Webdunia - Bharat's app for daily news and videos

Install App

ಕಾಯ್ದೆಯನ್ನು ಹಿಂತೆಗೆದುಕೊಂಡ ತಮಿಳುನಾಡು ಸರ್ಕಾರ

Webdunia
ಮಂಗಳವಾರ, 2 ಮೇ 2023 (13:33 IST)
ಚೆನ್ನೈ : ಕೆಲಸದ ಸಮಯವನ್ನು ದಿನಕ್ಕೆ 12 ಗಂಟೆಗೆ ವಿಸ್ತರಿಸಿದ್ದ ಕಾರ್ಖಾನೆಗಳ ತಿದ್ದುಪಡಿ ಕಾಯ್ದೆ 2023 ಅನ್ನು ಕಾರ್ಮಿಕರ  ಹಿತದೃಷ್ಟಿಯಿಂದ ಹಿಂತೆಗೆದುಕೊಳ್ಳಲಾಗಿದೆ ಎಂದು ತಮಿಳುನಾಡಿನ ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಸೋಮವಾರ ಹೇಳಿದ್ದಾರೆ.
 
ಮೇ ಡೇ ಪಾರ್ಕ್ನಲ್ಲಿ ಮೇ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿದ ಸ್ಟಾಲಿನ್, ಕಾರ್ಖಾನೆಗಳ ತಿದ್ದುಪಡಿ ಕಾಯಿದೆ 2023, ಕೈಗಾರಿಕೆಗಳಿಗೆ ದಿನಕ್ಕೆ 12 ಗಂಟೆ ಎಂದರೆ ಬೆಳಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆಗಳವರೆಗೆ ಇದ್ದ ಕೆಲಸದ ಸಮಯವನ್ನು ಹಿಂತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.

ಕಾರ್ಮಿಕರ ಕಲ್ಯಾಣ ದೃಷ್ಟಿಯಿಂದ ನಾವು ಯಾವುದೇ ಪರಿಸ್ಥಿತಿಯಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ. ಕೈಗಾರಿಕೆಗಳು ಬೆಳೆಯಬೇಕು ಮತ್ತು ಕಾರ್ಮಿಕರ ಏಳಿಗೆಯಾಗಬೇಕು. ನಾನು ಎಂದಿಗೂ ಮಣಿಯುವುದನ್ನು ಅವಮಾನ ಎಂದು ಪರಿಗಣಿಸಲ್ಲ. ನಾನು ಅದನ್ನು ಹೆಮ್ಮೆಯ ವಿಷಯ ಎಂದು ಪರಿಗಣಿಸಿದ್ದೇನೆ. ಏಕೆಂದರೆ ಶಾಸನವನ್ನು ಖಚಿತಪಡಿಸಿಕೊಳ್ಳಲು ಹಾಗೂ ಮಸೂದೆಯನ್ನು ಹಿಂಪಡೆಯಲು ಧೈರ್ಯ ಬೇಕಾಗುತ್ತದೆ ಎಂದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments