Webdunia - Bharat's app for daily news and videos

Install App

ರೈತರ ಪ್ರತಿಭಟನೆ ಅಂತ್ಯ ಆಗುತ್ತಾ?

Webdunia
ಗುರುವಾರ, 9 ಡಿಸೆಂಬರ್ 2021 (15:43 IST)
ಕಳೆದೊಂದು ವರ್ಷದಿಂದ ದೆಹಲಿಯ ಸಿಂಘು ಗಡಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಇಂದು ಕೊನೆಗೊಳ್ಳುವ ಸಾಧ್ಯತೆ ಇದೆ.

ವಿವಾದಿತ ಮೂರು ಕೃಷಿ ಮಸೂದೆ ರದ್ಧಾದ ಬಳಿಕವೂ ತಮ್ಮ ಪ್ರತಿಭಟನೆ ಮುಂದುವರೆಸಿದ್ದ ರೈತ ಸಂಘಟನೆಗಳು  ಕನಿಷ್ಠ ಬೆಂಬಲ ಬೆಲೆ, ಪ್ರತಿಭಟನೆ ವೇಳೆ ಸಾವನ್ನಪ್ಪಿದ ರೈತರ ಕುಟುಂಬಕ್ಕೆ ಪರಿಹಾರ ಸೇರಿದಂತೆ ಹಲವು ಬೇಡಿಕೆಗಳನ್ನು ಕೇಂದ್ರ ಸರ್ಕಾರ ಮುಂದೆ ಇರಿಸಿದ್ದರು.
ಈ ಕುರಿತು ನಿನ್ನೆ ದೆಹಲಿಯಲ್ಲಿ ಸರ್ಕಾರದ ಜೊತೆ ಮಾತುಕತೆ ನಡೆಸಿದ ಬಳಿಕ ಅವರು ತಮ್ಮ ಈ ವರ್ಷದ ಹೋರಾಟಕ್ಕೆ ಇಂದು ಅಂತಿಮ ಹಾಡಲು ಮುಂದಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸರ್ಕಾರವು ರೈತರ ಎಲ್ಲಾ ಬೇಡಿಕೆಗಳನ್ನು ಅಂಗೀಕರಿಸಿದ ಹಿನ್ನಲೆ ಅವರು ಈ ತೀರ್ಮಾನ ನಡೆಸಿದ್ದು, ಈ ಬಗ್ಗೆ ಇಂದು ರೈತ ಸಂಘಟನೆ ನಿರ್ಧಾರ ಪ್ರಕಟಿಸಲಿದ್ದು, ನಾಳೆ ಪ್ರತಿಭಟನಾ ಸ್ಥಳಗಳನ್ನು ಬಿಟ್ಟು ಹೊರಡಲಿದ್ದಾರೆ.
ಕೃಷಿ ಕಾನೂನು ಹಿಂಪಡೆಯಬೇಕು ಎಂದು ರೈತರು ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ರೈತರ ಮೇಲೆ ದಾಖಲಾದ ಎಲ್ಲಾ ಪ್ರಕರಣಗಳನ್ನು ಹಿಂಪಡೆಯಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದ ನಂತರ ರೈತರ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳುವುದಾಗಿ ತಿಳಿಸಿತು. ಜೊತೆಗೆ ಕೇಂದ್ರ ಸರ್ಕಾರ ಎಸ್ಕೆಎಂ ಅಥವಾ ಇತರೆ ಸಂಬಂಧಿತ ರೈತ ಸಂಘಗಳೊಂದಿಗೆ ಸಮಾಲೋಚಿಸಿದ ನಂತರವೇ ವಿದ್ಯುತ್ ತಿದ್ದುಪಡಿ ಮಸೂದೆಯನ್ನು ಮಂಡಿಸುವುದಾಗಿ ಭರವಸೆ ನೀಡಿದೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments