Webdunia - Bharat's app for daily news and videos

Install App

ತಂದೆಯ ದೇಹವನ್ನು ತುಂಡರಿಸಿ ಬಿಸಾಡಿದ್ದ ಹೆಂಡತಿ, ಮಗ!

Webdunia
ಸೋಮವಾರ, 21 ನವೆಂಬರ್ 2022 (08:54 IST)
ಕೋಲ್ಕತ್ತಾ : ತನ್ನ ತಾಯಿಯೊಂದಿಗೆ ಸೇರಿ ನೌಕಾಪಡೆಯ ಮಾಜಿ ಅಧಿಕಾರಿಯನ್ನು ಕೊಂದು ಆತನ ಮೃತದೇಹವನ್ನು 6 ತುಂಡುಗಳಾಗಿ ಕತ್ತರಿಸಿ ಆತನ ಮಗನೇ ನೆರೆಹೊರೆಯಲ್ಲಿ ಬಿಸಾಡಿರುವ ಆಘಾತಕಾರಿ ಘಟನೆ ಪಶ್ಚಿಮ ಬಂಗಾಳದ ಬರುಯಿಪುರದಲ್ಲಿ ನಡೆದಿದೆ.
 
ಮೃತ ಅಧಿಕಾರಿ ಪತ್ನಿ ಹಾಗೂ ಮಗನನ್ನು ಪೊಲೀಸರು ಬಂಧಿಸಿದ್ದಾರೆ. ನೌಕಾಪಡೆಯ ಮಾಜಿ ಅಧಿಕಾರಿ ಉಜ್ವಲ್ ಚಕ್ರವರ್ತಿ (55) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತನ ಪತ್ನಿ ಮತ್ತು ಮಗನನ್ನು ಪೊಲೀಸರು ಬಂಧಿಸಿದ್ದಾರೆ.

ಪೊಲೀಸರ ಪ್ರಕಾರ, ಪಾಲಿಟೆಕ್ನಿಕ್ ವಿದ್ಯಾರ್ಥಿಯಾಗಿದ್ದ ತನ್ನ ಮಗ ಹಾಗೂ ತಂದೆ ಉಜ್ವಲ್ ನಡುವೆ ಜಗಳವಾಗಿತ್ತು. ಈ ವೇಳೆ ಮಗ ತಂದೆಯನ್ನು ತಳ್ಳಿದಾಗ ಅಲ್ಲೇ ಇಟ್ಟಿದ್ದ ಕುಚಿಗೆ ತಲೆ ಹೊಡೆದುಕೊಂಡು ಪ್ರಜ್ಞೆ ತಪ್ಪಿದ್ದಾನೆ.

ಬಳಿಕ ಮಗ ತಂದೆಯ ಕತ್ತು ಹಿಸುಕಿ ಕೊಂದಿದ್ದಾನೆ. ಕೊಂದ ನಂತರ ಹೆಂಡತಿ ಮತ್ತು ಮಗ ಮೃತದೇಹವನ್ನು ಸ್ನಾನದ ಗೃಹಕ್ಕೆ ಕೊಂಡೊಯ್ದಿದ್ದಾರೆ.

ಆಮೇಲೆ ಮಗ ತನ್ನ ಕಾರ್ಪೆಂಟರಿ ಕ್ಲಾಸ್ ಕಿಟ್ಬ್ಯಾಗ್ನಿಂದ ಹೆಕ್ಸಾ (ಮಿನಿ ಗರಗಸ) ಬಳಸಿ ದೇಹವನ್ನು 6 ತುಂಡುಗಳಾಗಿ ಕತ್ತರಿಸಿ, ಮನೆಯಿಂದ ಸುಮಾರು 500 ಮೀ. ದೂರದಲ್ಲಿ ವಿವಿಧೆಡೆ ಎಸೆದು ಬಂದಿದ್ದಾನೆ. ಮಗ ಪ್ಲಾಸ್ಟಿಕ್ನಿಂದ ಸುತ್ತಿದ ದೇಹದ ಭಾಗಗಳನ್ನು 6 ಬಾರಿ ತೆಗೆದುಕೊಂಡು ಹೋಗಿ ಎಸೆದು ಬಂದಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rajastan: ನಿದ್ರಾಜನಕ ಔಷಧಿ ನೀಡಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಮೇಲೆ ರೇಪ್‌

ಕರ್ನಾಟಕದ ಮರ್ಯಾದೆ ಹಾಳು ಮಾಡಿದ್ದೀರಿ: ಸಿದ್ಧರಾಮಯ್ಯ ಸರ್ಕಾರದ ವಿರುದ್ಧ ಸೋಮಣ್ಣ ವಾಗ್ದಾಳಿ

ಹನಿಮೂನ್​ಗೆ ಹೋದ ನವಜೋಡಿ ನಾಪತ್ತೆ: ಕಮರಿನಲ್ಲಿ ಗಂಡನ ಶವ ಪತ್ತೆ, ಪತ್ನಿಗಾಗಿ ಮುಂದುವರಿದ ಹುಡುಕಾಟ

ಅರಾಂಬೈ ಬಂಧನ ಬೆನ್ನಲ್ಲೆ ಮಣಿಪುರದಲ್ಲಿ ಹಿಂಸಾಚಾರ: ಹಲವೆಡೆ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ

Karnataka weather: ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments