Select Your Language

Notifications

webdunia
webdunia
webdunia
webdunia

ತಮಿಳುನಾಡು ವಿರುದ್ಧ ಮತ್ತೊದು ಕಾನೂನು ಹೋರಾಟಕ್ಕೆ ಮುಂದಾದ ರಾಜ್ಯ ಸರ್ಕಾರ

ತಮಿಳುನಾಡು ವಿರುದ್ಧ ಮತ್ತೊದು ಕಾನೂನು ಹೋರಾಟಕ್ಕೆ ಮುಂದಾದ ರಾಜ್ಯ ಸರ್ಕಾರ
ನವದೆಹಲಿ , ಗುರುವಾರ, 26 ಆಗಸ್ಟ್ 2021 (12:14 IST)
ನವದೆಹಲಿ: ಅಂತರಾಜ್ಯ ಜಲವಿವಾದಕ್ಕೆ ಸಂಬಂಧಿಸಿದಂತೆ ಕಾನೂನು ತಂಡದ ಜೊತೆ ಚರ್ಚೆ ನಡೆಸಲಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ನವದೆಹಲಿಯಲ್ಲಿ ಕಾನೂನು ತಜ್ಞರ ತಂಡದ ಜೊತೆ ಸಭೆ ನಡೆಸಿದ ಬಳಿಕ ಮಾತನಾಡಿದ ಸಿಎಂ ಬೊಮ್ಮಾಯಿ, ತಮಿಳುನಾಡಿನ ನದಿ ಜೋಡಣೆ ಅಕ್ರಮವಾಗಿದೆ. ಇದರ ವಿರುದ್ಧ ಕಾನೂನು ಹೋರಾಟ ಮಾಡಬೇಕಿದೆ. ಈ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದರು.
ಮೇಕೆದಾಟು, ಮಹದಾಯಿ, ಕೃಷ್ಣಾ ಮೇಲ್ದಂಡೆ ವಿಚಾರವಾಗಿಯೂ ಚರ್ಚೆ ನಡೆಸಲಾಗಿದೆ. ಸೆಪ್ಟೆಂಬರ್ ನಲ್ಲಿ ಮಹದಾಯಿ ಯೋಜನೆ ವಿಚಾರಣೆಗೆ ಬರಲಿದೆ. ಕಾನೂನು ಹೋರಾಟ ರೂಪಿಸುವ ಬಗ್ಗೆ ಚರ್ಚೆ ನಡೆಸಲಾಗಿದ್ದು, ವಾರದೊಳಗೆ ವರದಿ ನೀಡುವಂತೆ ಎಜೆಗೆ ಸೂಚಿಸಿದ್ದೇವೆ ಎಂದು ಹೇಳಿದರು.


Share this Story:

Follow Webdunia kannada

ಮುಂದಿನ ಸುದ್ದಿ

ಒಂದೂವರೆ ಗಂಟೆ ಅವಧಿಯಲ್ಲಿ ನಾಲ್ಕು ಜನರ ಕತೆ ಮುಗಿಸಿದ!