Webdunia - Bharat's app for daily news and videos

Install App

ಅತ್ಯಾಧುನಿಕ ಕ್ಯಾನ್ಸರ್ ಆಸ್ಪತ್ರೆ ಉದ್ಫಾಟಿಸಿದ ಪ್ರಧಾನಿ

Webdunia
ಶುಕ್ರವಾರ, 29 ಏಪ್ರಿಲ್ 2022 (09:05 IST)
ಗುವಾಹಟಿ : ಅಸ್ಸಾಂನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಉದ್ಯಮಿ ರತನ್ ಟಾಟಾ, ಅತ್ಯಾಧುನಿಕ 7 ಕ್ಯಾನ್ಸರ್ ಆಸ್ಪತ್ರೆಗಳನ್ನು ಉದ್ಫಾಟಿಸಿದ್ದಾರೆ.

ಆಸ್ಪತ್ರೆ ಉದ್ಫಾಟನೆಯ ಬಳಿಕ ಮಾತನಾಡಿದ ಮೋದಿ, ಇದೀಗ ಅಸ್ಸಾಂನಲ್ಲಿ 7 ಆಸ್ಪತ್ರೆಗಳನ್ನು ಉದ್ಫಾಟಿಸಿದ್ದೇವೆ. ಇನ್ನೂ ಕೆಲ ತಿಂಗಳಲ್ಲಿ ಮತ್ತೆ 3 ನೂತನ ಆಸ್ಪತ್ರೆಗಳು ನಿಮ್ಮ ಸೇವೆಗೆ ಸಿದ್ಧಗೊಳ್ಳಲಿದೆ. ಈ ಹಿಂದೆ ಒಂದು ಆಸ್ಪತ್ರೆ ತೆರೆಯಲು ಸಾಕಷ್ಟು ವರ್ಷಗಳು ಆಗುತ್ತಿತ್ತು. ಆದರೆ ಇದೀಗ ಬದಲಾವಣೆಯಾಗಿದೆ. ಸರ್ಕಾರ ಜನರ ಆರೋಗ್ಯದ ಕಡೆಗೆ ಗಮನ ಹರಿಸುತ್ತಿದೆ ಎಂದರು. 

ಅಸ್ಸಾ ಸಿಎಂ ಹಿಮಂತ ಬಿಸ್ವಾ ಶರ್ಮಾ ಮಾತನಾಡಿ, ಟಾಟಾ ಗ್ರೂಪ್ಸ್ ಮತ್ತು ಸರ್ಕಾರದ ನೆರವಿನಿಂದ ರಾಜ್ಯದಲ್ಲಿ ಏಷ್ಯಾದ ದೊಡ್ಡ ಕ್ಯಾನ್ಸರ್ ಚಿಕಿತ್ಸಾ ಆಸ್ಪತ್ರೆ ಉದ್ಫಾಟನೆಗೊಂಡಿದೆ. ನಾನು ಕೆಂದ್ರ ಸರ್ಕಾರ ಮತ್ತು ರತನ್ ಟಾಟಾ ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ನುಡಿದರು.

ಆಸ್ಸಾಂನಲ್ಲಿ ಸ್ಥಾಪಿಸಲಾಗಿರುವ ಕ್ಯಾನ್ಸರ್ ಆಸ್ಪತ್ರೆ ಸರ್ಕಾರ ಮತ್ತು ಟಾಟಾ ಗ್ರೂಪ್ಸ್ ಸಹಭಾಗಿತ್ವದಲ್ಲಿ ಆರಂಭವಾಗಿದೆ. ಈಗಾಗಲೇ ದೇಶದಾದ್ಯಂತ 17 ಕ್ಯಾನ್ಸರ್ ಕೇರ್ ಆಸ್ಪತ್ರೆಗಳು ಕಾರ್ಯಚರಿಸುತ್ತಿದೆ.

ಇದೀಗ ಅಸ್ಸಾಂನಲ್ಲಿ 7 ಆಸ್ಪತ್ರೆಗಳು ಉದ್ಫಾಟನೆಗೊಂಡಿದ್ದು, ಇನ್ನೂ 7 ಆಸ್ಪತ್ರೆಗಳ ಸ್ಥಾಪನೆಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಧುಬ್ರಿ, ನಲ್ಬರಿ, ಗೋಲ್ಪಾರಾ, ನಾಗಾಂವ್, ಶಿವಸಾಗರ್, ತಿನ್ಸುಕಿಯಾ ಮತ್ತು ಗೋಲಾಘಾಟ್ನಲ್ಲಿ ಕ್ಯಾನ್ಸರ್ ಕೇರ್ ಆಸ್ಪತ್ರೆಗೆ ಶಂಕುಸ್ಥಾಪನೆ ನೆರವೇರಿಸಿ ಕಾಮಗಾರಿ ಆರಂಭಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೀತೆಯಿಂದ ದೂರವಾದ ನಂತರ ಶ್ರೀರಾಮ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದ: ತಮಿಳು ಕವಿ ಹೇಳಿಕೆಗೆ ಬಿಜೆಪಿ ಆಕ್ರೋಶ

ಧರ್ಮಸ್ಥಳ ದೇವಾಲಯಕ್ಕೆ ಬರುವ ಭಕ್ತರ ಸಂಖ್ಯೆ ಕಡಿಮೆಯಾಗಿರುವುದು ನಿಜಾನಾ: ಇಲ್ಲಿದೆ ರಿಯಾಲಿಟಿ

ಭಾರತದ ಮೇಲೆ ಯುದ್ಧ ಮಾಡಿ ಸಿಂಧೂ ನದಿ ವಾಪಸ್ ಪಡೆಯಲು ಪಾಕಿಸ್ತಾನಕ್ಕೆ ಗೊತ್ತು: ಬಿಲಾವಲ್ ಭುಟ್ಟೊ

ಸಚಿವ ಸ್ಥಾನದಿಂದ ರಾಜಣ್ಣಗೆ ಗೇಟ್‌ಪಾಸ್‌: ಮಧುಗಿರಿ ಬಂದ್‌, ಅಭಿಮಾನಿಯಿಂದ ವಿಷ ಕುಡಿಯಲು ಯತ್ನ

ಕೇಳಿದ್ರೆ ರಾಜೀನಾಮೆ ಕೊಡ್ತಿದ್ದೆ, ವಜಾ ಮಾಡ್ಬೇಕಿತ್ತಾ: ಸಿಎಂ ಬಳಿ ನೋವು ತೋಡಿಕೊಂಡ ರಾಜಣ್ಣ

ಮುಂದಿನ ಸುದ್ದಿ
Show comments