ಬೀದಿ ನಾಯಿ ವಿಚಾರವಾಗಿ ಮಹತ್ವದ ಆದೇಶ ಹೊರಡಿಸಿದ ಸುಪ್ರೀಂ ಕೋರ್ಟ್‌

Sampriya
ಶುಕ್ರವಾರ, 7 ನವೆಂಬರ್ 2025 (16:29 IST)
ನವದೆಹಲಿ: ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಬಸ್ ನಿಲ್ದಾಣಗಳು, ಕ್ರೀಡಾ ಸಂಕೀರ್ಣಗಳು ಮತ್ತು ರೈಲು ನಿಲ್ದಾಣಗಳ ಬಳಿ ನಾಯಿ ಕಡಿತ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿರುವ ಸಂಬಂಧ ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿದೆ. 

ಈ ವಿಚಾರವಾಗಿ ದಾಳಿ ಮಾಡುವ ನಾಯಿಗಳನ್ನು ನಿಗದಿಪಡಿಸಿದ ಆಶ್ರಯ ತಾಣಗಳಿಗೆ ಸ್ಥಳಾಂತರಿಸಬೇಕೆಂದು ನಿರ್ದೇಶನ ಮಾಡಿದೆ. 

ಬೀದಿನಾಯಿ ಕಚ್ಚಿದ ಘಟನೆಗಳ ಮೇಲೆ ಸ್ವಯಂ ಪ್ರೇರಿತವಾಗಿ ನಿಗಾ ವಹಿಸಿರುವ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್, ಸಂದೀಪ್ ಮೆಹ್ತಾ ಮತ್ತು ಎನ್‌ವಿ ಅಂಜಾರಿಯಾ ಅವರ ಪೀಠವು, ಸರ್ಕಾರಿ ಮತ್ತು ಸಾರ್ವಜನಿಕ ಸಂಸ್ಥೆಗಳ ಆವರಣಕ್ಕೆ ನಾಯಿಗಳು ಪ್ರವೇಶಿಸದಂತೆ ಅಧಿಕಾರಿಗಳಿಗೆ ಸೂಚಿಸಿದೆ. ಅಂತಹ ನಾಯಿಗಳನ್ನು ಎತ್ತಿಕೊಂಡು ಹೋದ ಜಾಗಕ್ಕೆ ಮತ್ತೆ ಬಿಡುಗಡೆ ಮಾಡಬಾರದು ಎಂದೂ ಹೇಳಿದೆ.

ಯಾವುದೇ ಬೀದಿ ನಾಯಿಗಳ ಆವಾಸಸ್ಥಾನ ಅಸ್ತಿತ್ವದಲ್ಲಿಲ್ಲ ಎಂದು ಖಚಿತಪಡಿಸಿಕೊಳ್ಳಲು ಎಲ್ಲಾ ಆವರಣಗಳನ್ನು ನಿಯಮಿತವಾಗಿ ತಪಾಸಣೆ ನಡೆಸುವಂತೆ ಸ್ಥಳೀಯ ಪುರಸಭೆಯ ಅಧಿಕಾರಿಗಳಿಗೆ ನ್ಯಾಯಾಲಯ ಸೂಚಿಸಿದೆ.

ಎಂಟು ವಾರಗಳಲ್ಲಿ ತೆಗೆದುಹಾಕಬೇಕು ಎಂದು ನ್ಯಾಯಾಲಯ ಹೇಳಿದೆ.

ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ನ್ಯಾಯಾಲಯದ ನಿರ್ದೇಶನದ ಎಬಿಸಿ ನಿಯಮಗಳನ್ನು ಅನುಸರಿಸುವಲ್ಲಿ ಅಮಿಕಸ್ ಕ್ಯೂರಿ (ನ್ಯಾಯಾಲಯದಿಂದ ನೇಮಕಗೊಂಡ ವಕೀಲರು) ಹೈಲೈಟ್ ಮಾಡಿದ ಲೋಪಗಳನ್ನು ಸರಿಪಡಿಸಲು ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಅದು ಗಮನಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಬ್ಬು ಬೆಳೆಗಾರರ ಪ್ರತಿಭಟನೆ ವೇಳೆ ಲಾಠಿ ಚಾರ್ಜ್: ಪೊಲೀಸರ ಮೇಲೆ ಕಲ್ಲು ತೂರಾಟ

ಬ್ಯಾಂಕ್‌ಗಳ ಸಿಬ್ಬಂದಿಗೆ ಸ್ಥಳೀಯ ಭಾಷೆ ತಿಳಿದಿರಬೇಕು: ನಿರ್ಮಲಾ ಸೀತರಾಮನ್

ಮುಖ್ಯಮಂತ್ರಿಗಳು ಕಬ್ಬು ಬೆಳೆಗಾರರ ಕ್ಷಮೆ ಕೇಳಬೇಕು: ಬಿವೈ ವಿಜಯೇಂದ್ರ

"ಕೈ" ಒಣ ರಾಜಕೀಯಕ್ಕೆ ಕೇರಳದಲ್ಲೂ ನಂದಿನಿ ಬಲಿ

ಮುಸ್ಲಿಮರಿಗೆ ಇಷ್ಟವಾಗಲ್ಲ ಎಂದು ವಂದೇಮಾತರಂ ಕಡಿತಗೊಳಿಸಿದ್ದು ಜವಹರಲಾಲ್ ನೆಹರು: ಬಿಜೆಪಿ ಆರೋಪ

ಮುಂದಿನ ಸುದ್ದಿ
Show comments