Webdunia - Bharat's app for daily news and videos

Install App

ಪ್ರಧಾನಿ ಮೋದಿ ಭೇಟಿಗಾಗಿ 815 ಕಿ.ಮೀ ಪಾದಯಾತ್ರೆ ಕೈಗೊಂಡ ಶ್ರೀನಗರ ಯುವಕ

Webdunia
ಸೋಮವಾರ, 23 ಆಗಸ್ಟ್ 2021 (08:27 IST)
ಶ್ರೀನಗರ: ಪ್ರಧಾನಿ ನರೇಂದ್ರ ಮೋದಿಯವರ ಅಭಿಮಾನಿಯೊಬ್ಬರು ಅವರ ಭೇಟಿಗೆ ಶ್ರೀನಗರದಿಂದ ದೆಹಲಿಗೆ 815 ಕಿ.ಮೀ ಪಾದಯಾತ್ರೆ ಕೈಗೊಂಡಿದ್ದಾರೆ.

ಈ ಮೂಲಕ ಪ್ರಧಾನಿ ಗಮನ ಸೆಳೆದು ಭೇಟಿಗೆ ಅವಕಾಶ ಪಡೆಯುವುದು 28 ವರ್ಷ ವಯಸ್ಸಿನ ಫಹೀಮ್ ನಜೀರ್ ಶಾ ಅವರ ಉದ್ದೇಶವಾಗಿದೆ. ವೃತ್ತಿಯಲ್ಲಿ ಎಲೆಕ್ಟ್ರಿಶಿಯನ್ ಆಗಿರುವ ಫಹೀಮ್, ಜಮ್ಮು-ಕಾಶ್ಮೀರದ ಶ್ರೀನಗರದ ಶಾಲಿಮಾರ್ ಪ್ರದೇಶದವರು. ಅವರು ಈಗಾಗಲೇ 200 ಕಿ.ಮೀ ಕ್ರಮಿಸಿ ಭಾನುವಾರ ಉಧಮ್ಪುರ್ ತಲುಪಿದ್ದಾರೆ.
'ನಾನು ಮೋದಿಯವರನ್ನು ಭೇಟಿಯಾಗುವ ಸಲುವಾಗಿ ದೆಹಲಿಗೆ ಪಾದಯಾತ್ರೆ ನಡೆಸುತ್ತಿದ್ದೇನೆ. ಅವರ ಗಮನ ಸೆಳೆಯುವ ಭರವಸೆಯಿದೆ. ಪ್ರಧಾನಿಯವರನ್ನು ಭೇಟಿಯಾಗುವುದು ನನ್ನ ಕನಸು' ಎಂದು ನಜೀರ್ ಶಾ ಹೇಳಿದ್ದಾರೆ. ಮೋದಿಯವರನ್ನು ಭೇಟಿಯಾಗುವ ಈ ಹಿಂದಿನ ಯತ್ನಗಳು ಫಲಿಸಿರಲಿಲ್ಲ ಎಂದೂ ಅವರು ಹೇಳಿದ್ದಾರೆ.
ಕಳೆದ ನಾಲ್ಕು ವರ್ಷಗಳಿಂದ ಪ್ರಧಾನಿಯವರನ್ನು ಸಾಮಾಜಿಕ ಜಾಲತಾಣಗಳಲ್ಲಿ ಫಾಲೋ ಮಾಡುತ್ತಿದ್ದೇನೆ. ಅವರ ಮಾತು ಮತ್ತು ಕಾರ್ಯಗಳು ನನ್ನ ಹೃದಯವನ್ನು ಸ್ಪರ್ಶಿಸಿವೆ ಎಂದು ಶಾ ಹೇಳಿದ್ದಾರೆ.
'ಒಮ್ಮೆ ಮೋದಿಯವರು ರ್ಯಾಲಿಯೊಂದರಲ್ಲಿ ಮಾತನಾಡುತ್ತಿದ್ದಾಗ ಅವರಿಗೆ 'ಆಜಾನ್' ಕೇಳಿಸಿತ್ತು. ಅವರು ಇದ್ದಕ್ಕಿದ್ದಂತೆ ಭಾಷಣ ನಿಲ್ಲಿಸಿ ಸಾರ್ವಜನಿಕರನ್ನು ಆಶ್ಚರ್ಯಚಕಿತರನ್ನಾಗಿಸಿದ್ದರು. ಪ್ರಧಾನಿಯವರ ಆ ನಡೆ ನನ್ನ ಹೃದಯಕ್ಕೆ ನಾಟಿತು. ಅಂದಿನಿಂದ ನಾನು ಮೋದಿಯವರ ಕಟ್ಟಾ ಅಭಿಮಾನಿಯಾದೆ' ಎಂದು ಶಾ ತಿಳಿಸಿದ್ದಾರೆ.
ಕಳೆದ ಎರಡೂವರೆ ವರ್ಷಗಳಲ್ಲಿ ದೆಹಲಿಯಲ್ಲಿ ಮೋದಿಯವರನ್ನು ಭೇಟಿಯಾಗಲು ಹಲವು ಪ್ರಯತ್ನಗಳನ್ನು ಮಾಡಿದ್ದೆ. ಮೋದಿ ಅವರ ಕಾಶ್ಮೀರ ಭೇಟಿ ಸಂದರ್ಭದಲ್ಲಿಯೂ ಅವರನ್ನು ಭೇಟಿಯಾಗಲು ಯತ್ನಿಸಿದ್ದೆ. ಆದರೆ ಭದ್ರತಾ ಸಿಬ್ಬಂದಿ ಅವಕಾಶ ನೀಡಿರಲಿಲ್ಲ ಎಂದು ಅವರು ಹೇಳಿದ್ದಾರೆ.
'ಈ ಬಾರಿ ನನಗೆ ಖಾತ್ರಿಯಿದೆ. ಪ್ರಧಾನಿಯವರನ್ನು ಭೇಟಿಯಾಗುವ ಅವಕಾಶ ದೊರೆಯಲಿದೆ' ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments