Select Your Language

Notifications

webdunia
webdunia
webdunia
webdunia

ಲೋಕಸಭೆಯಲ್ಲೂ ಸದ್ದು ಮಾಡಿದ ವಾಲ್ಮೀಕಿ ಹಗರಣ, ಸಂಸದ ಕಾಂಗೇರಿ ಆಗ್ರಹವೇನು

ಲೋಕಸಭೆಯಲ್ಲೂ ಸದ್ದು ಮಾಡಿದ ವಾಲ್ಮೀಕಿ ಹಗರಣ, ಸಂಸದ ಕಾಂಗೇರಿ ಆಗ್ರಹವೇನು

Sampriya

ನವದೆಹಲಿ , ಸೋಮವಾರ, 22 ಜುಲೈ 2024 (18:09 IST)
Photo Courtesy X
ನವದೆಹಲಿ: ಲೋಕಸಭೆಯಲ್ಲಿ ಇಂದು ಕರ್ನಾಟಕದ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ₹187 ಕೋಟಿ ಹಗರಣವನ್ನು ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಪ್ರಸ್ತಾಪಿಸಿದರು.

ಈ ಹಗರಣವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿ ಸೂಕ್ತ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿದರು. ಕನ್ನಡದಲ್ಲಿ ವಿಷಯ ಪ್ರಸ್ತಾಪಿಸಿದ ಕಾಂಗೇರಿ ಅವರು, ಕರ್ನಾಟಕ ರಾಜ್ಯ ಹಲವು ಕ್ಷೇತ್ರಗಳಲ್ಲಿ ಉನ್ನತ ಮಟ್ಟದ ಸಾಧನೆ ಮಾಡಿದೆ. ಅದಲ್ಲದೆ ಐಟಿ ಬಿಟಿ ಕ್ಷೇತ್ರಗಳಲ್ಲಂತೂ ಜಗತ್ತಿನ ಗಮನ ಸೆಳೆದಿದೆ. ಇದರ ಮಧ್ಯೆ ಅಭಿವೃದ್ಧಿ ನಿರ್ಲಕ್ಷ್ಯದ ಜತೆಗೆ ಹಲವು ಸಮಸ್ಯೆಗಳು ಇವೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ₹187 ಕೋಟಿ ಅವ್ಯವಹಾರ ಆಗಿದೆ ಎಂದರು.

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗದ ಜನರ ಕಲ್ಯಾಣಕ್ಕೆ ಬಳಕೆಯಾಗಬೇಕಿದ್ದ ಹಣ ಈ ನಿಗಮದ ಖಜಾನೆಯ ಮೂಲಕವೇ ₹187 ಕೋಟಿಯು ಬೇನಾಮಿ ಖಾತೆಗಳಿಗೆ ಜಮಾ ಆಗಿದೆ. ಇದು ಜನರ ತೆರಿಗೆ ಹಣ. ಇದನ್ನು ಸರ್ಕಾರ ಸಹ ಒಪ್ಪಿದೆ. ಮುಖ್ಯಮಂತ್ರಿಯವರ ಬಳಿಯೇ ಹಣಕಾಸು ಖಾತೆಯೂ ಇದೆ. ಆಡಳಿತ ವ್ಯವಸ್ಥೆಯ ದುರುಪಯೋಗದ ಬಗ್ಗೆ ಕ್ರಮ ಆಗಬೇಕು ಎಂದು ಅವರು ಆಗ್ರಹಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಸೂರಜ್‌ ರೇವಣ್ಣಗೆ ಕೊನೆಗೂ ಸಿಕ್ತು ಜೈಲಿಂದ ಬಿಡುಗಡೆ ಭಾಗ್ಯ