ರಾಖಿ ಕಟ್ಟಿಸಿಕೊಳ್ಳಲು ಬಂದವನು ಗಾಳಿಪಟದಿಂದಲೇ ಪ್ರಾಣ ಹೋಯ್ತು!

Webdunia
ಶನಿವಾರ, 13 ಆಗಸ್ಟ್ 2022 (14:58 IST)
ನವದೆಹಲಿ : ರಾಖಿ ಕಟ್ಟಿಸಿಕೊಳ್ಳಲು ಸಹೋದರಿ ಮನೆಗೆ ತೆರಳುತ್ತಿದ್ದ ಬೈಕ್ ಸವಾರನ ಗಂಟಲನ್ನು ಗಾಜಿನ ಲೇಪಿತ ಗಾಳಿಪಟದ ದಾರ ಸೀಳಿದ್ದು, ವ್ಯಕ್ತಿ ಸಾವನ್ನಪ್ಪಿರುವ ಘಟನೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆದಿದೆ.

ಇದೇ ರೀತಿ ಈ ಹಿಂದೆ ಹಲವಾರು ಅಪಘಾತಗಳಿಗೆ ಕಾರಣವಾಗಿದ್ದ ಚೈನೀಸ್ ಮಾಂಜಾ ಎಂದು ಕರೆಯಲಾಗುವ ಗಾಜಿನ ಲೇಪಿತ ಗಾಳಿಪಟದ ದಾರವನ್ನು ದೆಹಲಿಯಲ್ಲಿ 2016 ರಿಂದ ನಿಷೇಧಿಸಲಾಗಿತ್ತು. ಆದರೆ ಇದೀಗ ಎಲ್ಲೆಡೆ ವ್ಯಾಪಕವಾಗಿ ಈ ದಾರವನ್ನು ಬಳಸಲಾಗುತ್ತಿದ್ದು, ಈ ತಿಂಗಳಿನಲ್ಲಿ ದೆಹಲಿಯಲ್ಲಿ ಈ ರೀತಿಯ ಘಟನೆ ಎರಡನೇ ಬಾರಿಗೆ ಸಂಭವಿಸಿದೆ. 

ಮೃತ ವ್ಯಕ್ತಿಯನ್ನು ವಿಪಿನ್ ಕುಮಾರ್ ಲೋನಿ ಎಂದು ಗುರುತಿಸಲಾಗಿದ್ದು, ರಕ್ಷಾ ಬಂಧನ ಹಬ್ಬವನ್ನು ಆಚರಿಸಲು ತಮ್ಮ ಸಹೋದರಿ ಮನೆಗೆ ನಾಗ್ಲೋಯ್ನ ರಾಜಧಾನಿ ಪಾರ್ಕ್ನಿಂದ ತೆರಳುತ್ತಿದ್ದರು.

ಪಾರ್ಕ್ ಮೇಲ್ಸೇತುವೆ ಬಳಿ ಪತ್ನಿಯನ್ನು ಹಿಂದೆ ಕೂರಿಸಿಕೊಂಡು ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಹರಿತವಾದ ದಾರ ಕುತ್ತಿಗೆಗೆ ತಗುಲಿ ಕ್ಷಣಾರ್ಧದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. 

ನಂತರ ಸ್ಥಳೀಯರ ಸಹಾಯದಿಂದ ವಿಪಿನ್ ಕುಮಾರ್ ಲೋನಿ ಪತ್ನಿ ಅವರನ್ನು ಸಿವಿಲ್ ಲೈನ್ಸ್ನಲ್ಲಿರುವ ಟ್ರಾಮಾ ಸೆಂಟರ್ಗೆ ಕರೆದೊಯ್ದರು. ಆದರೆ ವ್ಯಕ್ತಿ ಅಷ್ಟೋತ್ತಿಗಾಗಲೇ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments