇಳಿದ್ದಾರೆ. ನಂತರ ವಕೀಲ ಬಿ. ಮೋಹನ್ಲಾಲ್ ಅವರು ಈ ಅರ್ಜಿ ಸಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments