Webdunia - Bharat's app for daily news and videos

Install App

ಶಾಂತಿಯುತ ಸತ್ಯಾಗ್ರಹ ಸರ್ಕಾರಕ್ಕೆ ಇಷ್ಟವಾಗಿಲ್ಲ; ಅದಕ್ಕಾಗಿ ಭಾರತ್ ಬಂದ್-ರಾಹುಲ್

Webdunia
ಸೋಮವಾರ, 27 ಸೆಪ್ಟಂಬರ್ 2021 (11:55 IST)
ನವದೆಹಲಿ : 'ಮೂರು ಕೃಷಿ ಕಾಯ್ದೆಗಳ ವಿರುದ್ಧ ಹಿಂಸಾರಹಿತವಾಗಿ 'ಸತ್ಯಾಗ್ರಹ' ನಡೆಸುವ ಕೃಷಿಕರ ಸಂಕಲ್ಪ ದೃಢವಾಗಿದೆ. ಆದರೆ, ಶೋಷಣೆ ಮನೋಭಾವದ ಸರ್ಕಾರಕ್ಕೆ ಇದು ಇಷ್ಟವಾಗುತ್ತಿಲ್ಲ. ಹೀಗಾಗಿಯೇ 'ಭಾರತ್ ಬಂದ್' ಪ್ರತಿಭಟನೆಗೆ ಕರೆ ನೀಡಲಾಗಿದೆ' ಎಂದು ಕಾಂಗ್ರೆಸ್ ಮುಖಂಡ ರಾಹುಲ್ಗಾಂಧಿ ಹೇಳಿದ್ದಾರೆ.

ಕೇಂದ್ರದ ಮೂರು ಕೃಷಿ ತಿದ್ದುಪಡಿ ಕಾಯ್ದೆಗಳ ವಿರುದ್ಧದ ನಡೆಯುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸಿ ಕಾಂಗ್ರೆಸ್ ಪಕ್ಷದ ರಾಜ್ಯ ಘಟಕಗಳ ಮುಖ್ಯಸ್ಥರು, ಅಧ್ಯಕ್ಷರು, ಮುಂಚೂಣಿ ಸಂಘಟನೆಗಳೂ ಪ್ರತಿಭಟನೆ ನಡೆಸಬೇಕು ಎಂದು ಹೇಳಿದ್ದಾರೆ.
ಸಂಯುಕ್ತ ಕಿಸಾನ್ ಮೋರ್ಚಾ (ಎಸ್ಕೆಎಂ) ನೀಡಿರುವ ಕರೆಯಂತೆ ಸೋಮವಾರ ದೇಶದಾದ್ಯಂತ ನಡೆಯುವ 10 ಗಂಟೆ ಅವಧಿಯ ಈ ಮುಷ್ಕರಕ್ಕೆ ಎನ್ಡಿಎಯೇತರ ವಿವಿಧ ಪಕ್ಷಗಳು ಕೈಜೋಡಿಸಿವೆ.
ಪ್ರತಿಭಟನೆ ಬೆಂಬಲಿಸಿ 'ಐ ಸ್ಟ್ಯಾಂಡ್ ವಿತ್ ಫಾರ್ಮರ್ಸ್' ಹ್ಯಾಷ್ಟ್ಯಾಗ್ನೊಂದಿಗೆ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. ಮುಷ್ಕರ ನಿರತ ರೈತ ಸಂಘಟನೆಗಳೊಂದಿಗೆ ಸರ್ಕಾರ ಈಗಾಗಲೇ 11 ಸುತ್ತು ಮಾತುಕತೆ ನಡೆಸಿದ್ದು, ಫಲಪ್ರದವಾಗಿಲ್ಲ. ಜನವರಿ 26ರಂದು ದೆಹಲಿಯಲ್ಲಿ ನಡೆದ ಹಿಂಸಾಚಾರದ ಬಳಿಕ ಚರ್ಚೆ ಮುಂದುವರಿದಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್ಮಾ ಜಾರಿ ಮಾಡಿದ್ರೂ ಹೆದರಲ್ಲ: ಆ.5ರಂದು ಸಾರಿಗೆ ಸೇವೆ ಸ್ಥಗಿತಗೊಳಿಸಿ ಅನಿರ್ಧಿಷ್ಟಾವಧಿ ಮುಷ್ಕರದ ಎಚ್ಚರಿಕೆ

ಜಗದೀಪ್ ಧನಕರ್ ರಾಜೀನಾಮೆ: ಉಪ ರಾಷ್ಟ್ರಪತಿ ಹುದ್ದೆಯ ಚುನಾವಣಾ ಪ್ರಕ್ರಿಯೆ ಆರಂಭಿಸಿದ ಆಯೋಗ

ಧರ್ಮಸ್ಥಳ ಪ್ರಕರಣ: ರಾಜ್ಯ ಸರ್ಕಾರದಿಂದ ಎಸ್‌ಐಟಿಗೆ 20 ಪೊಲೀಸ್ ಅಧಿಕಾರಿಗಳ ನಿಯೋಜನೆ

ಬಾ ನಲ್ಲ ಮಧುಚಂದ್ರಕೆ ಪ್ರಕರಣ: ಪತಿ ಕೊಂದು ಜೈಲು ಸೇರಿದ್ದ ಸೋನಂ ನಡವಳಿಕೆಗೆ ಶಾಕ್

ಸುಳ್ಳು, ವಂಚನೆ ಮಾಡೋದೇ ಕಾಂಗ್ರೆಸ್ ಸರ್ಕಾರದ ಕೆಲಸ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments