Webdunia - Bharat's app for daily news and videos

Install App

ಇಡೀ ಕುಟುಂಬವನ್ನೇ ಸ್ಮಶಾನ ಮಾಡಿದ ಪಾಪಿ! ಮುಂದೇನಾಯ್ತು ?

Webdunia
ಶುಕ್ರವಾರ, 1 ಏಪ್ರಿಲ್ 2022 (09:27 IST)
ಗಾಂಧಿನಗರ : ಪತಿ ತನ್ನ ಹೆಂಡತಿ, ಇಬ್ಬರು ಹದಿಹರೆಯದ ಮಕ್ಕಳು ಮತ್ತು ಹೆಂಡತಿಯ ಅಜ್ಜಿಯನ್ನು ಕೊಂದಿರುವ ಅಮಾನುಷ ಘಟನೆಯೊಂದು ಅಹಮದಾಬಾದ್ನಲ್ಲಿ ಬೆಳಕಿಗೆ ಬಂದಿದೆ.

ಸೋನಾಲ್ಬೆನ್ ಗಾಯಕ್ವಾಡ್(37), ಅವರ ಮಗ ಗಣೇಶ್ (17), ಮಗಳು ಪ್ರಗತಿ(15) ಮತ್ತು ಸೋನಾಲ್ಬೆನ್ ಅವರ ಅಜ್ಜಿ ಸುಭದ್ರಾಬೆನ್(70) ಅವರನ್ನು ವಿನೋದ್ ಚಾಕುವಿನಿಂದ ಇರಿದು ಕ್ರೂರವಾಗಿ ಕೊಲೆ ಮಾಡಿದ್ದಾನೆ. ಕೊಲೆ ಮಾಡಿದ ಮೇಲೆ ವಿನೋದ್ ಮನೆಗೆ ಬೀಗ ಹಾಕಿ ಅಲ್ಲಿಂದ ಪರಾರಿಯಾಗಿದ್ದ.

ಸೋನಾಲ್ಬೆನ್ ಅವರ ತಾಯಿ ಸಂಜುಬೆನ್ ಅವರು ಪೊಲೀಸರನ್ನು ಸಂಪರ್ಕಿಸಿದ್ದು, ತನ್ನ ಮಗಳಿಗೆ ಫೋನ್ ರೀಚ್ ಆಗುತ್ತಿಲ್ಲ. ಮನೆಗೆ ಹೋಗಿ ನೋಡಿದರೆ ಬೀಗ ಹಾಕಲಾಗಿದೆ ಎಂದು ದೂರು ಕೊಟ್ಟಿದ್ದಾರೆ. ಈ ಹಿನ್ನೆಲೆ ಪೊಲೀಸರು ಅಹಮದಾಬಾದ್ನ ಓಧವ್ ಪ್ರದೇಶದ ಸೋನಾಲ್ಬೆನ್ ಅವರ ಮನೆ ಬೀಗ ಒಡೆದು ನೋಡಿದಾಗ ಅರೆ ಕೊಳೆತ ಸ್ಥಿತಿಯಲ್ಲಿ ಶವಗಳು ಪತ್ತೆಯಾಗಿದೆ.

ಶವ ಪತ್ತೆಯಾದ ಪೊಲೀಸರು ಕಾರ್ಯಪ್ರವೃತ್ತರಾಗಿದ್ದು, ಆರೋಪಿಯನ್ನು ಹುಡುಕಲು ಪ್ರಾರಂಭ ಮಾಡಿದ್ದಾರೆ. ಈ ವೇಳೆ ಆರೋಪಿ ವಿನೋದ್ ಮಧ್ಯಪ್ರದೇಶದ ಇಂದೋರ್ನಿಂದ ಗುಜರಾತ್ಗೆ ಮರಳುತ್ತಿದ್ದಾಗ ದಾಹೋದ್ ಜಿಲ್ಲೆಯ ಎಸ್ಟಿ(ರಾಜ್ಯ ಸಾರಿಗೆ ನಿಗಮ) ಬಸ್ನಲ್ಲಿ ಸಿಕ್ಕಿ ಬಿದ್ದಿದ್ದಾನೆ.

ವಿನೋದ್ನನ್ನು ಬಂಧಿಸಿದ ಪೊಲೀಸರು ವಿಚಾರಣೆ ಮಾಡಿದಾಗ, ತನ್ನ ಹೆಂಡತಿ, ಮಕ್ಕಳು ಮತ್ತು ಹೆಂಡತಿ ಅಜ್ಜಿಯನ್ನು ಕೊಂದಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಅಹಮದಾಬಾದ್ ಅಪರಾಧ ವಿಭಾಗವು ಪ್ರಕಟಣೆಯಲ್ಲಿ ತಿಳಿಸಿದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೆಚ್ಚುತ್ತಿರುವ ಪ್ರಕರಣಗಳ ಮಧ್ಯೆ ಜಯದೇವ್‌ಗೆ ರೋಗಿಗಳ ಸಂಖ್ಯೆ ಹೆಚ್ಚಳ: ಹೆಚ್ಚುವರಿ ತಜ್ಞ ವೈದ್ಯರ ನಿಯೋಜನೆ

ವೈಜ್ಞಾನಿಕ ಸಾಧನೆಯನ್ನು ಅಪಮಾನಿಸುವ ಮುಖ್ಯಮಂತ್ರಿ ಕ್ಷಮೆ ಕೇಳಲಿ: ಪ್ರಲ್ಹಾದ್ ಜೋಶಿ

ಪ್ರವೀಣ್ ನೆಟ್ಟಾರು ಪ್ರಕರಣ: ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ

ಹಿಮಾಚಲ ಪ್ರದೇಶದಲ್ಲಿ ವರುಣನ ಅಬ್ಬರಕ್ಕೆ 37 ಸಾವು, 400ಕೋಟಿ ನಷ್ಟ

ವಿಮಾನದಲ್ಲಿ ಸಹಪ್ರಯಾಣಿಕನ ಮೂತಿಗೆ ಗುದ್ದಿದ ವ್ಯಕ್ತಿ: ಭಾರತ ಮೂಲದ ಪ್ರಯಾಣಿಕ ಅರೆಸ್ಟ್‌

ಮುಂದಿನ ಸುದ್ದಿ
Show comments