Webdunia - Bharat's app for daily news and videos

Install App

ಬಾಲಕಿಯರ ಶರ್ಟ್‌ ಬಿಚ್ಚಿಸಿ ಬ್ಲೇಸರ್‌ನಲ್ಲೇ ಮನೆಗೆ ಕಳುಹಿಸಿದ ಪ್ರಾಂಶುಪಾಲ: ಮುಂದೇನಾಯಿತು ಗೊತ್ತಾ

Sampriya
ಭಾನುವಾರ, 12 ಜನವರಿ 2025 (10:55 IST)
Photo Courtesy X
ಜಾರ್ಖಂಡ್‌:  ಜಾರ್ಖಂಡ್‌ನ ಧನ್‌ಬಾದ್‌ನಲ್ಲಿರುವ ಪ್ರತಿಷ್ಠಿತ ಶಾಲೆಯ ಪ್ರಾಂಶುಪಾಲನೊಬ್ಬ ವಿದ್ಯಾರ್ಥಿನಿಯರ ಶರ್ಟ್‌ ಬಿಚ್ಚಿಸಿ ಬ್ಲೇಸರ್‌ನಲ್ಲೇ ಮನೆಗೆ ಕಳುಹಿಸಿರುವ ಘಟನೆ ನಡೆದಿದೆ.

ಖಾಸಗಿ ಶಾಲೆಯೊಂದರ ಪ್ರಾಂಶುಪಾಲರು 10ನೇ ತರಗತಿಯ 80 ಬಾಲಕಿಯರ ಶರ್ಟ್‌ಗಳನ್ನು ತೆಗೆಯುವಂತೆ ಸೂಚಿಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಆಡಳಿತ ಮಂಡಳಿ ತನಿಖೆಗೆ ಮುಂದಾಗಿದೆ. ಕೇವಲ ಬ್ಲೇಜರ್‌ಗಳಲ್ಲಿ ಮನೆಗೆ ಮರಳುವಂತೆ ಮಾಡಿದ ಪ್ರಾಂಶುಪಾಲರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಜೋರಾಪೋಖರ್ ಪೊಲೀಸ್ ಠಾಣೆ ವ್ಯಾಪ್ತಿಯ ದಿಗ್ವಾಡಿಹ್‌ನಲ್ಲಿರುವ ಪ್ರತಿಷ್ಠಿತ ಶಾಲೆಯಲ್ಲಿ ಶುಕ್ರವಾರ ಈ ಘಟನೆ ನಡೆದಿದ್ದು,10ನೇ ತರಗತಿಯ ವಿದ್ಯಾರ್ಥಿಗಳು ಪರೀಕ್ಷೆ ಮುಗಿಸಿ ಪರಸ್ಪರರ ಅಂಗಿಯಲ್ಲಿ ಸಂದೇಶ ಬರೆದು ಪೆನ್ ಡೇ ಆಚರಿಸುತ್ತಿದ್ದರು ಎಂದು ಪೋಷಕರು ಜಿಲ್ಲಾಧಿಕಾರಿಗೆ ಮಾಹಿತಿ ನೀಡಿದ್ದಾರೆ.

ಇದನ್ನು ವಿರೋಧಿಸಿ ಪ್ರಾಂಶುಪಾಲರು ಸಿಡಿಮಿಡಿಗೊಂಡಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳು ಕ್ಷಮೆಯಾಚಿಸಿದರೂ ಕೂಡ ಅವರ ಅಂಗಿಗಳನ್ನು ತೆಗೆಯುವಂತೆ ಹೇಳಿದ್ದಾರೆ ಎನ್ನಲಾಗಿದೆ. ಎಲ್ಲಾ ವಿದ್ಯಾರ್ಥಿಗಳನ್ನು ಶರ್ಟ್ ಇಲ್ಲದೆ ಬ್ಲೇಜರ್‌ನಲ್ಲಿ ಮನೆಗೆ ಕಳುಹಿಸಲಾಗಿದೆ ಎಂದು ಪೋಷಕರು ಜಿಲ್ಲಾಧಿಕಾರಿಗೆ ದೂರು ನೀಡಿದ್ದಾರೆ.

ಈ ನಡವಳಿಕೆಗೆ ಪ್ರಾಂಶುಪಾಲರ ವಿರುದ್ಧ ಹಲವಾರು ಪೋಷಕರು ಆಕ್ರೋಶ ವ್ಯಕ್ತಪಡಿಸಿ ದೂರು ದಾಖಲಿಸಿದ್ದಾರೆ. ಈ ವೇಳೆ ನಾವು ಕೆಲವು ಸಂತ್ರಸ್ತ ಬಾಲಕಿಯರೊಂದಿಗೂ ಮಾತನಾಡಿದ್ದೇವೆ. ಆಡಳಿತ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದೆ. ಈ ಬಗ್ಗೆ ತನಿಖೆ ನಡೆಸಲು ಸಮಿತಿಯನ್ನ ರಚಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

30 ವರ್ಷಗಳಲ್ಲೇ ಇದು ಭೀಕರ ದಾಳಿ: ಪಹಲ್ಗಾಮ್‌ನಲ್ಲಿ ದಾಳಿಯಲ್ಲಿ 27ಕ್ಕೂ ಹೆಚ್ಚು ಪ್ರವಾಸಿಗರು ಸಾವು ಶಂಕೆ

Pehalgam terror attack: ಪ್ಯಾಂಟ್ ಹಿಡಿದೆಳೆದು ಹಿಂದೂ ಎಂದು ಕನ್ ಫರ್ಮ್ ಮಾಡಿ ಕೊಂದೇ ಬಿಟ್ಟ ಉಗ್ರರು

Pehalgam Terror Attack: ಸ್ಥಳಕ್ಕೆ ಅಮಿತ್ ಶಾ ಎಂಟ್ರಿ, ಉಗ್ರರನ್ನು ಸುಮ್ನೇ ಬಿಡಲ್ಲ ಎಂದ ಮೋದಿ

ಉಗ್ರರ ಪೈಶಾಚಿಕ ದಾಳಿಯಲ್ಲಿ ಸಿಲುಕಿದ ಶಿವಮೊಗ್ಗದ ಕುಟುಂಬ: ಕಾಶ್ಮೀರಕ್ಕೆ ರಾಜ್ಯದ ಅಧಿಕಾರಿಗಳ ದೌಡು

ಕಾಶ್ಮೀರದಲ್ಲಿ ಉಗ್ರರ ದಾಳಿಯಲ್ಲಿ ಕರ್ನಾಟಕ ಉದ್ಯಮಿ ಬಲಿ: ಪ್ರವಾಸಕ್ಕೆಂದು ತೆರಳಿದ್ದ ಕುಟುಂಬ

ಮುಂದಿನ ಸುದ್ದಿ
Show comments