Webdunia - Bharat's app for daily news and videos

Install App

ಬಯಲಾಯ್ತು ಶಿಕ್ಷಕಿಯ ಕೊಲೆ ರಹಸ್ಯ

Webdunia
ಶನಿವಾರ, 3 ನವೆಂಬರ್ 2018 (14:50 IST)
ನವದೆಹಲಿ : ದೆಹಲಿಯ ವಬಾನಾ ಪ್ರದೇಶದಲ್ಲಿ ನಡೆದಿದ್ದ ಶಿಕ್ಷಕಿಯೊಬ್ಬರ ಕೊಲೆಯ ರಹಸ್ಯವನ್ನು ಕಂಡುಹಿಡಿಯುವಲ್ಲಿ ಇದೀಗ ಪೊಲೀಸರು ಯಶಸ್ವಿಯಾಗಿದ್ದಾರೆ.


ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷಕಿ ಪತಿ ಮಂಜೀತ್ (38), ಆತನ ಪಾಟ್ನರ್ ಏಂಜೆಲ್ ಗುಪ್ತಾ ಮತ್ತು ಏಂಜೆಲ್ ಗುಪ್ತಾಳ ತಂದೆ ರಾಜೀವ್ ಬಂಧಿತ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಏಂಜೆಲ್ ಗುಪ್ತಾ ವೃತ್ತಿಯಲ್ಲಿ ಮಾಡೆಲ್ ಆಗಿದ್ದಾಳೆ ಎಂದು ತಿಳಿದು ಬಂದಿದೆ.


ಹರಿಯಾಣದ ಸೋನೆಪಟ್ ನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದ 38 ವರ್ಷದ ಸುನೀತಾ ಎಂಬುವವರು ಬವಾನಾದಲ್ಲಿ ತನ್ನ ಸ್ಕೂಟರ್ ಪಕ್ಕದಲ್ಲಿ ಗುಂಡಿನ ಪೆಟ್ಟು ತಿಂದು ಸಾವನಪ್ಪಿದ್ದರು. ಇವರ ಕೊಲೆಯ ಪ್ರಕರಣವನ್ನು ತನಿಖೆ ನಡೆಸಿದ ಪೊಲೀಸರಿಗೆ ಶಿಕ್ಷಕಿ ಸುನಿತಾ  ಡೈರಿಯಲ್ಲಿ ಏಂಜಲ್ ಗುಪ್ತಾ ಬಗ್ಗೆ ಮಾಹಿತಿಯಿತ್ತು. ಈ ಬಗ್ಗೆ ಏಂಜಲ್ ಗುಪ್ತಾಳನ್ನು ವಶಕ್ಕೆ ಪಡೆದ ಪೊಲೀಸರು ಕಾಲ್ ಹಿಸ್ಟರಿ ಪರಿಶೀಲಿಸಿದ್ದಾರೆ.


ಈ ವೇಳೆ ಸುನಿತಾ ಪತಿ  ಮಂಜೀತ್ ಹಾಗೂ ಏಂಜಲ್ ನಡುವೆ ಸಂಬಂಧವಿದ್ದು, ಈ ಬಗ್ಗೆ ಪತ್ನಿ ಸುನೀತಾಳ ವಿರೋಧವಿದ್ದ ಕಾರಣ ಕಾಂಟ್ರ್ಯಾಕ್ಟ್ ಕೊಲೆಗಾರರನ್ನು ನೇಮಕ ಮಾಡಿ ಆಕೆಯನ್ನು ಹತ್ಯೆ ಮಾಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.
ಸುನಿತಾ ಕೊಲೆಗೆ ಗುಪ್ತಾಳ ತಂದೆಯೂ ಕೂಡ ಸಾಥ್ ನೀಡಿದ್ದು, ಸದ್ಯಕ್ಕೆ ಪೊಲೀಸರು ಮೂವರನ್ನು ಬಂಧಿಸಿ ವಿಚಾರಣೆ ಮಾಡುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Covid 19: ಭಾರತದ ಈ ನಗರದಲ್ಲಿ ಹೆಚ್ಚುತ್ತಿದೆ ಕೋವಿಡ್ 19 ಪ್ರಕರಣಗಳು

ಚಾಮರಾಜಪೇಟೆ ಪಾಕಿಸ್ತಾನದಲ್ಲಿದೆಯೋ ಭಾರತದಲ್ಲಿದೆಯೋ: ಬಿಜೆಪಿ ಆಕ್ರೋಶ

Karnataka Weather:ಮುನ್ಸೂಚನೆಯಂತೆ ಕರಾವಳಿ ಭಾಗದಲ್ಲಿ ಎಡೆಬಿಡದೆ ಸುರಿಯುತ್ತಿದೆ ಮಳೆ

ಯಾದಗಿರಿ: ಕಾಂಗ್ರೆಸ್ ಕಚೇರಿಗೆ ಬೆಂಕಿಯಿಟ್ಟ ದುರುಳರು, ಎಸಿ, ಸೋಫಾ ಬೆಂಕಿಗಾಹುತಿ

ಮನೆ ಬಿಟ್ಟು ಹೋದ ಮಗಳು: ಮನನೊಂದ ಕುಟುಂಬದಿಂದ ಮೂವರು ಆತ್ಮಹತ್ಯೆಗೆ ಶರಣು

ಮುಂದಿನ ಸುದ್ದಿ
Show comments